Richiee Movie Song: ‘ರಿಚ್ಚಿ’ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಬಂದ ಕುನಾಲ್​ ಗಾಂಜಾವಾಲ

ಕರುನಾಡಿನಲ್ಲಿ ಕುನಾಲ್​ ಗಾಂಜಾವಾಲ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅವರೆಲ್ಲರಿಗಾಗಿ ‘ರಿಚ್ಚಿ’ ಸಿನಿಮಾದಿಂದ ಹೊಸ ಹಾಡು ರಿಲೀಸ್​ ಆಗಿದೆ.

Richiee Movie Song: ‘ರಿಚ್ಚಿ’ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಬಂದ ಕುನಾಲ್​ ಗಾಂಜಾವಾಲ
ಕುನಾಲ್ ಗಾಂಜಾವಾಲಾ, ರಿಚ್ಚಿ
Follow us
|

Updated on: May 18, 2023 | 8:02 PM

ಹೊಸ ಪ್ರತಿಭೆ ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ ‘ರಿಚ್ಚಿ’ (Richiee) ಚಿತ್ರದ ಹಾಡುಗಳಿಗೆ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ (Kunal Ganjawala) ಧ್ವನಿ ನೀಡಿದ್ದಾರೆ. ಅವರು ಹಾಡಿರುವ ‘ಕಳೆದು ಹೋಗಿರುವೆ..’ ಎಂಬ ಹಾಡು ಇತ್ತೀಚೆಗೆ ಬಿಡುಗಡೆ ಆಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದು ವಿಶೇಷವಾಗಿತ್ತು. ‘ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ ರಿಚ್ಚಿ ಅವರಿಗಾಗಿ ಬಂದಿದ್ದೇನೆ. ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ಸಾಂಗ್. ಇಂದು ಮೆಲೋಡಿ ಸಾಂಗ್ ಬಿಡುಗಡೆಯಾಗಿದೆ’ ಎಂದರು ಕುನಾಲ್​ ಗಾಂಜಾವಾಲ.

‘ಅಗಸ್ತ್ಯ ಅವರ ಸಂಗೀತ ಸಂಯೋಜನೆ ಚೆನ್ನಾಗಿದೆ. ಚಿನ್ನಿ ಪ್ರಕಾಶ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಗೌಸ್ ಪೀರ್ ಸಾಹಿತ್ಯ ಬರೆದಿದ್ದಾರೆ. ‘ರಿಚ್ಚಿ’ ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ಕುನಾಲ್ ಗಾಂಜಾವಾಲ ಹಾರೈಸಿದರು. ಈ ವೇಳೆ ಅವರು ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

‘2005ನೇ ಇಸವಿಯಲ್ಲಿ ‘ಆಕಾಶ್’ ಚಿತ್ರದ ಹಾಡು ಹಾಡಲು ಬಂದಾಗ ಡಾ. ರಾಜ್​ಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಕೈಗೊಂದು ಮುತ್ತು ಕೊಟ್ಟಿದ್ದರು. ಅದು ನನ್ನ ಜೀವನದಲ್ಲಿ ಮರೆಯಲಾಗದ ಘಟನೆ’ ಎಂದ ಕುನಾಲ್ ಗಾಂಜಾವಾಲ ಅವರು ಪುನೀತ್ ರಾಜ್​ಕುಮಾರ್ ಅವರೊಟ್ಟಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಇದನ್ನೂ ಓದಿ: Richiee Kannada Movie: ಚಂದನವನದಲ್ಲಿ ಮತ್ತೆ ಕೇಳಿಸ್ತಿದೆ ‘ರಿಚ್ಚಿ’ ಹೆಸರು; ಕುನಾಲ್​ ಗಾಂಜಾವಾಲಾ ಹಾಡಿದ ಗೀತೆಯಿಂದ ಹೆಚ್ಚಲಿದೆ ಸದ್ದು

‘ರಿಚ್ಚಿ’ ಸಿನಿಮಾದ ಬಗ್ಗೆ ನಾಯಕ ರಿಚ್ಚಿ ಮಾತನಾಡಿದ್ದಾರೆ. ‘ಇದು  ಒಂದು ಪ್ರೇಮಕಥೆಯ ಚಿತ್ರ. ನಾನು ಚಿಕ್ಕಂದಿನಿಂದಲೇ ಕುನಾಲ್ ಗಾಂಜಾವಾಲ ಅವರ ಅಭಿಮಾನಿ. ನನ್ನ ಚಿತ್ರಕ್ಕೆ ಅವರು ಹಾಡಬೇಕೆಂಬುದು ನನ್ನ ಆಸೆ. ಅದು ಈಡೇರಿದೆ. ಎರಡು ಹಾಡುಗಳನ್ನು ಅವರು ಹಾಡಿದ್ದಾರೆ. ಒಂದು ಈಗ ಬಿಡುಗಡೆಯಾಗಿದೆ. ಕನ್ನಡ ಹಾಗೂ ಹಿಂದಿಯಲ್ಲಿ ಈ ಚಿತ್ರ ಬರಲಿದೆ. ಆಗಸ್ಟ್ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ ರಿಚ್ಚಿ. ನಟಿಸುವುದರ ಜೊತೆ ನಿರ್ಮಾಪಕನಾಗಿ ಹಾಗೂ ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ

‘ರಿಚ್ಚಿ’ ಸಿನಿಮಾದ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಅವರು ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ಸಹ ನಿರ್ಮಾಪಕ ರಾಕೇಶ್ ರಾವ್, ಪ್ರಕೃತಿ ಬನವಾಸಿ, ನಿರ್ಮಾಪಕರಾದ ಅಣಜಿ ನಾಗರಾಜ್, ವೆಂಕಟೇಶ್ ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ