AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ ಬನೇಗಾ ಕರೋಡ್​ ಪತಿ: ಕೋಟಿ ಗೆದ್ದ IPS ಅಧಿಕಾರಿ ಮೋಹಿತಾ ಶರ್ಮ!

ಖ್ಯಾತ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್​ ಪತಿ ಜನಸಾಮಾನ್ಯರ ಪಾಲಿಗೆ ಅದೃಷ್ಟದ ಬಾಗಿಲು. ತಮ್ಮ ಬುದ್ಧಿವಂತಿಕೆ ಹಾಗೂ ಅದೃಷ್ಟ ಪರೀಕ್ಷೆಯ ಮೂಲಕ ಕೋಟಿ ರೂಪಾಯಿ ಗೆಲ್ಲಲು ದೇಶಾದ್ಯಂತ ಸಾವಿರಾರು ಜನ ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ಅದರಲ್ಲೂ ಈ ಬಾರಿ ಪ್ರಸಾರವಾಗುತ್ತಿರುವ ಕೆಬಿಸಿ ಕಾರ್ಯಕ್ರಮದ 12ನೇ ಆವೃತ್ತಿ ದಿನೇ ದಿನೇ ಸಂಚಲನ ಮೂಡಿಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ನಾಜಿಯಾ ನಸೀಮ್ ಎಂಬ ಮಹಿಳೆ ಒಂದು ಕೋಟಿ ಗೆದ್ದು ಎಲ್ಲರ ಗಮನ ಸೆಳೆದಿದ್ದರು. ಇದೀಗ […]

ಕೌನ್ ಬನೇಗಾ ಕರೋಡ್​ ಪತಿ: ಕೋಟಿ ಗೆದ್ದ IPS ಅಧಿಕಾರಿ ಮೋಹಿತಾ ಶರ್ಮ!
ಸಾಧು ಶ್ರೀನಾಥ್​
|

Updated on:Nov 17, 2020 | 2:53 PM

Share

ಖ್ಯಾತ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್​ ಪತಿ ಜನಸಾಮಾನ್ಯರ ಪಾಲಿಗೆ ಅದೃಷ್ಟದ ಬಾಗಿಲು. ತಮ್ಮ ಬುದ್ಧಿವಂತಿಕೆ ಹಾಗೂ ಅದೃಷ್ಟ ಪರೀಕ್ಷೆಯ ಮೂಲಕ ಕೋಟಿ ರೂಪಾಯಿ ಗೆಲ್ಲಲು ದೇಶಾದ್ಯಂತ ಸಾವಿರಾರು ಜನ ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ಅದರಲ್ಲೂ ಈ ಬಾರಿ ಪ್ರಸಾರವಾಗುತ್ತಿರುವ ಕೆಬಿಸಿ ಕಾರ್ಯಕ್ರಮದ 12ನೇ ಆವೃತ್ತಿ ದಿನೇ ದಿನೇ ಸಂಚಲನ ಮೂಡಿಸುತ್ತಿದೆ.

ಕೆಲ ದಿನಗಳ ಹಿಂದಷ್ಟೇ ನಾಜಿಯಾ ನಸೀಮ್ ಎಂಬ ಮಹಿಳೆ ಒಂದು ಕೋಟಿ ಗೆದ್ದು ಎಲ್ಲರ ಗಮನ ಸೆಳೆದಿದ್ದರು. ಇದೀಗ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಕೋಟಿ ಗೆದ್ದಿರುವ ಪ್ರೊಮೊವನ್ನು ವಾಹಿನಿ ಬಿಡುಗಡೆಗೊಳಿಸಿದ್ದು ವೀಕ್ಷಕರು ಮತ್ತಷ್ಟು ಕುತೂಹಲ ಭರಿತರಾಗಿದ್ದಾರೆ.

ಈಗ ಹೊರಬಿದ್ದಿರುವ ಪ್ರೊಮೊದಲ್ಲಿ ಬಿಗ್ ಬಿ ಒಂದು ಕೋಟಿ ಎಂದು ಅಚ್ಚರಿಯಿಂದ ಉದ್ಘರಿಸುತ್ತಿರುವ ದೃಶ್ಯವಿದ್ದು ನಂತರದಲ್ಲಿ ಏಳು ಕೋಟಿಯ ಪ್ರಶ್ನೆಗೂ ಮೋಹಿತಾ ಶರ್ಮಾ ಕಾಲಿಟ್ಟಿರುವುದು ಬಹಿರಂಗವಾಗಿದೆ. ಕೆಬಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂಬುದು ನನ್ನ ಪತಿಯ ಕನಸಾಗಿತ್ತು.

ಅದಕ್ಕಾಗಿ ಅವರು ಬಾಲ್ಯದಿಂದಲೂ ಪ್ರಯತ್ನ ಪಡುತ್ತಿದ್ದರು. ಆದರೆ, ಈಗ ನಾನು ಭಾಗವಹಿಸುವ ಅವಕಾಶ ಲಭಿಸಿತು ಎಂದಿದ್ದಾರೆ. ಕೊನೆಯಲ್ಲಿ ಎಷ್ಟು ಹಣ ಗೆಲ್ಲುತ್ತೇನೆ ಎನ್ನುವುದಕ್ಕಿಂತ ಇಲ್ಲಿಂದ ಏನು ಪಡೆದುಕೊಂಡೆ ಎನ್ನುವುದು ತೃಪ್ತಿ ನೀಡಬೇಕು ಎಂದಿರುವ ಮೋಹಿತಾ ಏಳು ಕೋಟಿ ಪ್ರಶ್ನೆಗೆ ಸರಿ ಉತ್ತರ ನೀಡಿದ್ದಾರಾ ಇಲ್ಲವಾ ಎನ್ನುವುದು ಸದ್ಯ ಕುತೂಹಲ ಮೂಡಿಸಿದೆ.

ನಾಜೀಯಾ ನಸೀಮ್ ಬಳಿಕ 12ನೇ ಆವೃತ್ತಿಯಲ್ಲಿ ಕೋಟಿ ಗೆಲ್ಲುತ್ತಿರುವ ಸ್ಪರ್ಧಿ ಮೋಹಿತಾ ಶರ್ಮ ಆಗಿದ್ದು ಇಬ್ಬರೂ ಮಹಿಳಾ ಸ್ಪರ್ಧಿಗಳಾಗಿರುವುದು ವಿಶೇಷ.

Published On - 2:52 pm, Tue, 17 November 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ