AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ Vs ಲಹರಿ ವೇಲು ವಿವಾದ​ ಶುರುವಾಗಿದ್ದು ಯಾಕೆ? ಅಂತ್ಯವಾಗಿದ್ದು ಹೇಗೆ? ಇಲ್ಲಿದೆ ಡಿಟೇಲ್ಸ್​

Lahari Velu: ರಕ್ಷಿತ್​ ಶೆಟ್ಟಿ ಮತ್ತು ಲಹರಿ ವೇಲು ಅವರು ತಮ್ಮ ನಡುವೆ ಇದ್ದ ವಿವಾದ ಬಗೆಹರಿಸಿಕೊಂಡು ಈಗ ಪುನಃ ಸ್ನೇಹ ಬೆಳೆಸಿದ್ದಾರೆ. ಅಷ್ಟಕ್ಕೂ ಇಷ್ಟೆಲ್ಲ ಜಟಾಪಟಿ ಯಾಕೆ ಆಯಿತು ಎಂಬ ಬಗ್ಗೆ ವೇಲು ಮಾತನಾಡಿದ್ದಾರೆ.

ರಕ್ಷಿತ್​ Vs ಲಹರಿ ವೇಲು ವಿವಾದ​ ಶುರುವಾಗಿದ್ದು ಯಾಕೆ? ಅಂತ್ಯವಾಗಿದ್ದು ಹೇಗೆ? ಇಲ್ಲಿದೆ ಡಿಟೇಲ್ಸ್​
ಲಹರಿ ವೇಲು, ರಕ್ಷಿತ್​ ಶೆಟ್ಟಿ, ಅಜನೀಶ್​ ಲೋಕನಾಥ್​
Follow us
TV9 Web
| Updated By: ಮದನ್​ ಕುಮಾರ್​

Updated on:Jul 03, 2021 | 2:57 PM

‘ಕಿರಿಕ್​ ಪಾರ್ಟಿ’ ಚಿತ್ರದಲ್ಲಿನ ಹಾಡೊಂದಕ್ಕೆ ಸಂಬಂಧಪಟ್ಟಂತೆ ಲಹರಿ ಮ್ಯೂಸಿಕ್​ ಕಂಪನಿ ಮತ್ತು ರಕ್ಷಿತ್​ ಶೆಟ್ಟಿ ನಡುವೆ ವಿವಾದ ಭುಗಿಲೆದ್ದಿತ್ತು. ತಮ್ಮ ಸಂಸ್ಥೆಗೆ ಸೇರಿದ ಹಾಡಿನ ಟ್ಯೂನ್​ ಅನ್ನು ಕಿರಿಕ್​ ಪಾರ್ಟಿ ಸಿನಿಮಾದಲ್ಲಿ ಅನುಮತಿ ಇಲ್ಲದೆ ಬಳಸಿಕೊಳ್ಳಲಾಗಿದೆ ಎಂದು ಲಹರಿ ವೇಲು ಆರೋಪ ಮಾಡಿದ್ದರು. ಈ ವಿಚಾರವಾಗಿ ಇಬ್ಬರೂ ಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಕೆಲವೇ ದಿನಗಳ ಹಿಂದೆ ಇಬ್ಬರ ನಡುವಿನ ಕಿರಿಕ್​ ಅಂತ್ಯವಾಗಿದೆ. ಹಾಗಾದರೆ ಇಬ್ಬರ ನಡುವಿನ ಆ ವಿವಾದ ಶುರುವಾಗಿದ್ದು ಯಾಕೆ? ಅಂತ್ಯವಾಗಿದ್ದು ಹೇಗೆ ಎಂಬ ಬಗ್ಗೆ ಲಹರಿ ವೇಲು ಮಾತನಾಡಿದ್ದಾರೆ.

‘ರಕ್ಷಿತ್​ ಶೆಟ್ಟಿ ಯುವಕರಾಗಿ ಚಿತ್ರರಂಗಕ್ಕೆ ಬಂದು ಒಳ್ಳೆಯ ಸಿನಿಮಾ ನೀಡಿದ್ದಾರೆ. ನನಗೆ ಅದು ಸಂತೋಷ. ಹೊಸಬರು ಯಾರೇ ಬಂದರೂ ಲಹರಿ ಸಂಸ್ಥೆ ಪ್ರೋತ್ಸಾಹಿಸುತ್ತದೆ. ಎ.ಆರ್​. ರೆಹಮಾನ್​, ಹಂಸಲೇಖ, ಗುರುಕಿರಣ್​ ಮುಂತಾದವರ ಮೊದಲ ಸಿನಿಮಾದ ಹಾಡುಗಳನ್ನು ನಾವು ಬಿಡುಗಡೆ ಮಾಡಿದಾಗ ಅವರು ಯಾರೆಂಬುದೇ ಜನರಿಗೆ ಗೊತ್ತಿರಲಿಲ್ಲ. ಕಿರಿಕ್​ ಪಾರ್ಟಿ ಹಾಡಿಗೆ ಸಂಬಂಧಿಸಿದಂತೆ ಒಂದಷ್ಟು ತಪ್ಪು ಗ್ರಹಿಕೆ ಆಗಿತ್ತು’ ಎಂದು ವೇಲು ಹೇಳಿದ್ದಾರೆ.

‘ಯಾವುದೇ ಒಂದು ಹಾಡನ್ನು ಪುನಃ ಬೇರೆ ಯಾವುದೇ ರೂಪದಲ್ಲಿ ಬಳಸಬೇಕು ಎಂದರೆ ಸಂಬಂಧಿಸಿದವರ ಜೊತೆ ಒಪ್ಪಂದ ಮಾಡಿಕೊಳ್ಳಬೇಕು. ಅದು ವಾಡಿಕೆ. ಆದರೆ ಕಿರಿಕ್​ ಪಾರ್ಟಿ ವಿಚಾರದಲ್ಲಿ ಕಮ್ಯೂನಿಕೇಷನ್​ನಲ್ಲಿ ಹೆಚ್ಚು-ಕಡಿಮೆ ಆಯಿತು. ಅವರೇ ಹೇಳಿದಂತೆ ಅವರ ಟೀಮ್​ನಲ್ಲಿದ್ದವರು ಯುವಕರು. ಸರಿಯಾಗಿ ಗೊತ್ತಿಲ್ಲದೆ ದಾರಿ ತಪ್ಪಿಸುವವರು ಇದ್ದೇ ಇರುತ್ತಾರೆ. ಅದು ಒಂದಕ್ಕೊಂದು ಬೆಳೆದು ವಿವಾದ ಆಯಿತು’ ಎಂದು ಕಾಂಟ್ರವರ್ಸಿ ಆಗಿದ್ದಕ್ಕೆ ಕಾರಣ ನೀಡಿದ್ದಾರೆ ವೇಲು.

‘ನಾಲ್ಕು ತಿಂಗಳ ಮುಂಚೆ ವಿಜಯ್​ ಕಿರಗಂದೂರು ಅವರು ನಮಗೆ ಒಂದು ಮಾತು ಹೇಳಿದರು. ಏನ್​ ಸರ್​ ಇದೆಲ್ಲ ಅಂತ ಕೇಳಿದರು. ನಾನು 45 ವರ್ಷದಿಂದ ಯಾರ ಮೇಲೂ ವಿವಾದ ಇಟ್ಟುಕೊಂಡವನಲ್ಲ. ನಾವು ಕೂಡ ನೋವು-ಅವಮಾನ ಅನುಭವಿಸಿದ್ದೇವೆ. ಹಾಗಂತ ನಾನು ಇನ್ನೊಬ್ಬನಿಗೆ ನೋವು ಕೊಡುವವನಲ್ಲ. ಇದು ದೊಡ್ಡ ವಿಷಯ ಅಲ್ಲ. 2 ನಿಮಿಷದಲ್ಲಿ ಬಗೆಹರಿಸಿಕೊಳ್ಳಬಹುದು ಅಂತ ಅವರಿಗೆ ಹೇಳಿದೆ. ರಕ್ಷಿತ್​, ನಾನು, ಅಜನೀಶ್​ ಮತ್ತು ನಿರ್ದೇಶಕ ಶೂನ್ಯ ಅವರು ಒಂದು ಹೋಟೆಲ್​ನಲ್ಲಿ ಮಾತನಾಡಿ ಬಗೆಹರಿಸಿಕೊಂಡೆವು’ ಎಂದು ವೇಲು ಹೇಳಿದ್ದಾರೆ.

‘ಎಲ್ಲ ವ್ಯವಹಾರದಲ್ಲೂ ಒಂದು ಮೌಲ್ಯ ಇರುತ್ತದೆ. ಯಾವುದೇ ಹಾಡನ್ನು ನಾವು ಹಣ ಕೊಟ್ಟು ಖರೀದಿಸಿರುತ್ತೇವೆ. ಬೇರೆಯವರ ಹಾಡನ್ನು ನಾವು ಬಳಸಿಕೊಂಡರೆ ಅವರೂ ಬಿಡುವುದಿಲ್ಲ. ಮೌಲ್ಯಗಳನ್ನು ಇಟ್ಟುಕೊಂಡು ಜೀವನ ಮಾಡಿದರೆ ನಮ್ಮ ಸಿನಿಮಾ ಇಂಡಸ್ಟ್ರೀಯಲ್ಲಿ ಯಾವುದೇ ವಿವಾದಗಳು ಇರುವುದಿಲ್ಲ’ ಎಂಬುದು ವೇಲು ಮಾತುಗಳು.

ಇದನ್ನೂ ಓದಿ:

ರಕ್ಷಿತ್​ ಶೆಟ್ಟಿ Vs​ ಸುದ್ದಿ ವಾಹಿನಿ: ‘ಬೇರೆಯವರಿಗೆ ಮರ್ಯಾದೆ ಕೊಟ್ಟರೆ ಮಾತ್ರ ನಮಗೆ ಮರ್ಯಾದೆ ಸಿಗೋದು’ ಎಂದ ಪುಷ್ಕರ್​

ಮುಗಿಯಿತು ರಕ್ಷಿತ್​ Vs​ ಲಹರಿ ಕಿರಿಕ್​; ಮತ್ತೆ ಸ್ನೇಹ ಚಿಗುರಿದ್ದಕ್ಕೆ ಹೊಸ ಸೆಲ್ಫೀ ಸಾಕ್ಷಿ

Published On - 2:03 pm, Sat, 3 July 21

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ