AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರವೇಗದಲ್ಲಿ ಕೆವಿಎನ್ ಪ್ರೊಡಕ್ಷನ್, ನಿರ್ಮಿಸುತ್ತಿರುವ ಸಿನಿಮಾಗಳೆಷ್ಟು? ಹಾಕಿರುವ ಬಂಡವಾಳ ಎಷ್ಟು?

KVN Productions: ಕರ್ನಾಟಕದ ಸಿನಿಮಾ ನಿರ್ಮಾಣ ಸಂಸ್ಥೆಗಳು ಈಗ ದೇಶದಾದ್ಯಂತ ಸದ್ದು ಮಾಡುತ್ತಿವೆ. ಬಾಲಿವುಡ್​ನ ದೊಡ್ಡ ನಿರ್ಮಾಣ ಸಂಸ್ಥೆಗಳಿಗೆ ಠಕ್ಕರ್ ನೀಡುತ್ತಿವೆ. ಕೆಲ ವರ್ಷಗಳ ಹಿಂದಷ್ಟೆ ಸಿನಿಮಾ ನಿರ್ಮಾಣ ಪ್ರಾರಂಭಿಸಿದ ಕರ್ನಾಟಕದ್ದೇ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಸಾವಿರಾರು ಕೋಟಿ ಬಂಡವಾಳವನ್ನು ಸಿನಿಮಾಗಳ ಮೇಲೆ ಹೂಡಿದೆ. ಇಲ್ಲಿದೆ ನೋಡಿ ಮಾಹಿತಿ...

ಶರವೇಗದಲ್ಲಿ ಕೆವಿಎನ್ ಪ್ರೊಡಕ್ಷನ್, ನಿರ್ಮಿಸುತ್ತಿರುವ ಸಿನಿಮಾಗಳೆಷ್ಟು? ಹಾಕಿರುವ ಬಂಡವಾಳ ಎಷ್ಟು?
Kvn Productions
ಮಂಜುನಾಥ ಸಿ.
|

Updated on: Aug 24, 2025 | 6:39 PM

Share

ಸಿನಿಮಾಗಳು ‘ದೊಡ್ಡ ಸಿನಿಮಾ’ ಎನಿಸಿಕೊಳ್ಳುವುದು ಅವುಗಳ ಹಿಂದಿರುವ ನಿರ್ಮಾಣ ಸಂಸ್ಥೆಗಳ ಕಾರಣಕ್ಕೆ. ಕರ್ನಾಟಕದ ಹೊಂಬಾಳೆ ನಿರ್ಮಾಣ ಸಂಸ್ಥೆ ಈಗಾಗಲೇ ಪ್ಯಾನ್ ಇಂಡಿಯಾ ಪ್ರಾಜೆಕ್ಟ್​ಗಳ ಮೂಲಕ ಇಡೀ ದೇಶದಲ್ಲಿ ಸದ್ದು ಮಾಡಿದೆ. ಸಿನಿಮಾ ಪ್ರೇಮಿಗಳಿಗೆ ಕೆಲ ಒಳ್ಳೆಯ ಸಿನಿಮಾಗಳನ್ನು ನೀಡಿದೆ. ಇದೀಗ ಮತ್ತೊಂದು ಕರ್ನಾಟಕದ್ದೇ ನಿರ್ಮಾಣ ಸಂಸ್ಥೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಲವು ಚಿತ್ರರಂಗಗಳಲ್ಲಿ ಆಯಾ ಚಿತ್ರರಂಗದ ಸ್ಟಾರ್ ನಟರುಗಳೊಡನೆ ಸಿನಿಮಾ ಮಾಡುತ್ತಿದೆ.

ಸಿಂಪಲ್ ಸುನಿ ನಿರ್ದೇಶಿಸಿ, ಗಣೇಶ್ ನಟಿಸಿದ್ದ ‘ಸಖತ್’ ಸಿನಿಮಾ ಮೂಲಕ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟ ಕೆವಿಎನ್ ಪ್ರೊಡಕ್ಷನ್ಸ್ ಈಗ ಬರೋಬ್ಬರಿ ಏಳು ದೊಡ್ಡ ಬಜೆಟ್ ಸಿನಿಮಾಗಳನ್ನು ಏಕಕಾಲಕ್ಕೆ ನಿರ್ಮಾಣ ಮಾಡುತ್ತಿದೆ. ಕೆವಿಎನ್ ಪ್ರೊಡಕ್ಷನ್ ಹಿಂದಿರುವ ಶಕ್ತಿ ವೆಂಕಟ್ ಅವರು ತಮ್ಮ ಸಿನಿಮಾ ಪ್ರೀತಿ, ದೂರದೃಷ್ಟಿ ಮತ್ತು ರಿಸ್ಕ್ ತೆಗೆದುಕೊಳ್ಳುವ ಛಾತಿಯಿಂದಾಗಿ ಇಡೀ ಭಾರತೀಯ ಚಿತ್ರರಂಗ ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ಕೆವಿಎನ್ ಪ್ರೊಡಕ್ಷನ್​ ನಿರ್ಮಾಣ ಮಾಡಿರುವ ಕೇವಲ ಎರಡು ಸಿನಿಮಾಗಳು ಮಾತ್ರವೇ ಈ ವರೆಗೆ ಬಿಡುಗಡೆ ಆಗಿವೆ. ಆದರೆ ಅವರ ನಿರ್ಮಾಣದ ಬರೋಬ್ಬರಿ ಏಳು ಸಿನಿಮಾಗಳು ಪ್ರಸ್ತುತ ಚಿತ್ರೀಕರಣ ಗೊಳ್ಳುತ್ತಿವೆ. ಈ ಏಳೂ ಸಿನಿಮಾಗಳು ಒಂದಕ್ಕಿಂತಲೂ ಒಂದು ದೊಡ್ಡ ಸಿನಿಮಾಗಳು. ಏಳೂ ಸಿನಿಮಾಗಳೂ ಸಹ ಸ್ಟಾರ್ ನಟರ ಸಿನಿಮಾಗಳೇ ಆಗಿದ್ದು, ಭಾರಿ ಬಜೆಟ್​ನ ಸಿನಿಮಾಗಳು ಇವಾಗಿವೆ.

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅದರ ಹಿಂದೆಯೇ ತಮಿಳಿನ ಸೂಪರ್ ಸ್ಟಾರ್ ದಳಪತಿ ವಿಜಯ್ ನಟನೆಯ ಕಟ್ಟಕಡೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆ ಆಗಲಿದೆ. ಈ ಸಿನಿಮಾಕ್ಕೆ ವಿಜಯ್ ಅವರಿಗೆ ದಾಖಲೆ ಮೊತ್ತದ ಸಂಭಾವನೆ ಕೊಟ್ಟಿದ್ದಾರೆ ಕೆವಿಎನ್ ವೆಂಕಟ್. ಇವುಗಳ ಜೊತೆಗೆ ಮಲಯಾಳಂನಲ್ಲಿ ‘ಬಾಲನ್’ ಹೆಸರಿನ ಒಂದು ಸಿನಿಮಾ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ:ಮೆಗಾ ಸ್ಟಾರ್ ಚಿರಂಜೀವಿ ಜೊತೆ ಕೆವಿಎನ್ ಪ್ರೊಡಕ್ಷನ್ಸ್ ಹೊಸ ಸಿನಿಮಾ

ಕೆವಿಎನ್ ಅವರು ಕಳೆದ ಒಂದು ವಾರದಲ್ಲಿ ಮೂರು ದೊಡ್ಡ ಬಜೆಟ್ ಸಿನಿಮಾಗಳ ಘೋಷಣೆ ಮಾಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ನಟಿಸಲಿರುವ 157ನೇ ಸಿನಿಮಾಕ್ಕೆ ಕೆವಿಎನ್ ಅವರದ್ದೇ ಬಂಡವಾಳ. ಇನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿ, ಕಾರ್ತಿ ನಟಿಸಿದ್ದ ಸೂಪರ್ ಹಿಟ್ ಸಿನಿಮಾ ‘ಖೈದಿ’ಯ ಎರಡನೇ ಭಾಗ ‘ಖೈದಿ 2’ ಅನ್ನು ಕೆವಿಎನ್ ಅವರೇ ನಿರ್ಮಾಣ ಮಾಡಲಿದ್ದಾರೆ. ಇನ್ನು ಇತ್ತೀಚೆಗಷ್ಟೆ ಬಾಲಿವುಡ್​ಗೂ ಸಹ ಕಾಲಿಟ್ಟಿರುವ ಕೆವಿಎನ್​, ಬಾಲಿವುಡ್​ನ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಹಾಗೂ ಸೈಫ್ ಅಲಿ ಖಾನ್ ಅವರಿಗಾಗಿ ‘ಹೈವಾನ್’ ಹೆಸರಿನ ಸಿನಿಮಾ ಮಾಡುತ್ತಿದೆ. ಇಬ್ಬರು ಸೂಪರ್ ಸ್ಟಾರ್​ಗಳನ್ನು ಒಂದೇ ಸಿನಿಮಾನಲ್ಲಿ ಹಾಕಿಕೊಂಡಿದೆ.

ಇದೆಲ್ಲದಕ್ಕೂ ಮುಂಚೆ ನಟ ಯಶ್ ಜೊತೆಗೆ ‘ಟಾಕ್ಸಿಕ್’ ಸಿನಿಮಾ ಘೋಷಿಸಿ, ಆ ಸಿನಿಮಾವನ್ನು ಹಾಲಿವುಡ್ಡಿಗರೂ ಸಹ ಮೂಗಮೇಲೆ ಬೆರಳಿಡುವಂಥಹಾ ಸಿನಿಮಾ ಮಾಡುತ್ತಿದ್ದಾರೆ. ಕೆವಿಎನ್ ಪ್ರಸ್ತುತ ನಿರ್ಮಿಸುತ್ತಿರುವ ಏಳು ಸಿನಿಮಾಗಳ ಒಟ್ಟು ಬಜೆಟ್ ಸುಮಾರು 1500 ರಿಂದ 1800 ಕೋಟಿ ರೂಪಾಯಿಗಳು ಎನ್ನಲಾಗುತ್ತಿದೆ. ಇಷ್ಟು ದೊಡ್ಡ ಬಂಡವಾಳವನ್ನು ಒಂದೇ ಬಾರಿಗೆ ಹೂಡಿಕೆ ಮಾಡಿರುವ ಇನ್ನೊಂದು ನಿರ್ಮಾಣ ಸಂಸ್ಥೆ ಭಾರತದಲ್ಲಿ ಇನ್ಯಾವುದೂ ಇಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ