AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ

2019ರಲ್ಲಿ ತೆರೆಗೆ ಬಂದ ‘ಕುರುಕ್ಷೇತ್ರ’  ಸಿನಿಮಾದಲ್ಲಿ ದರ್ಶನ್​ ಅವರು ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಾಗಣ್ಣ ನಿರ್ದೇಶನದ ಈ ಸಿನಿಮಾಗೆ ಮುನಿರತ್ನ ಅವರು ಬಂಡವಾಳ ಹೂಡಿದ್ದರು.

‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ
‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ
TV9 Web
| Edited By: |

Updated on: Jul 21, 2021 | 4:00 PM

Share

ನಟ ದರ್ಶನ್​ ಇತ್ತೀಚೆಗೆ ಸಾಕಷ್ಟು ವಿವಾದಗಳಿಗೆ ತುತ್ತಾಗಿದ್ದಾರೆ. ಅವರು ಸಾಕಷ್ಟು ಜನರ ಮೆಲೆ ಕೋಪಗೊಂಡಿದ್ದೂ ಇದೆ. ಈ ಸಿಟ್ಟಿಗೆ ದರ್ಶನ್​ ಮಾಡಿದ ದುರ್ಯೋಧನನ ಪಾತ್ರವೇ ಕಾರಣವಂತೆ! ಮಂಡ್ಯ ತಾಲೂಕಿನ ಉಪ್ಪರಕನಹಳ್ಳಿ  ಗ್ರಾಮಸ್ಥರು ಹೀಗೊಂದು ಅಭಿಪ್ರಾಯ ಪಟ್ಟಿದ್ದಾರೆ.

2019ರಲ್ಲಿ ತೆರೆಗೆ ಬಂದ ‘ಕುರುಕ್ಷೇತ್ರ’  ಸಿನಿಮಾದಲ್ಲಿ ದರ್ಶನ್​ ಅವರು ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಾಗಣ್ಣ ನಿರ್ದೇಶನದ ಈ ಸಿನಿಮಾಗೆ ಮುನಿರತ್ನ ಅವರು ಬಂಡವಾಳ ಹೂಡಿದ್ದರು. ಈ ದುರ್ಯೋಧನನ ಪಾತ್ರ ದರ್ಶನ್​ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿದೆ ಅನ್ನೋದು ಗ್ರಾಮಸ್ಥರ ಅಭಿಪ್ರಾಯ.

‘ದುರ್ಯೋಧನನ ಪಾತ್ರ ಮಾಡಿದವರಿಗೆ ಅಹಂ ಭಾವ ಜಾಸ್ತಿಯಾಗುತ್ತದೆ. ಆ ಪಾತ್ರ ಮಾಡಿದವರು ಯಾರ ಮಾತನ್ನೂ ಕೇಳೋದಿಲ್ಲ. ಅವರು ಹೇಳಿದ್ದೇ ನಡೆಯಬೇಕು, ಅವರು ಹೇಳಿದ್ದೇ ಸರಿ ಅನ್ನುತ್ತಾರೆ. ನಮ್ಮ ಗ್ರಾಮದಲ್ಲಿ ದುರ್ಯೋಧನನ ಪಾತ್ರ ಮಾಡಿದ ಮೂವರು ಸಂಕಷ್ಟಕ್ಕೆ ಸಿಲುಕಿದ್ದರು. ಬಳಿಕ ಬೇರೆ ಪಾತ್ರ ಮಾಡಿದಮೇಲೆ ಸಂಕಷ್ಟ ನಿವಾರಣೆ ಆಯ್ತು’ ಎನ್ನುತ್ತಾರೆ ಈ ಗ್ರಾಮದವರು.

ಕಳೆದ ಹಲವು ವರ್ಷಗಳ ಹಿಂದೆ ಈ ಗ್ರಾಮದ ಚೌಡೇಗೌಡ, ಮಹಾದೇವಪ್ಪ ಹಾಗೂ ನಾಗರಾಜು ಎಂಬುವವರು ನಾಟಕದಲ್ಲಿ ದುರ್ಯೊಧನನ ಪಾತ್ರ ಮಾಡಿದ್ದರು. ಅಚ್ಚರಿ ಎಂಬಂತೆ, ನಾಟಕ ಮಾಡಿದ ನಂತರವೂ ಅವರಲ್ಲಿ ದುರ್ಯೋಧನನ ಗುಣ ಹೋಗಿರಲಿಲ್ಲ. ‘ನಮ್ಮಲ್ಲಿ ಅಹಂ ಭಾವ ಹೆಚ್ಚಾಗಿತ್ತು. ಈ ಗುಣದಿಂದ ನಮ್ಮ ಜೀವನದಲ್ಲಿ ಸಾಕಷ್ಟು ತೊಂದರೆಗಳು ಉಂಟಾದವು. ಬೇರೆ ಪೌರಾಣಿಕ ಪಾತ್ರಗಳನ್ನು ಮಾಡಿದ ಮೇಲೆ ನಮ್ಮ ಮನಸ್ಥಿತಿ ಸರಿ ಆಯಿತು. ಬದುಕು ಸುಧಾರಿಸಿತು. ಈಗ ನಟ ದರ್ಶನ್​​ಗೂ ಅದೇ ಆಗಿದೆ. ಅವರು ಕುರುಕ್ಷೇತ್ರ ಸಿನಿಮಾ‌ದಲ್ಲಿ ದುರ್ಯೋಧನನ‌ ಪಾತ್ರ ಮಾಡಿದ್ದಾರೆ. ಪಾತ್ರದ ಛಾಯೆ ಅವರ ಮೇಲಿರುವುದರಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಬೇರೆ ಪೌರಾಣಿಕ ಪಾತ್ರ ಮಾಡಿದರೆ ಅವರಲ್ಲಿ ಬದಲಾವಣೆ ಆಗಲಿದೆ’ ಎನ್ನುತ್ತಾರೆ ಈ ಪಾತ್ರ ಮಾಡಿದವರು.

ಇದನ್ನೂ ಓದಿ: ವಂಚನೆ ಪ್ರಕರಣದ ಮೂಲ ಅರಿಯಲು ಕೈ ಜೋಡಿಸಿದರಾ ದರ್ಶನ್- ಉಮಾಪತಿ?

‘ದರ್ಶನ್​-ಇಂದ್ರಜಿತ್​ರನ್ನು ಐದು ವರ್ಷ ಚಿತ್ರರಂಗದಿಂದ ಬ್ಯಾನ್​ ಮಾಡಿ’; ಕೇಳಿ ಬಂತು ಹೊಸ ಆಗ್ರಹ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?