AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಹರಿ ಮಹೇಶ್, ಸಿದ್ ಶ್ರೀರಾಮ್ ಧ್ವನಿಯಲ್ಲಿ ‘ಬ್ರ್ಯಾಟ್’ ಚಿತ್ರದ ‘ನಾನೇ ನೀನಂತೆ..’ ಹಾಡು

‘ಸರಿಗಮಪ’ ಖ್ಯಾತಿಯ ಲಹರಿ ಮಹೇಶ್ ಅವರಿಗೆ ‘ಬ್ರ್ಯಾಟ್’ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿತು. ಖ್ಯಾತ ಗಾಯಕ ಸಿದ್ ಶ್ರೀರಾಮ್ ಜೊತೆ ಅವರು ಹಾಡಿದ ‘ನಾನೇ ನೀನಂತೆ..’ ಹಾಡು ಬಿಡುಗಡೆ ಆಗಿದೆ. ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ‘ಬ್ರ್ಯಾಟ್’ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಯಿತು.

ಲಹರಿ ಮಹೇಶ್, ಸಿದ್ ಶ್ರೀರಾಮ್ ಧ್ವನಿಯಲ್ಲಿ ‘ಬ್ರ್ಯಾಟ್’ ಚಿತ್ರದ ‘ನಾನೇ ನೀನಂತೆ..’ ಹಾಡು
Darling Krishna, Manisha Kandkur
ಮದನ್​ ಕುಮಾರ್​
|

Updated on: Jul 29, 2025 | 9:51 PM

Share

ನಟ ಡಾರ್ಲಿಂಗ್ ಕೃಷ್ಣ ಅವರು ‘ಬ್ರ್ಯಾಟ್’ (Brat) ಸಿನಿಮಾದಲ್ಲಿ ನಟಿಸಿದ್ದಾರೆ. ಶೀರ್ಷಿಕೆ ಮೂಲಕ ಈ ಸಿನಿಮಾ ಕೌತುಕ ಸೃಷ್ಟಿ ಮಾಡಿದೆ. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಸಕ್ಸಸ್ ಬಳಿಕ ನಿರ್ದೇಶಕ ಶಶಾಂಕ್ ಮತ್ತು ನಟ ಡಾರ್ಲಿಂಗ್ ಕೃಷ್ಣ (Darling Krishna) ಅವರ ಕಾಂಬಿನೇಷನ್​ನಲ್ಲಿ ‘ಬ್ರ್ಯಾಟ್’ ಸಿನಿಮಾ ಸಿದ್ಧವಾಗಿದೆ. ‘ಫಸ್ಟ್ ರ‍್ಯಾಂಕ್ ರಾಜು’ ಖ್ಯಾತಿಯ ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ವಿಶೇಷ ಎಂದರೆ, ಈ ಸಿನಿಮಾ ಕನ್ನಡದ ಜೊತೆಗೆ 5 ಭಾಷೆಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ. ‘ಬ್ರ್ಯಾಟ್’ ಸಿನಿಮಾದ ‘ನಾನೇ ನೀನಂತೆ..’ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

ಅರ್ಜುನ್ ಜನ್ಯ ಅವರು ‘ಬ್ರ್ಯಾಟ್’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ನಾನೇ ನೀನಂತೆ..’ ಹಾಡು ಆನಂದ್ ಆಡಿಯೋ ಮೂಲಕ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲಿ ರಿಲೀಸ್ ಆಗಿದೆ. ಕನ್ನಡ ಮತ್ತು ತೆಲುಗಿನಲ್ಲಿ ಸಿದ್ ಶ್ರೀರಾಮ್ ಹಾಡಿದ್ದಾರೆ. ಕನ್ನಡದ ಫಿಮೇಲ್ ವರ್ಷನ್​ಗೆ ಲಹರಿ ಮಹೇಶ್ ಧ್ವನಿಯಾಗಿದ್ದಾರೆ.

ಇನ್ನುಳಿದ 4 ಭಾಷೆಗಳಲ್ಲಿ ಫೀಮೇಲ್ ವರ್ಷನ್​ಗೆ ಸಿರೀಶಾ ಅವರು ಧ್ವನಿ ನೀಡಿದ್ದಾರೆ. ಹಿಂದಿಯಲ್ಲಿ ಮೇಲ್ ವರ್ಷನ್ ನಿಹಾಲ್ ತಾವ್ರೋ, ತೆಲುಗು ಮತ್ತು ತಮಿಳಿನಲ್ಲಿ ಶ್ರೀಕಾಂತ್ ಹರಿಹರನ್ ಹಾಡಿದ್ದಾರೆ. ಈ ಮೊದಲು ಶಶಾಂಕ್, ಅರ್ಜುನ್ ಜನ್ಯ ಮತ್ತು ಸಿದ್ ಶ್ರೀರಾಮ್ ಅವರ ಕಾಂಬಿನೇಶನ್​ನಲ್ಲಿ ಬಂದ ‘ಲವ್ 360’ ಸಿನಿಮಾದ ‘ಜಗವೇ ನೀನು ಗೆಳತಿಯೇ..’ ಸಾಂಗ್ ಸೂಪರ್ ಹಿಟ್ ಆಗಿತ್ತು. ಅದೇ ರೀತಿ ಈಗ ‘ನಾನೇ ನೀನಂತೆ..’ ಸಾಂಗ್ ಕೂಡ ಸದ್ದು ಮಾಡಲು ಆರಂಭಿಸಿದೆ.

‘ನಾನೇ ನೀನಂತೆ..’ ಹಾಡು:

ಸುದ್ದಿಗೋಷ್ಠಿಯಲ್ಲಿ ನಟ ಡಾರ್ಲಿಂಗ್ ಕೃಷ್ಣ ಮಾತನಾಡಿದರು. ‘ಈ ಸಿನಿಮಾದಲ್ಲಿನ ನನ್ನ ಫಸ್ಟ್ ಲುಕ್ಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅದಕ್ಕೆ ನಮ್ಮ ಡೈರೆಕ್ಟರ್ ಶಶಾಂಕ್ ಮತ್ತು ತಂಡವೇ ಕಾರಣ. ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ’ ಎಂದು ಅವರು ಹೇಳಿದರು. ನಿರ್ದೇಶಕ ಶಶಾಂಕ್ ಮಾತನಾಡಿ, ‘ನನ್ನ ಸಿನಿ ಜರ್ನಿಯಲ್ಲೇ ಅತೀ ಹೆಚ್ಚು ವೆಚ್ಚದಲ್ಲಿ ಮೂಡಿಬಂದಿರುವ ಹಾಡಿದು. ಈ ಹಾಡಿನ ಟ್ಯೂನ್ ಅಂತಿಮಗೊಳಿಸಲು ಸುಮಾರು 6 ತಿಂಗಳು ಸಮಯ ಹಿಡಿಯಿತು. ನಿರ್ಮಾಪಕ ಮಂಜುನಾಥ್ ಅವರು ಯಾವುದೇ ಕೊರತೆ ಬಾರದ ರೀತಿಯಲ್ಲಿ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ’ ಎಂದರು.

ಇದನ್ನೂ ಓದಿ: ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು

ಮನಿಶಾ ಕಂದಕೂರ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ‘ನಾನು ಮೂಲತಃ ಕನ್ನಡದ ಹುಡುಗಿ. ಕನ್ನಡದಲ್ಲಿ ಇದು ನನ್ನ ಮೊದಲ ಸಿನಿಮಾ. ಮಧ್ಯಮ ವರ್ಗದ ಹುಡುಗಿಯ ಪಾತ್ರ ಮಾಡಿದ್ದೇನೆ. ಸಿನಿಮಾದಲ್ಲೂ ನನ್ನ ಪಾತ್ರದ ಹೆಸರು ಮನಿಶಾ’ ಎಂದು ಅವರು ಮಾಹಿತಿ ನೀಡಿದರು. ಸಾಂಗ್ ಬಿಡುಗಡೆ ವೇಳೆ ನಿರ್ಮಾಪಕ ಮಂಜುನಾಥ್ ಕಂದಕೂರ್, ಗಾಯಕಿ ಲಹರಿ ಮಹೇಶ್, ಆನಂದ್ ಆಡಿಯೋ ಶ್ಯಾಮ್, ಡ್ಯಾನ್ಸ್ ಕೊರಿಯೋಗ್ರಾಫರ್ ಕಲೈ ಮಾಸ್ಟರ್, ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಮುಂತಾದವರು ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು