AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೂ ಬಿಡುಗಡೆ ಆಗಲಿದೆ ಮಂಚು ಲಕ್ಷ್ಮೀ ನಟನೆಯ ‘ಆದಿಪರ್ವ’ ಸಿನಿಮಾ

‘ಆದಿಪರ್ವ’ ಸಿನಿಮಾದ ಪೋಸ್ಟರ್​ ಕೌತುಕ ಮೂಡಿಸುವಂತಿದೆ. ನಟಿ ಮಂಚು ಲಕ್ಷ್ಮೀ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಪೋಸ್ಟರ್​ನಲ್ಲಿ ಅವರ ಗೆಟಪ್​ ಗಮನ ಸೆಳೆಯುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರ ಕನ್ನಡದಲ್ಲೂ ಬಿಡುಗಡೆ ಆಗಲಿದೆ. ‘ಆದಿಪರ್ವ’ ಸಿನಿಮಾ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ಕನ್ನಡದಲ್ಲೂ ಬಿಡುಗಡೆ ಆಗಲಿದೆ ಮಂಚು ಲಕ್ಷ್ಮೀ ನಟನೆಯ ‘ಆದಿಪರ್ವ’ ಸಿನಿಮಾ
ಲಕ್ಷ್ಮೀ ಮಂಚು
ಮದನ್​ ಕುಮಾರ್​
|

Updated on: Mar 04, 2024 | 9:23 PM

Share

ಟಾಲಿವುಡ್ ನಟ ಮೋಹನ್ ಬಾಬು ಅವರ ಪುತ್ರಿ ಮಂಚು ಲಕ್ಷ್ಮೀ (Lakshmi Manchu) ಅವರು ‘ಆದಿಪರ್ವ’ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಈ ಸಿನಿಮಾ ಕನ್ನಡ ಸೇರಿದಂತೆ ಒಟ್ಟು 5 ಭಾಷೆಗಳಲ್ಲಿ ಮೂಡಿಬರುತ್ತಿದೆ. ಸಂಜೀವ್ ಕುಮಾರ್ ಮೆಗೋಟಿ ಅವರು ‘ಆದಿಪರ್ವ’ (Adiparva Movie) ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಅನ್ವಿಕಾ ಆರ್ಟ್ಸ್’ ಹಾಗೂ ‘ಅಮೆರಿಕಾ ಇಂಡಿಯಾ ಎಂಟರ್‌ಟೈನ್‌ಮೆಂಟ್’ (ಎ.ಐ ಎಂಟರ್‌ಟೈನ್‌ಮೆಂಟ್ ) ಬ್ಯಾನರ್ ಮೂಲಕ ನಿರ್ಮಾಣ ಆಗುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಬಿಡುಗಡೆ ಆಗಲಿದೆ.

ಮಂಚು ಲಕ್ಷ್ಮೀ ಮಾತ್ರವಲ್ಲದೇ ಎಸ್ತರ್, ಸತ್ಯಪ್ರಕಾಶ್ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡ, ತಮಿಳು, ಮರಾಠಿ, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದ ನಟ-ನಟಿಯರು ‘ಆದಿಪರ್ವ’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡಿಗ ಹರೀಶ್ ಅವರು ಈ ಚಿತ್ರಕ್ಕೆ ಛಾಯಗ್ರಹಣ ಮಾಡಿದ್ದಾರೆ. ರಾಮ್ ಸುಧಿ (ಸುಧೀಂದ್ರ) ಅವರು ಸಂಭಾಷಣೆ ಹಾಗೂ ಸಾಹಿತ್ಯ ಬರೆದಿದ್ದಾರೆ.

‘ಆದಿಪರ್ವ’ ಸಿನಿಮಾದಲ್ಲಿ ಬಹು ತಾರಾಗಣ ಇದೆ. ವಿಶೇಷ ಏನೆಂದರೆ, ಈ ಸಿನಿಮಾ 2 ಭಾಗಗಳಲ್ಲಿ ಬಿಡುಗಡೆ ಆಗಲಿದೆ. ಆ ಮೂಲಕ ಪ್ರೇಕ್ಷಕರಿಗೆ ಬ್ಯಾಕ್​ ಟು ಬ್ಯಾಕ್​ ಮನರಂಜನೆ ನೀಡಲಿದೆ. ಮಾರ್ಚ್ 8ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಲಿದೆ. ಅದೇ ದಿನ ಒಂದು ಸಾಂಗ್​ ರಿಲೀಸ್​ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಏಪ್ರಿಲ್ ತಿಂಗಳ 2ನೇ ವಾರದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಆದಿಪರ್ವ’ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಈಗಲೇ ಸಿಕ್ಕಿದೆ ‘ಶೈತಾನ್​’ ಅಬ್ಬರಿಸುವ ಸೂಚನೆ; ಜೋರಾಗಿದೆ ಅಡ್ವಾನ್ಸ್​ ಬುಕಿಂಗ್​

ರವಿ ಕಿರಣ್ ನಿರ್ದೇಶನ ಮಾಡಿದ್ದ ‘ಬದುಕು’ ಚಿತ್ರಕ್ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುವ ಮೂಲಕ ಕನ್ನಡದ ಸಿನಿಪ್ರಿಯರಿಗೆ ಪರಿಚಿತವಾದ ಸಂಜೀವ್ ಕುಮಾರ್ ಮೆಗೋಟಿ ಅವರು, ನಂತರ ಪೂಜಾ ಗಾಂಧಿ ನಟನೆಯ ‘ಆಪ್ತ’, ‘ಕ್ಯೂ’ ಚಿತ್ರಗಳನ್ನು ನಿರ್ದೇಶಿಸಿದರು. ಕಳೆದ 8 ವರ್ಷಗಳಿಂದ ತೆಲುಗು ಹಾಗೂ ಕನ್ನಡ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್​ ಆಗಿದ್ದಾರೆ. 50ಕ್ಕೂ ಹೆಚ್ಚು ಧಾರಾವಾಹಿಗಳಿಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ತಮ್ಮದೇ ಬ್ಯಾನರ್ ಹೊಂದಿರುವ ಅವರು ಧಾರಾವಾಹಿಗಳನ್ನು ನಿರ್ಮಿಸುತ್ತಿದ್ದಾರೆ. ಈಗ ಬಹುದಿನಗಳ ಬಳಿಕ ಹಿರಿತೆರೆಗೆ ಮರಳಿದ್ದು, ‘ಆದಿಪರ್ವ’ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ