AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuri Prathap: ಹೊಸ ಚಿತ್ರದಲ್ಲಿ ಕುರಿ ಪ್ರತಾಪ್​ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!

Kuri Prathap: ಕನ್ನಡದಲ್ಲಿ ಕಾಮಿಡಿಯನ್​ ಆಗಿದ್ದ ನಟ ಶರಣ್ ನಂತರ ಹೀರೋ ಆಗಿದ್ದರು. ಆ ನಂತರ ಪೋಷಕ ಪಾತ್ರ ಮಾಡುವುದನ್ನು ನಿಲ್ಲಿಸಿದ್ದರು. ಆದರೆ, ಕುರಿ ಪ್ರತಾಪ್​ ಆ ರೀತಿ ಮಾಡುವುದಿಲ್ಲವಂತೆ.

Kuri Prathap: ಹೊಸ ಚಿತ್ರದಲ್ಲಿ ಕುರಿ ಪ್ರತಾಪ್​ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!
ಕುರಿ ಪ್ರತಾಪ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 17, 2021 | 3:14 PM

Share

ಕಾಮಿಡಿಯನ್​ಗಳಾಗಿ ಕಾಣಿಸಿಕೊಂಡ ನಂತರ ಹೀರೋ ಆಗುವ ಪ್ರಯತ್ನವನ್ನು ಕನ್ನಡ ಚಿತ್ರರಂಗದಲ್ಲಿ ಅನೇಕರು ಮಾಡಿದ್ದಾರೆ. ಇದರಲ್ಲಿ ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋತಿದ್ದಾರೆ. ಈಗ ಕನ್ನಡದ ಹಾಸ್ಯ ನಟ ಕುರಿ ಪ್ರತಾಪ್​ (Kuri Prathap) ಇದೇ ರೀತಿಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೀರೋ ಆಗಿ ತೆರೆಮೇಲೆ ಬರುತ್ತಿದ್ದಾರೆ. ಚಿತ್ರಕ್ಕೆ ‘ಆರ್​ಸಿ ಬ್ರದರ್’​ ಎಂದು ನಾಮಕರಣ ಮಾಡಲಾಗಿದೆ. ನಿರ್ದೇಶಕ ಪ್ರಕಾಶ್​ ಕುಮಾರ್​ ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ಕುರಿ ಪ್ರತಾಪ್​ ಜತೆ ತಬಲಾ ನಾಣಿ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ತಬಲಾ ನಾಣಿ ಅವರದ್ದು ಕುರಿ ಪ್ರತಾಪ್ ಅಣ್ಣನ ಪಾತ್ರ. ಚಿತ್ರದ ಹೆಸರೇ ಹೇಳುವಂತೆ ಇದೊಂದು ಒಡಹುಟ್ಟಿದವರ ಬಾಂಧವ್ಯದ ಕತೆ.

ಮದುವೆ ಅನ್ನೋದು.. ಈ ಸಿನಿಮಾದಲ್ಲಿ ತುಂಬಾನೇ ಪ್ರಮುಖ ಪಾತ್ರವಹಿಸಲಿದೆಯಂತೆ. ತಬಲಾ ನಾಣಿ ಮದುವೆಗೆ ಪ್ರಯತ್ನ ಪಡುತ್ತಿರುತ್ತಾರೆ. ಆದರೆ, ಹುಡುಗಿ ಸಿಕ್ಕಿರುವುದಿಲ್ಲ. ಇನ್ನು, ಕುರಿ ಪ್ರತಾಪ್​ಗೆ ಮದುವೆ ಆದರೂ ಹೆಂಡತಿಯನ್ನು ಭೇಟಿ ಮಾಡಲು ಅವಕಾಶ ಇರುವುದಿಲ್ಲ. ಇದು ಇಡೀ ಚಿತ್ರದ ಸಾರಾಂಶ. ಸಿನಿಮಾ ಸಂಪೂರ್ಣವಾಗಿ ಹಾಸ್ಯದಿಂದ ಕೂಡಿರಲಿದೆಯಂತೆ.

ಕನ್ನಡದಲ್ಲಿ ಕಾಮಿಡಿಯನ್​ ಆಗಿದ್ದ ನಟ ಶರಣ್ ನಂತರ ಹೀರೋ ಆಗಿದ್ದರು. ಆ ನಂತರ ಪೋಷಕ ಪಾತ್ರ ಮಾಡುವುದನ್ನು ನಿಲ್ಲಿಸಿದ್ದರು. ಆದರೆ, ಕುರಿ ಪ್ರತಾಪ್​ ಆ ರೀತಿ ಮಾಡುವುದಿಲ್ಲವಂತೆ. ಅವರು ಹೀರೊ ಆದರೂ ಸ್ಟಾರ್ ಹೀರೋಗಳಿಗೆ ಸಪೋರ್ಟಿಂಗ್​ ಪಾತ್ರ ಮಾಡುವುದನ್ನು ಮುಂದು ವರಿಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್​ ತಿಂಗಳಲ್ಲಿ ಸಿನಿಮಾ ಸೆಟ್ಟೇರಲಿದೆ. ಉಳಿದ ಪಾತ್ರವರ್ಗ ಇನ್ನಷ್ಟೇ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

ಇದೇ ಶುಕ್ರವಾರ ತೆರೆಗೆ ಬರುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದಲ್ಲಿ ಕುರಿ ಪ್ರತಾಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಸಿನಿಮಾದ ನಾಯಕಿ. ಈಗಾಗಲೇ ಟೀಸರ್​ ಹಾಗೂ ಹಾಡಿನ ಮೂಲಕ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ.

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು