‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ

2019ರಲ್ಲಿ ತೆರೆಗೆ ಬಂದ ‘ಕುರುಕ್ಷೇತ್ರ’  ಸಿನಿಮಾದಲ್ಲಿ ದರ್ಶನ್​ ಅವರು ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಾಗಣ್ಣ ನಿರ್ದೇಶನದ ಈ ಸಿನಿಮಾಗೆ ಮುನಿರತ್ನ ಅವರು ಬಂಡವಾಳ ಹೂಡಿದ್ದರು.

‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ
‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 21, 2021 | 4:00 PM

ನಟ ದರ್ಶನ್​ ಇತ್ತೀಚೆಗೆ ಸಾಕಷ್ಟು ವಿವಾದಗಳಿಗೆ ತುತ್ತಾಗಿದ್ದಾರೆ. ಅವರು ಸಾಕಷ್ಟು ಜನರ ಮೆಲೆ ಕೋಪಗೊಂಡಿದ್ದೂ ಇದೆ. ಈ ಸಿಟ್ಟಿಗೆ ದರ್ಶನ್​ ಮಾಡಿದ ದುರ್ಯೋಧನನ ಪಾತ್ರವೇ ಕಾರಣವಂತೆ! ಮಂಡ್ಯ ತಾಲೂಕಿನ ಉಪ್ಪರಕನಹಳ್ಳಿ  ಗ್ರಾಮಸ್ಥರು ಹೀಗೊಂದು ಅಭಿಪ್ರಾಯ ಪಟ್ಟಿದ್ದಾರೆ.

2019ರಲ್ಲಿ ತೆರೆಗೆ ಬಂದ ‘ಕುರುಕ್ಷೇತ್ರ’  ಸಿನಿಮಾದಲ್ಲಿ ದರ್ಶನ್​ ಅವರು ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಾಗಣ್ಣ ನಿರ್ದೇಶನದ ಈ ಸಿನಿಮಾಗೆ ಮುನಿರತ್ನ ಅವರು ಬಂಡವಾಳ ಹೂಡಿದ್ದರು. ಈ ದುರ್ಯೋಧನನ ಪಾತ್ರ ದರ್ಶನ್​ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿದೆ ಅನ್ನೋದು ಗ್ರಾಮಸ್ಥರ ಅಭಿಪ್ರಾಯ.

‘ದುರ್ಯೋಧನನ ಪಾತ್ರ ಮಾಡಿದವರಿಗೆ ಅಹಂ ಭಾವ ಜಾಸ್ತಿಯಾಗುತ್ತದೆ. ಆ ಪಾತ್ರ ಮಾಡಿದವರು ಯಾರ ಮಾತನ್ನೂ ಕೇಳೋದಿಲ್ಲ. ಅವರು ಹೇಳಿದ್ದೇ ನಡೆಯಬೇಕು, ಅವರು ಹೇಳಿದ್ದೇ ಸರಿ ಅನ್ನುತ್ತಾರೆ. ನಮ್ಮ ಗ್ರಾಮದಲ್ಲಿ ದುರ್ಯೋಧನನ ಪಾತ್ರ ಮಾಡಿದ ಮೂವರು ಸಂಕಷ್ಟಕ್ಕೆ ಸಿಲುಕಿದ್ದರು. ಬಳಿಕ ಬೇರೆ ಪಾತ್ರ ಮಾಡಿದಮೇಲೆ ಸಂಕಷ್ಟ ನಿವಾರಣೆ ಆಯ್ತು’ ಎನ್ನುತ್ತಾರೆ ಈ ಗ್ರಾಮದವರು.

ಕಳೆದ ಹಲವು ವರ್ಷಗಳ ಹಿಂದೆ ಈ ಗ್ರಾಮದ ಚೌಡೇಗೌಡ, ಮಹಾದೇವಪ್ಪ ಹಾಗೂ ನಾಗರಾಜು ಎಂಬುವವರು ನಾಟಕದಲ್ಲಿ ದುರ್ಯೊಧನನ ಪಾತ್ರ ಮಾಡಿದ್ದರು. ಅಚ್ಚರಿ ಎಂಬಂತೆ, ನಾಟಕ ಮಾಡಿದ ನಂತರವೂ ಅವರಲ್ಲಿ ದುರ್ಯೋಧನನ ಗುಣ ಹೋಗಿರಲಿಲ್ಲ. ‘ನಮ್ಮಲ್ಲಿ ಅಹಂ ಭಾವ ಹೆಚ್ಚಾಗಿತ್ತು. ಈ ಗುಣದಿಂದ ನಮ್ಮ ಜೀವನದಲ್ಲಿ ಸಾಕಷ್ಟು ತೊಂದರೆಗಳು ಉಂಟಾದವು. ಬೇರೆ ಪೌರಾಣಿಕ ಪಾತ್ರಗಳನ್ನು ಮಾಡಿದ ಮೇಲೆ ನಮ್ಮ ಮನಸ್ಥಿತಿ ಸರಿ ಆಯಿತು. ಬದುಕು ಸುಧಾರಿಸಿತು. ಈಗ ನಟ ದರ್ಶನ್​​ಗೂ ಅದೇ ಆಗಿದೆ. ಅವರು ಕುರುಕ್ಷೇತ್ರ ಸಿನಿಮಾ‌ದಲ್ಲಿ ದುರ್ಯೋಧನನ‌ ಪಾತ್ರ ಮಾಡಿದ್ದಾರೆ. ಪಾತ್ರದ ಛಾಯೆ ಅವರ ಮೇಲಿರುವುದರಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಬೇರೆ ಪೌರಾಣಿಕ ಪಾತ್ರ ಮಾಡಿದರೆ ಅವರಲ್ಲಿ ಬದಲಾವಣೆ ಆಗಲಿದೆ’ ಎನ್ನುತ್ತಾರೆ ಈ ಪಾತ್ರ ಮಾಡಿದವರು.

ಇದನ್ನೂ ಓದಿ: ವಂಚನೆ ಪ್ರಕರಣದ ಮೂಲ ಅರಿಯಲು ಕೈ ಜೋಡಿಸಿದರಾ ದರ್ಶನ್- ಉಮಾಪತಿ?

‘ದರ್ಶನ್​-ಇಂದ್ರಜಿತ್​ರನ್ನು ಐದು ವರ್ಷ ಚಿತ್ರರಂಗದಿಂದ ಬ್ಯಾನ್​ ಮಾಡಿ’; ಕೇಳಿ ಬಂತು ಹೊಸ ಆಗ್ರಹ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ