AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಕುಂಭಮೇಳ ಮೊನಲಿಸ: ನಾಯಕ ಯಾರು?

Kumbha Mela Monalisa: ಇಂಟರ್ನೆಟ್ ಎಂಬುದು ಎಲ್ಲೋ ಇದ್ದವರನ್ನು ದೊಡ್ಡ ಎತ್ತರಕ್ಕೆ ಏರಿಸಿಬಿಡುತ್ತದೆ. ಭಿಕ್ಷೆ ಬೇಡುತ್ತಿದ್ದ ರಾನು ಮಂಡಲ್ ಹಿನ್ನೆಲೆ ಗಾಯಕಿ ಆದರು, ಅಂತೆಯೇ ಕುಂಭ ಮೇಳದಲ್ಲಿ ಹಾರಗಳನ್ನು ಮಾರುತ್ತಿದ್ದ ಯುವತಿ ಈಗ ಸೆಲೆಬ್ರಿಟಿ ಆಗಿದ್ದಾರೆ ಅವರೇ ಕುಂಭಮೇಳ ಮೊನಲಿಸಾ. ಇದೀಗ ಈ ಕುಂಭಮೇಳ ಮೊನಲಿಸ ತೆಲುಗು ಸಿನಿಮಾನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಕುಂಭಮೇಳ ಮೊನಲಿಸ: ನಾಯಕ ಯಾರು?
Kumbha Mela Monalisa
ಮಂಜುನಾಥ ಸಿ.
|

Updated on: Nov 06, 2025 | 8:50 AM

Share

ಸಾಮಾಜಿಕ ಜಾಲತಾಣದ (Social Media) ಶಕ್ತಿಯೇ ಅಂಥಹದ್ದು ಯಾರನ್ನು ಬೇಕಾದರೂ ಒಂದೇ ದಿನದಲ್ಲಿ ಸ್ಟಾರ್ ಆನ್ನಾಗಿ ಮಾಡುತ್ತದೆ. ಎಂಥೆಂಥಹವರ ಜೀವನವನ್ನೇ ಬದಲಾಯಿಸಿಬಿಟ್ಟಿದೆ ಈ ಸಾಮಾಜಿಕ ಜಾಲತಾಣ. ಟೀ ಮಾರುತಿದ್ದವನು ಕೋಟ್ಯಧೀಶನನ್ನಾಗಿ ಮಾಡಿದೆ, ಲಾರಿ ಓಡಿಸುತ್ತಿದ್ದವ ಲಕ್ಷಾಧೀಶ್ವರನಾಗಿದ್ದಾನೆ, ಭಿಕ್ಷೆ ಬೇಡುತ್ತಿದ್ದ ರಾನು ಮಂಡಲ್ ಹಿನ್ನೆಲೆ ಗಾಯಕಿ ಆಗಿದ್ದಾಳೆ ಹೀಗೆ ಹೇಳುತ್ತಾ ಹೋದರೆ ಹಲವು ಉದಾಹರಣೆಗಳಿವೆ. ಅದರಲ್ಲಿ ಒಂದು ಕುಂಭಮೇಳ ಮೋನಲಿಸ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಯುವತಿಯ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ ಆಕೆ ಸೆಲೆಬ್ರಿಟಿ ಆಗಿದ್ದು, ಇದೀಗ ನೆರೆಯ ತೆಲುಗು ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ.

ಕುಂಭಮೇಳ ಮೊನಲಿಸ ಇದೀಗ ತೆಲುಗು ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ತೆಲುಗಿನ ‘ಲೈಫ್’ ಹೆಸರಿನ ಸಿನಿಮಾನಲ್ಲಿ ಕುಂಭಮೇಳ ಮೊನಲಿಸ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಸಾಯಿ ಚರಣ್ ನಾಯಕ. ಶ್ರೀನು ಕೋಟಪೇಟಿ ನಿರ್ದೇಶನ ಮಾಡುತ್ತಿದ್ದಾರೆ. ವಂಗಮಾಂಬ ಕ್ರಿಯೇಶನ್ಸ್ ಮೂಲಕ ಸಿನಿಮಾದ ನಿರ್ಮಾಣ ಮಾಡಲಾಗುತ್ತಿದ್ದಾರೆ ನಿರ್ಮಾಪಕ ಅಂಜಯ್ಯ. ನಿನ್ನೆಯಷ್ಟೆ ಸಿನಿಮಾದ ಮುಹೂರ್ತ ಹೈದರಾಬಾದ್​​ನ ಪ್ರಸಾದ್ ಲ್ಯಾಬ್ಸ್​​ನಲ್ಲಿ ನಡೆದಿದ್ದು, ಮೊನಲಿಸಾ ಹಾಗೂ ನಾಯಕ ಸಾಯಿ ಚರಣ್ ಅವರ ಓಪನಿಂಗ್ ಶಾಟ್​​ಗಳ ಚಿತ್ರೀಕರಣ ಸಹ ಮಾಡಲಾಗಿದೆ.

ಇದನ್ನೂ ಓದಿ:ಘೋಷಣೆ ಆಗಿಯೇ ಬಿಡ್ತು ರಜನಿ-ಕಮಲ್ ಸಿನಿಮಾ, ಆದರೆ ಒಂದು ಟ್ವಿಸ್ಟ್

ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಮೊನಲಿಸಾ, ‘ಹೈದರಾಬಾದ್​​ಗೆ ಬಂದಿರುವುದು ಮತ್ತು ತೆಲುಗು ಸಿನಿಮಾನಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ಬಹಳ ಖುಷಿಯಾಗಿದೆ. ‘ಲೈಫ್’ ಸಿನಿಮಾ ಈ ಸಿನಿಮಾನಲ್ಲಿ ಕೆಲಸ ಮಾಡಿರುವ ಎಲ್ಲರಿಗೂ ಲೈಫ್ ನೀಡಲಿದೆ ಎಂಬ ವಿಶ್ವಾಸ ನನಗೆ ಇದೆ. ಈಗ ನನಗೆ ತೆಲುಗು ಬರುವುದಿಲ್ಲ ಆದರೆ ಸಿನಿಮಾ ಮುಗಿಯುವ ವೇಳೆಗೆ ತೆಲುಗು ಕಲಿಯುವ ವಿಶ್ವಾಸವಿದೆ. ಅವಕಾಶ ನೀಡಿದ ನಿರ್ಮಾಪಕರು, ನಿರ್ದೇಶಕರಿಗೆ ಧನ್ಯವಾದ’ ಎಂದಿದ್ದಾರೆ.

ಮಧ್ಯ ಪ್ರದೇಶದ ಇಂಧೋರದ ಮೋನಲಿಸ ಭೋಸ್ಲೆ ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ, ಜಪಮಾಲೆ, ಹೂವು ಮಾರಾಟ ಮಾಡುತ್ತಿದ್ದರು. ಕುಂಭಮೇಳಕ್ಕೆ ಭೇಟಿ ನೀಡಿದ ಫೋಟೊಗ್ರಾಫರ್ ಒಬ್ಬರು ಇವರ ಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇ ತಡ ಆ ಚಿತ್ರ ವೈರಲ್ ಆಯ್ತು. ಇವರ ಅಂದಕ್ಕೆ ಜನ ಮಾರುಹೋದರು. ಮೊನಲಿಸ ಭೋಂಸ್ಲೆಗೆ ಕುಂಭಮೇಳ ಮೊನಲಿಸ ಎಂಬ ಹೆಸರು ಬಿತ್ತು. ಚಿತ್ರ ವೈರಲ್ ಆದ ಬೆನ್ನಲ್ಲೆ ಮೊನಲಿಸ ಸೆಲೆಬ್ರಿಟಿ ಆದರು. ಈಗ ದೇಶದಾದ್ಯಂತ ಹಲವು ಖಾಸಗಿ ಇವೆಂಟ್​ಗಳಲ್ಲಿ ಭಾಗಿ ಆಗುತ್ತಾರೆ, ಅದಕ್ಕಾಗಿ ಲಕ್ಷಾಂತರ ರೂಪಾಯಿ ಹಣ ಚಾರ್ಜ್ ಮಾಡುತ್ತಾರೆ. ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಪ್ಯಾಷನ್ ಶೋಗಳಲ್ಲಿಯೂ ಭಾಗವಹಿಸುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ ಒಂದು ಹಿಂದಿ ಸಿನಿಮಾನಲ್ಲಿಯೂ ಮೊನಲಿಸ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ