AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuri Prathap: ಹೊಸ ಚಿತ್ರದಲ್ಲಿ ಕುರಿ ಪ್ರತಾಪ್​ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!

Kuri Prathap: ಕನ್ನಡದಲ್ಲಿ ಕಾಮಿಡಿಯನ್​ ಆಗಿದ್ದ ನಟ ಶರಣ್ ನಂತರ ಹೀರೋ ಆಗಿದ್ದರು. ಆ ನಂತರ ಪೋಷಕ ಪಾತ್ರ ಮಾಡುವುದನ್ನು ನಿಲ್ಲಿಸಿದ್ದರು. ಆದರೆ, ಕುರಿ ಪ್ರತಾಪ್​ ಆ ರೀತಿ ಮಾಡುವುದಿಲ್ಲವಂತೆ.

Kuri Prathap: ಹೊಸ ಚಿತ್ರದಲ್ಲಿ ಕುರಿ ಪ್ರತಾಪ್​ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!
ಕುರಿ ಪ್ರತಾಪ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 17, 2021 | 3:14 PM

Share

ಕಾಮಿಡಿಯನ್​ಗಳಾಗಿ ಕಾಣಿಸಿಕೊಂಡ ನಂತರ ಹೀರೋ ಆಗುವ ಪ್ರಯತ್ನವನ್ನು ಕನ್ನಡ ಚಿತ್ರರಂಗದಲ್ಲಿ ಅನೇಕರು ಮಾಡಿದ್ದಾರೆ. ಇದರಲ್ಲಿ ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋತಿದ್ದಾರೆ. ಈಗ ಕನ್ನಡದ ಹಾಸ್ಯ ನಟ ಕುರಿ ಪ್ರತಾಪ್​ (Kuri Prathap) ಇದೇ ರೀತಿಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೀರೋ ಆಗಿ ತೆರೆಮೇಲೆ ಬರುತ್ತಿದ್ದಾರೆ. ಚಿತ್ರಕ್ಕೆ ‘ಆರ್​ಸಿ ಬ್ರದರ್’​ ಎಂದು ನಾಮಕರಣ ಮಾಡಲಾಗಿದೆ. ನಿರ್ದೇಶಕ ಪ್ರಕಾಶ್​ ಕುಮಾರ್​ ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ಕುರಿ ಪ್ರತಾಪ್​ ಜತೆ ತಬಲಾ ನಾಣಿ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ತಬಲಾ ನಾಣಿ ಅವರದ್ದು ಕುರಿ ಪ್ರತಾಪ್ ಅಣ್ಣನ ಪಾತ್ರ. ಚಿತ್ರದ ಹೆಸರೇ ಹೇಳುವಂತೆ ಇದೊಂದು ಒಡಹುಟ್ಟಿದವರ ಬಾಂಧವ್ಯದ ಕತೆ.

ಮದುವೆ ಅನ್ನೋದು.. ಈ ಸಿನಿಮಾದಲ್ಲಿ ತುಂಬಾನೇ ಪ್ರಮುಖ ಪಾತ್ರವಹಿಸಲಿದೆಯಂತೆ. ತಬಲಾ ನಾಣಿ ಮದುವೆಗೆ ಪ್ರಯತ್ನ ಪಡುತ್ತಿರುತ್ತಾರೆ. ಆದರೆ, ಹುಡುಗಿ ಸಿಕ್ಕಿರುವುದಿಲ್ಲ. ಇನ್ನು, ಕುರಿ ಪ್ರತಾಪ್​ಗೆ ಮದುವೆ ಆದರೂ ಹೆಂಡತಿಯನ್ನು ಭೇಟಿ ಮಾಡಲು ಅವಕಾಶ ಇರುವುದಿಲ್ಲ. ಇದು ಇಡೀ ಚಿತ್ರದ ಸಾರಾಂಶ. ಸಿನಿಮಾ ಸಂಪೂರ್ಣವಾಗಿ ಹಾಸ್ಯದಿಂದ ಕೂಡಿರಲಿದೆಯಂತೆ.

ಕನ್ನಡದಲ್ಲಿ ಕಾಮಿಡಿಯನ್​ ಆಗಿದ್ದ ನಟ ಶರಣ್ ನಂತರ ಹೀರೋ ಆಗಿದ್ದರು. ಆ ನಂತರ ಪೋಷಕ ಪಾತ್ರ ಮಾಡುವುದನ್ನು ನಿಲ್ಲಿಸಿದ್ದರು. ಆದರೆ, ಕುರಿ ಪ್ರತಾಪ್​ ಆ ರೀತಿ ಮಾಡುವುದಿಲ್ಲವಂತೆ. ಅವರು ಹೀರೊ ಆದರೂ ಸ್ಟಾರ್ ಹೀರೋಗಳಿಗೆ ಸಪೋರ್ಟಿಂಗ್​ ಪಾತ್ರ ಮಾಡುವುದನ್ನು ಮುಂದು ವರಿಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್​ ತಿಂಗಳಲ್ಲಿ ಸಿನಿಮಾ ಸೆಟ್ಟೇರಲಿದೆ. ಉಳಿದ ಪಾತ್ರವರ್ಗ ಇನ್ನಷ್ಟೇ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

ಇದೇ ಶುಕ್ರವಾರ ತೆರೆಗೆ ಬರುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದಲ್ಲಿ ಕುರಿ ಪ್ರತಾಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಸಿನಿಮಾದ ನಾಯಕಿ. ಈಗಾಗಲೇ ಟೀಸರ್​ ಹಾಗೂ ಹಾಡಿನ ಮೂಲಕ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್