AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಯಾಯ್ತು ‘ಲೇಡೀಸ್ ಬಾರ್’ ಸಿನಿಮಾದ ಟೀಸರ್, ಹಾಡು

Ladies Bar: ‘ಲೇಡೀಸ್ ಬಾರ್’ ಸಿನಿಮಾದ ಆಡಿಯೋ ಹಾಗೂ ಟೀಸರ್ ಬಿಡುಗಡೆ ಆಗಿದೆ. ಸಿನಿಮಾ ಜನವರಿಯಲ್ಲಿ ತೆರೆಗೆ ಬರಲಿದೆ.

ಬಿಡುಗಡೆಯಾಯ್ತು ‘ಲೇಡೀಸ್ ಬಾರ್’ ಸಿನಿಮಾದ ಟೀಸರ್, ಹಾಡು
ಮಂಜುನಾಥ ಸಿ.
|

Updated on:Dec 05, 2023 | 10:37 PM

Share

ಡಿ.ಎಂ.ಸಿ ಪ್ರೊಡಕ್ಷನ್ಸ್ ಅಡಿಯಲ್ಲಿ ಟಿ.ಎಂ ಸೋಮರಾಜು ನಿರ್ಮಾಣ ಮಾಡಿರುವ ಹಾಗೂ ಮುತ್ತು ಎ.ಎನ್ ‘ಲೇಡಿಸ್ ಬಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ‘ಲೇಡೀಸ್ ಬಾರ್’ ಸಿನಿಮಾದ ಟೀಸರ್ (Teaser) ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ರಾಜಕೀಯ ಮುಖಂಡರಾದ ಎಂ.ಡಿ ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದರು. ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಲೋಕಾರ್ಪಣೆಯಾಗಿದೆ. ನಂತರ ಚಿತ್ರತಂಡದ ಸದಸ್ಯರು ‘ಲೇಡಿಸ್ ಬಾರ್’ ಕುರಿತು ಮಾಹಿತಿ ನೀಡಿದರು.

ನಿರ್ದೇಶಕ ಎ.ಎನ್ ಮುತ್ತು ಮಾತನಾಡಿ ‘ಲೇಡಿಸ್ ಬಾರ್’ ಶೀರ್ಷಿಕೆ ಕೇಳಿ ಇದು ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳಬಹುದು. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ಪ್ರಯತ್ನ ಮಾಡಿದ್ದೇವೆ. ಸಿನಿಮಾ ನೋಡಿದಾಗ ಅದು ಗೊತ್ತಾಗುತ್ತದೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ಮಾಡಿದ್ದೇವೆ‌. ಸದ್ಯದಲ್ಲೇ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ ಬಿಡುಗಡೆ ಮಾಡುತ್ತೇವೆ ಎಂದರು.

ನಾನು ಉದ್ಯಮಿ ಜೊತೆಗೆ ರೈತ ಕೂಡ ಎಂದು ಮಾತನಾಡಿದ ಟಿ.ಎಂ.ಸೋಮರಾಜು, ಸಿನಿಮಾ ರಂಗ ಪರಿಚಯವೇ ಇಲ್ಲ. ನನ್ನ ಗೆಳೆಯ ರಾಜಶೇಖರ್ ನನ್ನನ್ನು ಈ ರಂಗಕ್ಕೆ ಕರೆದುಕೊಂಡು ಬಂದಿದ್ದಾರೆ. ನಿರ್ದೇಶಕ ಎ.ಎನ್ ಮುತ್ತು ಅವರು ಹೇಳಿದ ಕಥೆ ಇಷ್ಟವಾಯಿತು ನಿರ್ಮಾಣ ಮಾಡಿದ್ದೇನೆ. ಪ್ರಮುಖಪಾತ್ರದಲ್ಲೂ ನಟಿಸಿದ್ದೇನೆ. ನಮ್ಮ ಚಿತ್ರವನ್ನು ನೋಡಿ ಪ್ರೋತ್ಸಾಹ ನೀಡಿ ಎಂದರು. ಸಿನಿಮಾದ ಸಹ ನಿರ್ಮಾಪಕ ರಾಜಶೇಖರ್ ಸಹ ಮಾತನಾಡಿ ‘ಲೇಡೀಸ್ ಬಾರ್’ ಸಿನಿಮಾ ಸಾಗಿ ಬಂದ ಬಗೆ ಹೇಗಿತ್ತೆಂಬುದನ್ನು ವಿವರಿಸಿದರು.

ಇದನ್ನೂ ಓದಿ:ಕುತೂಹಲದ ಕಿಡಿ ಹೊತ್ತಿಸಿದ ‘ಕೆಂಡ’ ಸಿನಿಮಾ ಟೀಸರ್; ಡಿಫರೆಂಟ್​ ಆಗಿದೆ ಈ ಪ್ರಯತ್ನ

ಸಂಗೀತ ನಿರ್ದೇಶಕ ಹರ್ಷ ಕಾಗೋಡ್, ಛಾಯಾಗ್ರಾಹಕ ವೀನಸ್ ಮೂರ್ತಿ, ಸಾಹಸ ನಿರ್ದೇಶಕ ಜಗ್ಗು ಮಾಸ್ಟರ್ ಹಾಗೂ ಚಿತ್ರದಲ್ಲಿ ನಟಿಸಿರುವ ಹರೀಶ್ ರಾಜ್, ಶಿವಾನಿ, ಮಾಧುರಿ, ಗಣೇಶ್ ರಾವ್, ಆರಾಧ್ಯ ಮುಂತಾದವರು “ಲೇಡಿಸ್ ಬಾರ್” ಬಗ್ಗೆ ಮಾತನಾಡಿದರು. ಚಿತ್ರದ ಸಿರಿ ಮ್ಯೂಸಿಕ್ ನಲ್ಲಿ ಹಾಡುಗಳನ್ನು ನೋಡಿ, ನಿಮಗನಿಸಿದನ್ನು ಕಾಮೆಂಟ್ ಮಾಡಿ. ಉತ್ತಮ ಕಾಮೆಂಟ್ ಗೆ ನಿರ್ಮಾಪಕರು ಮೊಬೈಲ್‌ ನೀಡಲಿದ್ದಾರೆ ಎಂದು ಸಿರಿ ಮ್ಯೂಸಿಕ್ ಚಿಕ್ಕಣ್ಣ ತಿಳಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:36 pm, Tue, 5 December 23

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ