AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuri Prathap: ಹೊಸ ಚಿತ್ರದಲ್ಲಿ ಕುರಿ ಪ್ರತಾಪ್​ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!

Kuri Prathap: ಕನ್ನಡದಲ್ಲಿ ಕಾಮಿಡಿಯನ್​ ಆಗಿದ್ದ ನಟ ಶರಣ್ ನಂತರ ಹೀರೋ ಆಗಿದ್ದರು. ಆ ನಂತರ ಪೋಷಕ ಪಾತ್ರ ಮಾಡುವುದನ್ನು ನಿಲ್ಲಿಸಿದ್ದರು. ಆದರೆ, ಕುರಿ ಪ್ರತಾಪ್​ ಆ ರೀತಿ ಮಾಡುವುದಿಲ್ಲವಂತೆ.

Kuri Prathap: ಹೊಸ ಚಿತ್ರದಲ್ಲಿ ಕುರಿ ಪ್ರತಾಪ್​ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!
ಕುರಿ ಪ್ರತಾಪ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 3:14 PM

Share

ಕಾಮಿಡಿಯನ್​ಗಳಾಗಿ ಕಾಣಿಸಿಕೊಂಡ ನಂತರ ಹೀರೋ ಆಗುವ ಪ್ರಯತ್ನವನ್ನು ಕನ್ನಡ ಚಿತ್ರರಂಗದಲ್ಲಿ ಅನೇಕರು ಮಾಡಿದ್ದಾರೆ. ಇದರಲ್ಲಿ ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋತಿದ್ದಾರೆ. ಈಗ ಕನ್ನಡದ ಹಾಸ್ಯ ನಟ ಕುರಿ ಪ್ರತಾಪ್​ (Kuri Prathap) ಇದೇ ರೀತಿಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೀರೋ ಆಗಿ ತೆರೆಮೇಲೆ ಬರುತ್ತಿದ್ದಾರೆ. ಚಿತ್ರಕ್ಕೆ ‘ಆರ್​ಸಿ ಬ್ರದರ್’​ ಎಂದು ನಾಮಕರಣ ಮಾಡಲಾಗಿದೆ. ನಿರ್ದೇಶಕ ಪ್ರಕಾಶ್​ ಕುಮಾರ್​ ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ಕುರಿ ಪ್ರತಾಪ್​ ಜತೆ ತಬಲಾ ನಾಣಿ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ತಬಲಾ ನಾಣಿ ಅವರದ್ದು ಕುರಿ ಪ್ರತಾಪ್ ಅಣ್ಣನ ಪಾತ್ರ. ಚಿತ್ರದ ಹೆಸರೇ ಹೇಳುವಂತೆ ಇದೊಂದು ಒಡಹುಟ್ಟಿದವರ ಬಾಂಧವ್ಯದ ಕತೆ.

ಮದುವೆ ಅನ್ನೋದು.. ಈ ಸಿನಿಮಾದಲ್ಲಿ ತುಂಬಾನೇ ಪ್ರಮುಖ ಪಾತ್ರವಹಿಸಲಿದೆಯಂತೆ. ತಬಲಾ ನಾಣಿ ಮದುವೆಗೆ ಪ್ರಯತ್ನ ಪಡುತ್ತಿರುತ್ತಾರೆ. ಆದರೆ, ಹುಡುಗಿ ಸಿಕ್ಕಿರುವುದಿಲ್ಲ. ಇನ್ನು, ಕುರಿ ಪ್ರತಾಪ್​ಗೆ ಮದುವೆ ಆದರೂ ಹೆಂಡತಿಯನ್ನು ಭೇಟಿ ಮಾಡಲು ಅವಕಾಶ ಇರುವುದಿಲ್ಲ. ಇದು ಇಡೀ ಚಿತ್ರದ ಸಾರಾಂಶ. ಸಿನಿಮಾ ಸಂಪೂರ್ಣವಾಗಿ ಹಾಸ್ಯದಿಂದ ಕೂಡಿರಲಿದೆಯಂತೆ.

ಕನ್ನಡದಲ್ಲಿ ಕಾಮಿಡಿಯನ್​ ಆಗಿದ್ದ ನಟ ಶರಣ್ ನಂತರ ಹೀರೋ ಆಗಿದ್ದರು. ಆ ನಂತರ ಪೋಷಕ ಪಾತ್ರ ಮಾಡುವುದನ್ನು ನಿಲ್ಲಿಸಿದ್ದರು. ಆದರೆ, ಕುರಿ ಪ್ರತಾಪ್​ ಆ ರೀತಿ ಮಾಡುವುದಿಲ್ಲವಂತೆ. ಅವರು ಹೀರೊ ಆದರೂ ಸ್ಟಾರ್ ಹೀರೋಗಳಿಗೆ ಸಪೋರ್ಟಿಂಗ್​ ಪಾತ್ರ ಮಾಡುವುದನ್ನು ಮುಂದು ವರಿಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್​ ತಿಂಗಳಲ್ಲಿ ಸಿನಿಮಾ ಸೆಟ್ಟೇರಲಿದೆ. ಉಳಿದ ಪಾತ್ರವರ್ಗ ಇನ್ನಷ್ಟೇ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

ಇದೇ ಶುಕ್ರವಾರ ತೆರೆಗೆ ಬರುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದಲ್ಲಿ ಕುರಿ ಪ್ರತಾಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಸಿನಿಮಾದ ನಾಯಕಿ. ಈಗಾಗಲೇ ಟೀಸರ್​ ಹಾಗೂ ಹಾಡಿನ ಮೂಲಕ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ