AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್ ರಿಲೀಸ್ ಆಗುವ ಮುನ್ನ ಈ ಕೆಲಸ ಮಾಡಿ’; KVNಗೆ ಬೇಡಿಕೆ ಇಟ್ಟ ಫ್ಯಾನ್ಸ್

ಕೆವಿಎನ್ ಪ್ರೊಡಕ್ಷನ್ಸ್‌ನ 'ಜನ ನಾಯಗನ್', 'ಟಾಕ್ಸಿಕ್' ಮತ್ತು 'ಕೆಡಿ' ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದ್ದರೂ, ಅನೇಕ ವಿಘ್ನಗಳನ್ನು ಎದುರಿಸುತ್ತಿವೆ. 'ಜನ ನಾಯಗನ್' ಸೆನ್ಸಾರ್ ವಿಳಂಬದಿಂದ, 'ಟಾಕ್ಸಿಕ್' ರಿಲೀಸ್ ಮುಂದೂಡಿಕೆಯಿಂದ, 'ಕೆಡಿ' ವಿವಾದಗಳಿಂದ ಸುದ್ದಿಯಲ್ಲಿದೆ. ಈ ನಿರಂತರ ಸಮಸ್ಯೆಗಳಿಂದ ಅಭಿಮಾನಿಗಳು ಕಳವಳಗೊಂಡಿದ್ದು, 'ಟಾಕ್ಸಿಕ್' ಚಿತ್ರಕ್ಕೆ ಹೋಮ ಮಾಡಿಸುವಂತೆ ಬೇಡಿಕೆ ಇಟ್ಟಿದ್ದಾರೆ.

‘ಟಾಕ್ಸಿಕ್ ರಿಲೀಸ್ ಆಗುವ ಮುನ್ನ ಈ ಕೆಲಸ ಮಾಡಿ’; KVNಗೆ ಬೇಡಿಕೆ ಇಟ್ಟ ಫ್ಯಾನ್ಸ್
ಯಶ್​-ವೆಂಕಟ್
ರಾಜೇಶ್ ದುಗ್ಗುಮನೆ
|

Updated on: Apr 25, 2026 | 3:00 PM

Share

ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಕೆವಿಎನ್’ ಮೂರು ಬಿಗ್ ಬಜೆಟ್ ಚಿತ್ರಗಳನ್ನು ಘೋಷಣೆ ಮಾಡಿದಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು. ಈ ಚಿತ್ರಗಳಿಗೆ ‘ಜನ ನಾಯಗನ್’, ‘ಟಾಕ್ಸಿಕ್’, ‘ಕೆಡಿ’ ಎಂದು ಟೈಟಲ್ ಕೊಡಲಾಗಿದೆ. ಜನವರಿಯಲ್ಲಿ ಒಂದು, ಮಾರ್ಚ್ ಅಲ್ಲಿ ಒಂದು ಹಾಗೂ ಏಪ್ರಿಲ್ ಅಂತ್ಯಕ್ಕೊಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಪ್ಲ್ಯಾನ್ ಎಲ್ಲವೂ ಉಲ್ಟಾ ಆಗಿದೆ. ಒಂದಾದ ಬಳಿಕ ಒಂದು ವಿಘ್ನ ಈ ಚಿತ್ರಗಳಿಗೆ ಎದುರಾಗುತ್ತಿದೆ. ಹೀಗಾಗಿ, ಅಭಿಮಾನಿಗಳು ಕೋರಿಕೆ ಒಂದನ್ನು ಇಟ್ಟಿದ್ದಾರೆ.

ಜನವರಿ 9ರಂದು ತಮಿಳಿನ ‘ಜನ ನಾಯಗನ್’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರವೇ ಸಿಕ್ಕಿಲ್ಲ. ಡಿಸೆಂಬರ್​​ನಲ್ಲಿಯೇ ಚಿತ್ರ ತಂಡದವರು ಸೆನ್ಸಾರ್ ಮಂಡಳಿಗೆ ಸಿನಿಮಾ ಸಲ್ಲಿಕೆ ಮಾಡಿದ್ದರು. ಇಂದು ಏಪ್ರಿಲ್ 25. ಅಂದರೆ ಒಂದು ಸಿನಿಮಾಗೆ ಐದು ತಿಂಗಳಾದರೂ ಸೆನ್ಸಾರ್ ಮಂಡಳಿಯವರು ಪ್ರಮಾಣಪತ್ರ ಕೊಟ್ಟಿಲ್ಲ ಎಂಬುದು ದುರಂತವೇ ಸರಿ. ಈ ಸಿನಿಮಾ ಬಿಡುಗಡೆ ಇನ್ನೂ ಯಾವಾಗ ಎಂದು ಘೋಷಣೆ ಆಗಿಲ್ಲ.

‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಬೇಕಿತ್ತು. ಆದರೆ, ಇದರ ರಿಲೀಸ್ ದಿನಾಂಕ ಜೂನ್ 4ಕ್ಕೆ ಮುಂದಕ್ಕೆ ಹೋಗಿದೆ. ಇದಕ್ಕೆ ವಾರ್ ಕಾರಣವನ್ನು ತಂಡದವರು ನೀಡಿದರೂ, ಅಭಿಮಾನಿಗಳು ಸಂಪೂರ್ಣವಾಗಿ ಇದನ್ನು ಒಪ್ಪಿಕೊಳ್ಳಲು ರೆಡಿ ಇಲ್ಲ. ಇದರ ಹಿಂದೆ ಕಾಣದ ಕಾರಣ ಇರಬಹುದು ಎಂದು ಊಹಿಸಿದ್ದಾರೆ.

ಈಗ ‘ಕೆಡಿ’ ಸಿನಿಮಾ ರಿಲೀಸ್ ಆಗುತ್ತಿದೆ. ಏಪ್ರಿಲ್ 30ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಈ ಮೊದಲು ರಿಲೀಸ್ ಆದ ‘ಸರ್ಸೆ ಸರ್ಸೆ..’ ಹಾಡು ವಿವಾದ ಸೃಷ್ಟಿ ಮಾಡಿ ಅದನ್ನು ಯೂಟ್ಯೂಬ್​​ನಿಂದಲೇ ತೆಗೆಯಬೇಕಾಯಿತು. ಇತ್ತೀಚೆಗೆ ತೆರೆಗೆ ಬಂದ ಟ್ರೇಲರ್ ಕೂಡ ತೆಗೆದು, ಹೊಸ ಟ್ರೇಲರ್ ಅಪ್​ಲೋಡ್ ಮಾಡಲಾಗಿದೆ.

ಇದನ್ನೂ ಓದಿ: ಕಾಣಿಸುತ್ತಿಲ್ಲ ‘ಕೆಡಿ’ ಸಿನಿಮಾ ಟ್ರೇಲರ್; ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಗೆ ಇನ್ನೊಂದು ವಿಘ್ನ ಈ ಬೆಳವಣಿಗೆ ಯಶ್ ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಹೀಗಾಗಿ, ‘ಟಾಕ್ಸಿಕ್’ ರಿಲೀಸ್​ಗೂ ಮೊದಲೇ ಒಂದು ಹೋಮ-ಹವನ ಮಾಡಿಸುವಂತೆ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಕೆವಿಎನ್​ ಅಂತಹ ದೊಡ್ಡ ಸಂಸ್ಥೆಗೆ ಹೀಗಾದರೆ ಹೇಗೆ ಎಂಬ ಪ್ರಶ್ನೆಯನ್ನು ಅನೇಕರು ಕೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?