AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಕನ್ನಡ ಧ್ವಜದಲ್ಲಿ ಅಪ್ಪು ಫೋಟೋ ಹಾಕಿದ್ದಕ್ಕೆ ಮಹಿಳೆ ವಿರೋಧ; ಸಿಡಿದೆದ್ದ ಪುನೀತ್​ ಅಭಿಮಾನಿಗಳು

Puneeth Rajkumar | Kannada Flag: ಕನ್ನಡ ಬಾವುಟದಲ್ಲಿ ಪುನೀತ್​ ಫೋಟೋ ಹಾಕಿದ್ದನ್ನು ಮಹಿಳೆಯೊಬ್ಬರು ವಿರೋಧಿಸಿದ್ದಾರೆ. ಮಹಿಳೆಯ ವರ್ತನೆಗೆ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Puneeth Rajkumar: ಕನ್ನಡ ಧ್ವಜದಲ್ಲಿ ಅಪ್ಪು ಫೋಟೋ ಹಾಕಿದ್ದಕ್ಕೆ ಮಹಿಳೆ ವಿರೋಧ; ಸಿಡಿದೆದ್ದ ಪುನೀತ್​ ಅಭಿಮಾನಿಗಳು
ವಿವಾದ ಎಬ್ಬಿಸಿದ ಮಹಿಳೆ, ಕನ್ನಡ ಧ್ವಜದಲ್ಲಿ ಅಪ್ಪು ಪೋಟೋ
TV9 Web
| Edited By: |

Updated on:Nov 03, 2022 | 7:52 PM

Share

ನಟ ಪುನೀತ್ ರಾಜ್​ಕುಮಾರ್ (Puneeth Rajkumar)​ ಎಂದರೆ ಅಭಿಮಾನಿಗಳ ಪಾಲಿಗೆ ಒಂದು ಎಮೋಷನ್​. ಕನ್ನಡ ಧ್ವಜದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಫೋಟೋ ಹಾಕಿ ಫ್ಯಾನ್ಸ್​ ಗೌರವ ಸಲ್ಲಿಸುತ್ತಿದ್ದಾರೆ. ಆದರೆ ಈ ರೀತಿ ಕನ್ನಡದ ಬಾವುಟದಲ್ಲಿ ಪುನೀತ್​ ಅವರ ಫೋಟೋ ಹಾಕಿದ್ದನ್ನು ಮಹಿಳೆಯೊಬ್ಬರು ವಿರೋಧಿಸಿದ್ದಾರೆ. ಮಹಿಳೆಯ ವರ್ತನೆಗೆ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿ ಈ ಘಟನೆ ನಡೆದಿದೆ. ಕರ್ನಾಟಕದ ಬಾವುಟದಲ್ಲಿ (Kannada Flag) ಅಪ್ಪು ಫೋಟೋ ಇರುವುದನ್ನು ಮಹಿಳೆ ವಿರೋಧಿಸುತ್ತಿರುವ ವಿಡಿಯೋ ಲಭ್ಯವಾಗಿದೆ. ಈ ಮಹಿಳೆ ಕ್ಷಮೆ ಕೇಳಬೇಕು ಎಂದು ‘ಪವರ್​ ಸ್ಟಾರ್​’ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.

‘ನಾವು ಕೂಡ ಕನ್ನಡವರೇ. ನಮ್ಮ ಫೋಟೋ ಬಾವುಟದಲ್ಲಿ ಯಾಕೆ ಇಲ್ಲ? ಪುನೀತ್​ ಅಂದ್ರೆ ಕನ್ನಡಾಂಬೆ ಅಲ್ಲ. ಪುನೀತನ ಚಿತ್ರ ಬಾವುಟದಲ್ಲಿ ಬರಬಾರದು’ ಎಂದು ಮಹಿಳೆಯು ಕೂಗಾಡಿದ್ದಾರೆ. ಈ ಘಟನೆಯನ್ನು ಅಪ್ಪು ಅಭಿಮಾನಿಗಳು ಖಂಡಿಸಿದ್ದಾರೆ. ಮಹಿಳೆ ಹೇಳಿದ ಮಾತುಗಳನ್ನು ಸ್ಥಳದಲ್ಲೇ ಇದ್ದ ಆಟೋ ಚಾಲಕರು ವಿರೋಧಿಸಿದ್ದಾರೆ.

ಈ ಘಟನೆ ಬಗ್ಗೆ ಪುನೀತ್​ ಅಭಿಮಾನಿಯೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ‘ಆಟೋದವರು ಪುನೀತ್​ ಫೋಟೋ ಇರುವ ಬಾವುಟ ಹಾಕಿಕೊಂಡಿದ್ದರು. ಅದನ್ನು ನೋಡಿ ಈ ಮಹಿಳೆ ವಿರೋಧ ವ್ಯಕ್ತಪಡಿಸಿದರು. ತಾವು ಯಾರಿಗೂ ಹೆದರುವುದಿಲ್ಲ ಅಂತ ಕೂಗಾಡಿದ್ದಾರೆ. ಆಕೆ ಕ್ಷಮೆ ಕೇಳಬೇಕು. ಪ್ರತಿ ಮನೆಯಲ್ಲೂ ಪುನೀತ್ ರಾಜ್​ಕುಮಾರ್​ ಅವರ ಫೋಟೋ ಇಟ್ಟು ಪೂಜೆ ಮಾಡಲಾಗುತ್ತಿದೆ. ಅಂಥವರ ಬಗ್ಗೆ ಈ ರೀತಿ ಮಾತಾಡಿದ್ದು ಸರಿಯಲ್ಲ. ಬಾವುಟದಲ್ಲಿ ಅಪ್ಪು ಫೋಟೋ ಹಾಕಿದ್ದಕ್ಕೆ ಸರ್ಕಾರವೇ ಆಕ್ಷೇಪಿಸಿಲ್ಲ. ನಿಧನರಾದ ವ್ಯಕ್ತಿ ಬಗ್ಗೆ ಈ ಮಹಿಳೆ ಈ ರೀತಿ ಮಾತನಾಡಿದ್ದು ತಪ್ಪು. ಲೈವ್​ನಲ್ಲಿ ಬಂದು ಅವರು ಕ್ಷಮೆ ಕೇಳಬೇಕು’ ಎಂದು ಅಪ್ಪು ಅಭಿಮಾನಿ ಹೇಳಿದ್ದಾರೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ಪುನೀತ್​ ರಾಜ್​ಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ, ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬಿಡುಗಡೆ, ಕನ್ನಡ ರಾಜ್ಯೋತ್ಸವ ಆಚರಣೆ, ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ… ಈ ವಿಶೇಷ ದಿನಗಳು ಒಂದರ ಹಿಂದೊಂದು ಬಂದಿರುವ ಕಾರಣ ಅಭಿಮಾನಿಗಳು ಎಲ್ಲವನ್ನೂ ಒಟ್ಟಾಗಿ ಆಚರಿಸಿದ್ದಾರೆ. ಅನೇಕ ರಸ್ತೆಗಳಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರ ಇರುವ ಕನ್ನಡದ ಬಾವುಟ ಹಾರಾಡುತ್ತಿದೆ. ಹಲವು ಬಗೆಯಲ್ಲಿ ಅಭಿಮಾನಿಗಳು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:27 pm, Thu, 3 November 22

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!