Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಅದ್ದೂರಿಯಾಗಿ ರಿಲೀಸ್​ ಆಯ್ತು ‘ಕುದ್ರು’ ಹಾಡು; ಈ ಚಿತ್ರದಲ್ಲಿದೆ ಕೋಲ, ಕಂಬಳ, ಯಕ್ಷಗಾನ

‘ಕುದ್ರು’ ಸಿನಿಮಾದಲ್ಲಿ ದಕ್ಷಿಣ ಕನ್ನಡದ ಸುಂದರ ಲೊಕೇಷನ್​ಗಳನ್ನು ತೋರಿಸಲಾಗುತ್ತಿದೆ. ಅಲ್ಲದೇ ಭೂತಕೋಲ, ಯಕ್ಷಗಾನ, ಕಂಬಳ ಮುಂತಾದ ಕಲೆಗಳನ್ನು ನಿರ್ದೇಶಕ ಭಾಸ್ಕರ್ ನಾಯ್ಕ್ ಅವರು ಪರಿಚಯ ಮಾಡಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳನ್ನು ದುಬೈಯಲ್ಲಿ ಬಹಳ ಗ್ರ್ಯಾಂಡ್​ ಆಗಿ ಬಿಡುಗಡೆ ಮಾಡಲಾಯಿತು. ಹರ್ಷಿತ್ ಶೆಟ್ಟಿ, ಡೈನಾ ಡಿಸೋಜ, ಪ್ರಿಯಾ ಹೆಗ್ಡೆ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ದುಬೈನಲ್ಲಿ ಅದ್ದೂರಿಯಾಗಿ ರಿಲೀಸ್​ ಆಯ್ತು ‘ಕುದ್ರು’ ಹಾಡು; ಈ ಚಿತ್ರದಲ್ಲಿದೆ ಕೋಲ, ಕಂಬಳ, ಯಕ್ಷಗಾನ
‘ಆಟಿದೊಂಜಿ ದಿನ’ ಸಮಾರಂಭದಲ್ಲಿ ‘ಕುದ್ರು’ ಸಾಂಗ್ಸ್​ ಬಿಡುಗಡೆ
Follow us
ಮದನ್​ ಕುಮಾರ್​
|

Updated on: Aug 28, 2023 | 10:30 PM

ಕರ್ನಾಟಕದ ಸಿನಿಮಾಗಳು ವಿಶ್ವಾದ್ಯಂತ ಸದ್ದು ಮಾಡುತ್ತಿವೆ. ಇಂಥ ಸಂದರ್ಭದಲ್ಲಿ ವಿಶೇಷವಾದ ರೀತಿಯಲ್ಲಿ ಪ್ರಮೋಷನ್​ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಚಿತ್ರತಂಡಗಳು ಬೇರೆ ಬೇರೆ ಪ್ರಯತ್ನ ನಡೆಸಿವೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ‘ಕುದ್ರು’ ಸಿನಿಮಾ (Kudru Movie). ಕೆಲವೇ ದಿನಗಳ ಹಿಂದೆ ದುಬೈಯಲ್ಲಿ ಅದ್ದೂರಿಯಾಗಿ ಆಟಿದೊಂಜಿ ದಿನ (Aatidonji Dina) ಸಮಾರಂಭ ನಡೆಯಿತು. ಈ ವೇಳೆ ‘ಕುದ್ರು’ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಈ ಸಿನಿಮಾದ ನಿರ್ದೇಶಕ, ಕಥೆಗಾರ ಮತ್ತು ನಿರ್ಮಾಪಕರಾದ ಭಾಸ್ಕರ್ ನಾಯ್ಕ್, ಚಿತ್ರದ ಹೀರೋ ಹರ್ಷಿತ್ ಶೆಟ್ಟಿ, ನಾಯಕಿರಾದ ಡೈನಾ ಡಿಸೋಜ, ಪ್ರಿಯಾ ಹೆಗ್ಡೆ ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಮಾರಂಭಕ್ಕೆ ಬಂದ ಅತಿಥಿಗಳನ್ನು ಶ್ರೀಮತಿ ಸಂಧ್ಯಾ ಪ್ರಸಾದ್ ಅವರು ಪುಷ್ಪಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ದಕ್ಷಿಣ ಕನ್ನಡದ ಸಂಸ್ಕೃತಿ ಬಹಳ ವಿಶಿಷ್ಠವಾದದ್ದು. ಅದನ್ನು ಎತ್ತಿ ಹಿಡಿಯುವ ಆಚರಣೆಯೇ ಆಟಿದೊಂಜಿ ದಿನ. ಯುಎಇನಲ್ಲಿ ದಕ್ಷಿಣ ಕನ್ನಡದ ಸಂಸ್ಕೃತಿಯನ್ನು ಪರಿಚಯಿಸುವ ಈ ಹಬ್ಬದಾಚರಣೆ ಎಲ್ಲರ ಮನಸ್ಸು ಗೆದ್ದಿದೆ. ಇದೇ ಸಮಾರಂಭದಲ್ಲಿ ‘ಕುದ್ರು’ ಚಿತ್ರದ ಶೀರ್ಷಿಕೆ ಗೀತೆ ಮತ್ತು ಫೇರ್ವೆಲ್ ಪಾರ್ಟಿ ಹಾಡನ್ನು ರಿಲೀಸ್​ ಮಾಡಿರುವುದು ವಿಶೇಷ. ನಮ್ರಿತಾ ಮಲ್ಲ ಅವರು ಈ ಹಾಡುಗಳಿಗೆ ಡ್ಯಾನ್ಸ್​ ಮಾಡಿದರು.

ಇದನ್ನೂ ಓದಿ: ದೀವಟಿಗೆಯ ಬೆಳಕಿನಲ್ಲಿ ಭೂತಕೋಲ ಆಚರಣೆ, ಕುಣಿದು ಕುಪ್ಪಳಿಸಿ ಭಕ್ತರನ್ನು ಹರಸಿದ ದೈವಗಳು

ವಿಶೇಷ ಏನೆಂದರೆ, ‘ಕುದ್ರು’ ಸಿನಿಮಾದಲ್ಲಿ ದಕ್ಷಿಣ ಕನ್ನಡದ ಸುಂದರ ಲೊಕೇಷನ್​ಗಳನ್ನು ತೋರಿಸಲಾಗುತ್ತಿದೆ. ಅಲ್ಲದೇ ಭೂತಕೋಲ, ಯಕ್ಷಗಾನ, ಕಂಬಳ ಮುಂತಾದ ಕಲೆಗಳನ್ನು ನಿರ್ದೇಶಕ ಭಾಸ್ಕರ್ ನಾಯ್ಕ್ ಅವರು ಪರಿಚಯ ಮಾಡಿಸಿದ್ದಾರೆ. ಪ್ರವೀಣ್ ಶೆಟ್ಟಿ, ಡಾ. ಡೇವಿಡ್ ಫ್ರಾಂಕ್ ಫರ್ನಾಂಡಿಸ್, ಜೋಸೆಫ್ ಮತಾಯಸ್ ಅವರು ‘ಕುದ್ರು’ ಸಿನಿಮಾದ ಗೀತೆಗಳನ್ನು ರಿಲೀಸ್​ ಮಾಡಿದರು. ಸುಹೈಲ್ ಕುದ್ರೋಳಿ, ಗುರೂಜಿ ಹರೀಶ್, ಶೋಧನ್ ಪ್ರಸಾದ್ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ: ‘ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತೆ ಅಂತ ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ’: ನಟ ಚೇತನ್​ ತಕರಾರು

‘ಕುದ್ರು’ ಸಿನಿಮಾ ಬಗ್ಗೆ ನಿರ್ದೇಶಕ ಭಾಸ್ಕರ್ ನಾಯ್ಕ್ ಮಾಹಿತಿ ನೀಡಿದ್ದಾರೆ. ‘ಇದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಒಂದು ಸಿನಿಮಾ. ಆಯಿಲ್ ರಿಗ್​ನಲ್ಲಿ ಚಿತ್ರೀಕರಣ ಮಾಡಿದ ಭಾರತದ ಮೊದಲ ಸಿನಿಮಾ ನಮ್ಮದು’ ಎಂದು ಹೇಳುವ ಮೂಲಕ UAE ಪ್ರೇಕ್ಷಕರಲ್ಲೂ ಸಿನಿಮಾ ಬಗ್ಗೆ ಅವರು ಕುತೂಹಲ ಮೂಡಿಸಿದ್ದಾರೆ. ಸಿನಿಮಾದಲ್ಲಿ ನಟಿಸಿರುವ ಪ್ರಿಯ ಹೆಗ್ಡೆ, ಹರ್ಷಿತ್ ಶೆಟ್ಟಿ ಮತ್ತು ಡೈನಾ ಡಿಸೋಜಾ ಅವರು ತಮ್ಮ ಪಾತ್ರದ ಮಾಹಿತಿ ನೀಡಿದರು. ಅಲ್ಲದೇ ಸಿನಿಮಾ ಕರಿತು ಅನುಭವ ತಿಳಿಸಿದರು. ರೊನಾಲ್ಡ್ ಒಲಿವೆರಾ ಅವರು ಈ ಸಮಾರಂಭದ ನಿರ್ವಹಣೆ ಮಾಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ