AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ‘ಲ್ಯಾಂಡ್​ಲಾರ್ಡ್’ ವಿಜಯ್ ಜಾಥಾ

ಇತ್ತೀಚೆಗೆ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆದಿರುವ ‘ಲ್ಯಾಂಡ್​ಲಾರ್ಡ್’ ಚಿತ್ರಕ್ಕೆ ಈಗ ವಿದ್ಯಾರ್ಥಿಗಳ ಬೆಂಬಲ ಸಿಕ್ಕಿದೆ. ಈ ಸಿನಿಮಾದ ನಾಯಕ ನಟ ದುನಿಯಾ ವಿಜಯ್ ಅವರು ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ಜಾಥಾ ಮಾಡಿದ್ದಾರೆ. ಈ ಜಾಥಾ ವೇಳೆ ಹೆಣ್ಣುಮಗುವಿಗೆ ಭೀಮ ಪುತ್ರಿ ಎಂದು ನಾಮಕರಣ ಮಾಡಲಾಯಿತು. ಆ ಬಗ್ಗೆ ಇಲ್ಲಿದೆ ವಿವರ..

ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ‘ಲ್ಯಾಂಡ್​ಲಾರ್ಡ್’ ವಿಜಯ್ ಜಾಥಾ
Duniya Vijay With Bangalore University Students
ಮದನ್​ ಕುಮಾರ್​
|

Updated on: Jan 28, 2026 | 7:23 PM

Share

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ. ಶೆಟ್ಟಿ, ರಿತನ್ಯಾ, ಶಿಶಿರ್ ಬೈಕಾಡಿ ಮುಂತಾದವರು ನಟಿಸಿರುವ ‘ಲ್ಯಾಂಡ್​ಲಾರ್ಡ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿದೆ. ಈ ಸಿನಿಮಾಗೆ ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ.ಈ ಸಿನಿಮಾದಲ್ಲಿನ ಕಲಾವಿದರ ನಟನೆ, ಕಥೆ, ಚಿತ್ರದ ಆಶಯವನ್ನು ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ. ಈ ಪ್ರಯುಕ್ತ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ತಂಡದವರು ಇಂದು (ಜನವರಿ 28) ಮಧ್ಯಾಹ್ನ 1.45ಕ್ಕೆ ವಿದ್ಯಾರ್ಥಿಗಳ ಜೊತೆ ಜಾಥಾ ನಡೆಸಿದರು.

‘ಲ್ಯಾಂಡ್​ಲಾರ್ಡ್’ ಸಿನಿಮಾ ತಂಡ ನಡೆಸಿದ ಜಾಥಾದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡರು. ಅವರ ಜೊತೆ ನಟ ದುನಿಯಾ ವಿಜಯ್ ಅವರು ಭಾಗಿಯಾದರು. ಸುಮಾರು 2 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಎಲ್ಲರೂ ಸಾಗಿದರು. ಆ ಮೂಲಕ ‘ಲ್ಯಾಂಡ್​ಲಾರ್ಡ್’ ಸಿನಿಮಾವನ್ನು ಇನ್ನಷ್ಟು ಜನರಿಗೆ ತಲುಪಿಸುವ ಕೆಲಸ ಮಾಡಲಾಯಿತು.

ಈ ಸಂಧರ್ಭದಲ್ಲಿ ದುನಿಯಾ ವಿಜಯ್ ಅವರು ಒಂದು ಹೆಣ್ಣು ಮಗುವಿಗೆ ಭೀಮ ಪುತ್ರಿ ಎಂದು ಹೆಸರಿಟ್ಟು ನಾಮಕರಣ ಮಾಡಿದ್ದು ವಿಶೇಷವಾಗಿತ್ತು. ಆ ಮಗುವಿನ ಭವಿಷ್ಯಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು 25 ಸಾವಿರ ರೂಪಾಯಿ ಮತ್ತು ದುನಿಯಾ ವಿಜಯ್ ಅವರು 75 ಸಾವಿರ ರೂಪಾಯಿ ಸೇರಿಸಿ ಒಟ್ಟು 1 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಲಾಯಿತು.

ಜಾಥಾ ಬಳಿಕ ದುನಿಯಾ ವಿಜಯ್ ಅವರು ಮಾತನಾಡಿದರು. ‘ಅಂಬೇಡ್ಕರ್ ಅವರು ಸಂವಿಧಾನ ಬರೆದಿರೋದು ಎಲ್ಲರಿಗೂ. ಯಾವುದೇ ಪ್ರತ್ಯೇಕ ಜಾತಿಗೋಸ್ಕರ ಅಲ್ಲ. ಪ್ರತಿಯೊಬ್ಬರಿಗೂ ಈ ಸಂವಿಧಾನ ಬೇಕು. ಈ ಹೋರಾಟ ಯಾರದ್ದೋ ಮೇಲಿನ ದ್ವೇಷಕ್ಕಾಗಿ ಅಲ್ಲ. ಅಥವಾ ಕಿಚ್ಚಿಗಲ್ಲ ಇದು ನನ್ನ ಸಂವಿಧಾನಕ್ಕಾಗಿ’ ಎಂದು ಅವರು ಹೇಳಿದರು. ವಿದ್ಯಾರ್ಥಿಗಳಿಗೆ ಹಾಗೂ ಬೆಂಗಳೂರ ವಿಶ್ವವಿದ್ಯಾಲಯಕ್ಕೆ ಅವರು ಧನ್ಯವಾದ ತಿಳಿಸಿದರು.

ಇದನ್ನೂ ಓದಿ: Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’

ಇತ್ತೀಚೆಗೆ ‘ಲ್ಯಾಂಡ್​ಲಾರ್ಡ್’ ಸಿನಿಮಾ ತಂಡದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದರು. ಸಿನಿಮಾದ ಆಶಯಕ್ಕೆ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದ್ದರು. ಅಲ್ಲದೇ ತಾವು ಕೂಡ ಈ ಸಿನಿಮಾವನ್ನು ನೋಡುವುದಾಗಿ ತಿಳಿಸಿದ್ದರು. ರೆಟ್ರೋ ಕಾಲದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಹಲವು ಕಡೆಗಳಲ್ಲಿ ಹೌಸ್​ಫುಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ