AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ

2019ರಲ್ಲಿ ತೆರೆಗೆ ಬಂದ ‘ಕುರುಕ್ಷೇತ್ರ’  ಸಿನಿಮಾದಲ್ಲಿ ದರ್ಶನ್​ ಅವರು ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಾಗಣ್ಣ ನಿರ್ದೇಶನದ ಈ ಸಿನಿಮಾಗೆ ಮುನಿರತ್ನ ಅವರು ಬಂಡವಾಳ ಹೂಡಿದ್ದರು.

‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ
‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ
TV9 Web
| Edited By: |

Updated on: Jul 21, 2021 | 4:00 PM

Share

ನಟ ದರ್ಶನ್​ ಇತ್ತೀಚೆಗೆ ಸಾಕಷ್ಟು ವಿವಾದಗಳಿಗೆ ತುತ್ತಾಗಿದ್ದಾರೆ. ಅವರು ಸಾಕಷ್ಟು ಜನರ ಮೆಲೆ ಕೋಪಗೊಂಡಿದ್ದೂ ಇದೆ. ಈ ಸಿಟ್ಟಿಗೆ ದರ್ಶನ್​ ಮಾಡಿದ ದುರ್ಯೋಧನನ ಪಾತ್ರವೇ ಕಾರಣವಂತೆ! ಮಂಡ್ಯ ತಾಲೂಕಿನ ಉಪ್ಪರಕನಹಳ್ಳಿ  ಗ್ರಾಮಸ್ಥರು ಹೀಗೊಂದು ಅಭಿಪ್ರಾಯ ಪಟ್ಟಿದ್ದಾರೆ.

2019ರಲ್ಲಿ ತೆರೆಗೆ ಬಂದ ‘ಕುರುಕ್ಷೇತ್ರ’  ಸಿನಿಮಾದಲ್ಲಿ ದರ್ಶನ್​ ಅವರು ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಾಗಣ್ಣ ನಿರ್ದೇಶನದ ಈ ಸಿನಿಮಾಗೆ ಮುನಿರತ್ನ ಅವರು ಬಂಡವಾಳ ಹೂಡಿದ್ದರು. ಈ ದುರ್ಯೋಧನನ ಪಾತ್ರ ದರ್ಶನ್​ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿದೆ ಅನ್ನೋದು ಗ್ರಾಮಸ್ಥರ ಅಭಿಪ್ರಾಯ.

‘ದುರ್ಯೋಧನನ ಪಾತ್ರ ಮಾಡಿದವರಿಗೆ ಅಹಂ ಭಾವ ಜಾಸ್ತಿಯಾಗುತ್ತದೆ. ಆ ಪಾತ್ರ ಮಾಡಿದವರು ಯಾರ ಮಾತನ್ನೂ ಕೇಳೋದಿಲ್ಲ. ಅವರು ಹೇಳಿದ್ದೇ ನಡೆಯಬೇಕು, ಅವರು ಹೇಳಿದ್ದೇ ಸರಿ ಅನ್ನುತ್ತಾರೆ. ನಮ್ಮ ಗ್ರಾಮದಲ್ಲಿ ದುರ್ಯೋಧನನ ಪಾತ್ರ ಮಾಡಿದ ಮೂವರು ಸಂಕಷ್ಟಕ್ಕೆ ಸಿಲುಕಿದ್ದರು. ಬಳಿಕ ಬೇರೆ ಪಾತ್ರ ಮಾಡಿದಮೇಲೆ ಸಂಕಷ್ಟ ನಿವಾರಣೆ ಆಯ್ತು’ ಎನ್ನುತ್ತಾರೆ ಈ ಗ್ರಾಮದವರು.

ಕಳೆದ ಹಲವು ವರ್ಷಗಳ ಹಿಂದೆ ಈ ಗ್ರಾಮದ ಚೌಡೇಗೌಡ, ಮಹಾದೇವಪ್ಪ ಹಾಗೂ ನಾಗರಾಜು ಎಂಬುವವರು ನಾಟಕದಲ್ಲಿ ದುರ್ಯೊಧನನ ಪಾತ್ರ ಮಾಡಿದ್ದರು. ಅಚ್ಚರಿ ಎಂಬಂತೆ, ನಾಟಕ ಮಾಡಿದ ನಂತರವೂ ಅವರಲ್ಲಿ ದುರ್ಯೋಧನನ ಗುಣ ಹೋಗಿರಲಿಲ್ಲ. ‘ನಮ್ಮಲ್ಲಿ ಅಹಂ ಭಾವ ಹೆಚ್ಚಾಗಿತ್ತು. ಈ ಗುಣದಿಂದ ನಮ್ಮ ಜೀವನದಲ್ಲಿ ಸಾಕಷ್ಟು ತೊಂದರೆಗಳು ಉಂಟಾದವು. ಬೇರೆ ಪೌರಾಣಿಕ ಪಾತ್ರಗಳನ್ನು ಮಾಡಿದ ಮೇಲೆ ನಮ್ಮ ಮನಸ್ಥಿತಿ ಸರಿ ಆಯಿತು. ಬದುಕು ಸುಧಾರಿಸಿತು. ಈಗ ನಟ ದರ್ಶನ್​​ಗೂ ಅದೇ ಆಗಿದೆ. ಅವರು ಕುರುಕ್ಷೇತ್ರ ಸಿನಿಮಾ‌ದಲ್ಲಿ ದುರ್ಯೋಧನನ‌ ಪಾತ್ರ ಮಾಡಿದ್ದಾರೆ. ಪಾತ್ರದ ಛಾಯೆ ಅವರ ಮೇಲಿರುವುದರಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಬೇರೆ ಪೌರಾಣಿಕ ಪಾತ್ರ ಮಾಡಿದರೆ ಅವರಲ್ಲಿ ಬದಲಾವಣೆ ಆಗಲಿದೆ’ ಎನ್ನುತ್ತಾರೆ ಈ ಪಾತ್ರ ಮಾಡಿದವರು.

ಇದನ್ನೂ ಓದಿ: ವಂಚನೆ ಪ್ರಕರಣದ ಮೂಲ ಅರಿಯಲು ಕೈ ಜೋಡಿಸಿದರಾ ದರ್ಶನ್- ಉಮಾಪತಿ?

‘ದರ್ಶನ್​-ಇಂದ್ರಜಿತ್​ರನ್ನು ಐದು ವರ್ಷ ಚಿತ್ರರಂಗದಿಂದ ಬ್ಯಾನ್​ ಮಾಡಿ’; ಕೇಳಿ ಬಂತು ಹೊಸ ಆಗ್ರಹ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ