AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ; ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಒತ್ತಾಯ

ಜೂ.6ರಂದು ಚೇತನ್​ ಮಾಡಿರುವ ಒಂದು ಟ್ವೀಟ್​ ಮತ್ತು ಫೇಸ್​ಬುಕ್​ ಪೋಸ್ಟ್​ನಿಂದ ಇಷ್ಟೆಲ್ಲ ಕಿರಿಕ್​ ಶುರುವಾಗಿದೆ. ಅವರ ವಿರುದ್ಧ ಬ್ರಾಹ್ಮಣ ಸಮುದಾಯ ತಿರುಗಿ ಬಿದ್ದಿದೆ.

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ; ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಒತ್ತಾಯ
ಚೇತನ್​, ಶಿವರಾಮ್ ಹೆಬ್ಬಾರ್​
TV9 Web
| Edited By: |

Updated on: Jun 11, 2021 | 11:36 AM

Share

ತಮ್ಮ ಸಿದ್ಧಾಂತದ ಕಾರಣದಿಂದ ನಟ ‘ಆ ದಿನಗಳು’ ಚೇತನ್​ ಅವರು ಆಗಾಗ ವಿವಾದ ಮಾಡಿಕೊಳ್ಳುತ್ತಾರೆ. ಈಗ ಅವರ ವಿರುದ್ಧ ಬ್ರಾಹ್ಮಣ ಸಮುದಾಯ ತಿರುಗಿ ಬಿದ್ದಿದೆ. ಚೇತನ್​ ಮಾಡಿದ ಸೋಶಿಯಲ್​ ಮೀಡಿಯಾ ಪೋಸ್ಟ್​ನಿಂದಾಗಿ ವಿವಾದ ಶುರುವಾಗಿದೆ. ಕಾರ್ಮಿಕ ಸಚಿವ ಶಿವರಾಮ್​ ಹೆಬ್ಬಾರ್​ ಕೂಡ ಚೇತನ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೇತನ್​ ಅವರನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಶಿವರಾಮ್​ ಹೆಬ್ಬಾರ್​ ಮನವಿ ಮಾಡಿಕೊಂಡಿದ್ದಾರೆ.

‘ಕನ್ನಡ ಚಿತ್ರರಂಗದಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದೆ. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು’ ಎಂದು ಶಿವರಾಮ್​ ಹೆಬ್ಬಾರ್​ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​​ ಮಾಡಿದ್ದಾರೆ.

‘ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಶಿವರಾಮ್​ ಹೆಬ್ಬಾರ್​ ಬರೆದುಕೊಂಡಿದ್ದಾರೆ.

ಜೂ.6ರಂದು ಚೇತನ್​ ಮಾಡಿರುವ ಒಂದು ಟ್ವೀಟ್​ ಮತ್ತು ಫೇಸ್​ಬುಕ್​ ಪೋಸ್ಟ್​ನಿಂದ ಇಷ್ಟೆಲ್ಲ ಕಿರಿಕ್​ ಶುರುವಾಗಿದೆ. ‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ’ ಎಂದು ಚೇತನ್​ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಬರೆದುಕೊಂಡಿದ್ದರು.

ಚೇತನ್​ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕೂಡ ಕೆಲವೇ ದಿನಗಳ ಹಿಂದೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ದೂರು ನೀಡಿದ್ದರು.

ಇದನ್ನೂ ಓದಿ:

ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು

ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್​ ಹೀಗ್ಯಾಕಂದ್ರು?

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ