AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಎಸ್. ಉಮೇಶ್ ಅವರ ಕಷ್ಟಕ್ಕೆ ಸ್ಪಂದಿಸಿದ ಲಹರಿ ಸಂಸ್ಥೆ; ಲಕ್ಷ ರೂಪಾಯಿ ಸಹಾಯ

ಕಾಶಿನಾಥ್​ ನಟನೆಯ ‘ಅವಳೇ ನನ್​ ಹೆಂಡ್ತಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಎಸ್​. ಉಮೇಶ್​ ಅವರು ಫೇಮಸ್​ ಆಗಿದ್ದರು. ಈಗ ಅವರಿಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ಚಿಕಿತ್ಸೆಗೆ ಹಣವಿಲ್ಲದ ಕಾರಣ ಸಹಾಯಕ್ಕೆ ಮನವಿ ಮಾಡಿದ್ದರು.

ನಿರ್ದೇಶಕ ಎಸ್. ಉಮೇಶ್ ಅವರ ಕಷ್ಟಕ್ಕೆ ಸ್ಪಂದಿಸಿದ ಲಹರಿ ಸಂಸ್ಥೆ; ಲಕ್ಷ ರೂಪಾಯಿ ಸಹಾಯ
ನಿರ್ದೇಶಕ ಎಸ್. ಉಮೇಶ್ ಅವರ ಕಷ್ಟಕ್ಕೆ ಸ್ಪಂದಿಸಿದ ಲಹರಿ ಸಂಸ್ಥೆ; ಲಕ್ಷ ರೂಪಾಯಿ ಸಹಾಯ
ರಾಜೇಶ್ ದುಗ್ಗುಮನೆ
| Edited By: |

Updated on: Jun 28, 2021 | 5:56 PM

Share

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್​. ಉಮೇಶ್​ ಅವರಿಗೆ ಅನಾರೋಗ್ಯ ಕಾಡಿದೆ. ಆದರೆ, ಆರ್ಥಿಕ ಸಂಕಷ್ಟದಿಂದ ಚಿಕಿತ್ಸೆ ಪಡೆಯಲೂ ಅವರ ಬಳಿ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರು  ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಈಗ ಲಹರಿ ಸಂಸ್ಥೆ ಇವರಿಗೆ ಸಹಾಯ ಮಾಡಿದೆ. ಕಾಶಿನಾಥ್​ ನಟನೆಯ ‘ಅವಳೇ ನನ್​ ಹೆಂಡ್ತಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಎಸ್​. ಉಮೇಶ್​ ಅವರು ಫೇಮಸ್​ ಆಗಿದ್ದರು. ಈಗ ಅವರಿಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ಚಿಕಿತ್ಸೆಗೆ ಹಣವಿಲ್ಲದ ಕಾರಣ ಸಹಾಯಕ್ಕೆ ಮನವಿ ಮಾಡಿದ್ದರು. ಉಮೇಶ್​ ನೆರವಿಗೆ ಲಹರಿ ಮ್ಯೂಸಿಕ್ ಸಂಸ್ಥೆ ಬಂದಿದೆ. ಇದರ ಮಾಲೀಕರಾದ ಮನೋಹರ್ ನಾಯ್ಡು ಅವರು ಉಮೇಶ್ ಅವರಿಗೆ ಒಂದು ಲಕ್ಷ ರೂಪಾಯಿ ನೀಡುವಂತೆ ಸಹೋದರ ಲಹರಿ ವೇಲುಗೆ ಹೇಳಿದ್ದಾರೆ.

‘ಅವಳೇ ನನ್ನ ಹೆಂಡತಿ ಚಿತ್ರ ಇನ್ನೂ ಡಬ್ಬಿಂಗ್ ಸಹ ಆಗಿರಲಿಲ್ಲ. ಆಗಲೇ ನಿರ್ಮಾಪಕ ಪ್ರಭಾಕರ್ ಹಾಗೂ ನಿರ್ದೇಶಕ ಎಸ್. ಉಮೇಶ್ ಅವರು ನನಗೆ ಆ ಚಿತ್ರ ತೋರಿಸಿ, ಕಥೆ ಹೇಳಿದ್ದರು. ಆ ಚಿತ್ರದ ಕಥೆ ಕೇಳಿದ ನಾನು ಇದೊಂದು ಸೂಪರ್ ಹಿಟ್ ಚಿತ್ರ ಆಗುತ್ತದೆ ಎಂದಿದ್ದೆ. ಆಗಿನಿಂದಲೂ ಎಸ್. ಉಮೇಶ್ ನಮ್ಮ ಲಹರಿ ಸಂಸ್ಥೆಯೊಂದಿಗೆ ಒಡನಾಟ ಹೊಂದಿದ್ದಾರೆ. ಅವರ ಕಷ್ಟಕ್ಕೆ ನೆರವಾಗುವುದು ನಮ್ಮ ಕರ್ತವ್ಯ’ ಎಂದು ಮನೋಹರ್ ನಾಯ್ಡು ಹೇಳಿದ್ದಾರೆ. ಸಂಕಷ್ಟದಲ್ಲಿರುವ ಸಂಗೀತಗಾರರಿಗೆ ಲಹರಿ ಸಂಸ್ಥೆ ಹತ್ತು ಲಕ್ಷ ರೂಪಾಯಿ ನೀಡಿತ್ತು.

ಇತ್ತೀಚೆಗೆ ವಿಡಿಯೋ ಮೂಲಕ ತಮ್ಮ ನೋವನ್ನು ಹೇಳಿಕೊಂಡಿದ್ದ ಉಮೇಶ್, ಸಹಾಯಕ್ಕಾಗಿ ಎಲ್ಲರ ಬಳಿ ಮನವಿ ಮಾಡಿಕೊಂಡಿದ್ದರು. ‘ಕಳೆದ ವರ್ಷ ಕೊರೊನಾ ಸಮಯದಲ್ಲಿ ನನಗೆ ಒಂದು ಕಿಡ್ನಿ ಸಮಸ್ಯೆ ಆಯ್ತು. ಎಡ ಭಾಗದ ಕಿಡ್ನಿ ಸಂಪೂರ್ಣ ವಿಫಲವಾಗಿದೆ. ಡಯಾಲಿಸಿಸ್​ ಇಲ್ಲದೇ ಕೇವಲ ಮೆಡಿಸಿನ್​ನಲ್ಲೇ ವೈದ್ಯರು ನನ್ನನ್ನು ಕಾಪಾಡಿದ್ದಾರೆ. ಡಯಾಲಿಸಿಸ್​ ಶುರುವಾದರೆ ನನ್ನ ಪರಿಸ್ಥಿತಿ ಕಷ್ಟ ಆಗುತ್ತದೆ. ಈಗ ಕೆಲಸ ಕೂಡ ಇಲ್ಲ. ನನ್ನ ಮಗ ಎಸ್​ಎಸ್​ಎಲ್​ಸಿ ಓದುತ್ತಿದ್ದಾನೆ. ಅವನ ಶಾಲೆಯ ಫೀಸ್​ ಕಟ್ಟಲು ಸಾಧ್ಯವಾಗಿಲ್ಲ. ಯಾರಾದರೂ ದಾನಿಗಳು ನನಗೆ ಸಹಾಯ ಮಾಡುವುದಾದರೆ ನಾನು ಅದನ್ನು ಸ್ವೀಕರಿಸುತ್ತೇನೆ’ ಎಂದು ಉಮೇಶ್​  ಅವರು ಕೋರಿದ್ದರು.

ಇದನ್ನೂ ಓದಿ:

ಅನಾರೋಗ್ಯ, ಆರ್ಥಿಕ ಸಂಕಷ್ಟದಲ್ಲಿ ‘ಅವಳೇ ನನ್​ ಹೆಂಡ್ತಿ’ ಚಿತ್ರದ ನಿರ್ದೇಶಕ ಉಮೇಶ್​; ಸಹಾಯಕ್ಕಾಗಿ ಮನವಿ 

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?