AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಬರ್ತ್​​ಡೇಗೆ ವಿಶ್ ತಿಳಿಸಿದ ‘ಕೆವಿಎನ್ ಪ್ರೊಡಕ್ಷನ್ಸ್’; ಹೇಗಿದೆ ನೋಡಿ ಪೋಸ್ಟ್

Toxic Movie: ‘ಟಾಕ್ಸಿಕ್’ ಚಿತ್ರಕ್ಕೆ ‘ಕೆವಿಎನ್ ಪ್ರೊಡಕ್ಷನ್ಸ್’ ಬಂಡವಾಳ ಹೂಡುತ್ತಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದು ದೊಡ್ಡ ಬಜೆಟ್​ನಲ್ಲಿ ಚಿತ್ರ ಮೂಡಿ ಬರುತ್ತಿದೆ. ಸಿನಿಮಾದಲ್ಲಿ ಹಾಲಿವುಡ್ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ.

ಯಶ್​ ಬರ್ತ್​​ಡೇಗೆ ವಿಶ್ ತಿಳಿಸಿದ ‘ಕೆವಿಎನ್ ಪ್ರೊಡಕ್ಷನ್ಸ್’; ಹೇಗಿದೆ ನೋಡಿ ಪೋಸ್ಟ್
ಯಶ್
ರಾಜೇಶ್ ದುಗ್ಗುಮನೆ
|

Updated on:Jan 08, 2024 | 10:50 AM

Share

ಯಶ್ ಅವರಿಗೆ ಇಂದು (ಜನವರಿ 8) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾಮನ್ ಡಿಪಿ ಹಾಕಿ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಟ್ವಿಟರ್​ನಲ್ಲಿ YashBoss ಹ್ಯಾಶ್​ಟ್ಯಾಗ್ ವೈರಲ್ ಆಗಿದೆ. ‘ಟಾಕ್ಸಿಕ್’ ಸಿನಿಮಾ (Toxic Movie) ನಿರ್ಮಾಣ ಸಂಸ್ಥೆ ‘ಕೆವಿಎನ್​ ಪ್ರೊಡಕ್ಷನ್ಸ್’ ಕೂಡ ಯಶ್ ಅವರಿಗೆ ತಮ್ಮದೇ ಸ್ಟೈಲ್​ನಲ್ಲಿ ವಿಶ್ ಮಾಡಿದೆ. ಇಂದು ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

‘ಟಾಕ್ಸಿಕ್’ ಚಿತ್ರಕ್ಕೆ ‘ಕೆವಿಎನ್ ಪ್ರೊಡಕ್ಷನ್ಸ್’ ಬಂಡವಾಳ ಹೂಡುತ್ತಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದು ದೊಡ್ಡ ಬಜೆಟ್​ನಲ್ಲಿ ಚಿತ್ರ ಮೂಡಿ ಬರುತ್ತಿದೆ. ಸಿನಿಮಾದಲ್ಲಿ ಹಾಲಿವುಡ್ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಯಶ್ ಬರ್ತ್​ಡೇ ದಿನ ಸಿನಿಮಾದ ಪೋಸ್ಟರ್ ರಿಲೀಸ್ ಆಗಬಹುದೇ ಎಂದು ಫ್ಯಾನ್ಸ್ ಕಾದಿದ್ದಾರೆ.

‘ತೆರೆಮೇಲೆ ಹಾಗೂ ನಮ್ಮ ಹೃದಯವನ್ನು ರಾಕ್ ಮಾಡಿದ ಯಶ್​ಗೆ ಜನ್ಮದಿನದ ಶುಭಾಶಯ’ ಎಂದು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ಬರೆದುಕೊಂಡಿದೆ. ಈ ಮೊದಲು ರಿಲೀಸ್ ಮಾಡಿದ್ದ ಮೋಷನ್ ಪೋಸ್ಟರ್​ನ ಮತ್ತೆ ರಿಲೀಸ್ ಮಾಡಲಾಗಿದೆ. ಇದಕ್ಕೆ ಫ್ಯಾನ್ಸ್ ಬೇಸರಗೊಂಡಿದ್ದಾರೆ. ‘ಫಸ್ಟ್ ಲುಕ್ ಅಪ್​ಡೇಟ್ ನೀಡಿ’ ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಇನ್ನೂ ಕೆಲವರು ‘ವರ್ಕಿಂಗ್ ಸ್ಟಿಲ್ ಆದರೂ ರಿಲೀಸ್ ಮಾಡಲಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ: ಗದಗ: ನಟ ಯಶ್ ಬರ್ತಡೇ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಯುವಕರು ಸಾವು

‘ಯಶ್ 19’ ಚಿತ್ರಕ್ಕಾಗಿ ಯಶ್ ಅವರು ಯಾರ ಜೊತೆ ಕೈ ಜೋಡಿಸುತ್ತಾರೆ ಎನ್ನುವ ಕುತೂಹಲ ಮೂಡಿತ್ತು. ಇದಕ್ಕೆ ಕಳೆದ ಡಿಸೆಂಬರ್​ನಲ್ಲಿ ಉತ್ತರ ಸಿಕ್ಕಿತ್ತು. ಗೀತು ಮೋಹನ್​ದಾಸ್​ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Mon, 8 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು