AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲ್ಯಾಂಡ್​​​ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ದುನಿಯಾ ವಿಜಯ್ ನಟನೆಯ 'ಲ್ಯಾಂಡ್​​ಲಾರ್ಡ್' ಸಿನಿಮಾ ಜನವರಿ 23ರಂದು ತೆರೆಕಂಡು ವಿಮರ್ಶಕರ ಪ್ರಶಂಸೆಗೆ ಪಾತ್ರವಾಗಿದೆ. ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ಕುರಿತ ಈ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಈ ಬೆಂಬಲದಿಂದ 'ಲ್ಯಾಂಡ್​​ಲಾರ್ಡ್' ಹೆಚ್ಚು ಜನರನ್ನು ತಲುಪಲಿದ್ದು, 70ರ ದಶಕದ ಜಾತಿ ಸಂಘರ್ಷ ಹಾಗೂ ರೈತರ ಬವಣೆಯನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ತಲುಪಿಸಲು ನೆರವಾಗಲಿದೆ.

‘ಲ್ಯಾಂಡ್​​​ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ
ಲ್ಯಾಂಡ್​​ಲಾರ್ಡ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Feb 03, 2026 | 1:16 PM

Share

ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​​ಲಾರ್ಡ್’ ಸಿನಿಮಾ (Land Lord Movie) ಜನವರಿ 23ರಂದು ರಿಲೀಸ್ ಆಗಿದೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತೆ ಆಗಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ.

‘ಲ್ಯಾಂಡ್​​ಲಾರ್ಡ್ 70ರ ದಶಕದ ಕಥೆ ಹೊಂದಿದೆ. ರಾಚಯ್ಯ (ದುನಿಯಾ ವಿಜಯ್), ನಿಂಗವ್ವ (ರಚಿತಾ ರಾಮ್) ಮಗಳು ಭಾಗ್ಯಾ (ರಿತನ್ಯಾ ರಾಮ್) ಜೊತೆ ಹಾಯಾಗಿ ಜೀವನ ನಡೆಸುತ್ತಿರುತ್ತಾರೆ. ಆ ಊರಿನಲ್ಲಿ ಸಣ್ಣ ಧಣಿ (ರಾಜ ಬಿ. ಶೆಟ್ಟಿ) ಪಾರುಪತ್ಯ. ಆತ ಹೇಳಿದಂತೆ ನಡೆಯಬೇಕು. ಯಾರ ಬಳಿಯೂ ಜಮೀನು ಇರಬಾರದು ಎಂಬುದು ಆತನ ಆಜ್ಞೆ. ತಾವೇ ಬೆಳೆದ ಬೆಳೆಯಲ್ಲಿ ಸಿಗೋದು ಒಂದು ಹಿಡಿ ಮಾತ್ರ. ಇದನ್ನು ಪ್ರಶ್ನಿಸಿದ ಭಾಗ್ಯಾಳ ಪ್ರಿಯಕರನ ಸುಟ್ಟು ಕೊಲ್ಲಲಾಗುತ್ತದೆ. ಈ ಅಸಮಾನತೆ ವಿರುದ್ಧ ರಾಚಯ್ಯ ಸಿಡಿದೇಳುತ್ತಾರೆ. ಈ ರೀತಿಯಲ್ಲಿ ಸಿನಿಮಾ ಇದೆ.

‘ಲ್ಯಾಂಡ್​​ಲಾರ್ಡ್’ ಚಿತ್ರವನ್ನು ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ. ಈ ಮೊದಲು ವಿಜಯ್ ಹಾಗೂ ಜಡೇಶ್ ಕುಮಾರ್ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತೆರಿಗೆ ವಿನಾಯಿತಿ ಕೊಡುವಂತೆ ಮನವಿ ಮಾಡಿದ್ದರು. ಈ ವೇಳೆ ಸಿನಿಮಾ ನೋಡದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಸಂಬಂಧಪಟ್ಟ ಅಧಿಕಾರಿಗಳಿಗೆ ತೆರಿಗೆ ವಿನಾಯಿತಿ ನೀಡಲು ಸೂಚನೆ ಸಿದ್ದರಾಮಯ್ಯ ನೀಡಿದ್ದಾರೆ. ತೆರಿಗೆ ವಿನಾಯಿತಿ ಸಿಗುವುದರಿಂದ ಟಿಕೆಟ್ ದರ ಕಡಿಮೆ ಆಗಲಿದೆ.

ಇದನ್ನೂ ಓದಿ: ಭೂತ-ಪ್ರೇತಗಳ ‘ರಕ್ಕಸಪುರ’ದಲ್ಲಿ ರಾಜ್ ಬಿ ಶೆಟ್ರು ರಕ್ಷಕನಾ-ರಾಕ್ಷಸನಾ?

‘ಲ್ಯಾಂಡ್​​ಲಾರ್ಡ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಬುಕ್ ಮೈ ಶೋನನಲ್ಲಿ ಸುಮಾರು ಮೂರು ಸಾವಿರ ಜನ ರೇಟಿಂಗ್ ನೀಡಿದ್ದು, 9.4/10 ಸಿಕ್ಕಿದೆ. ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ನಟನೆಯನ್ನು ಕೊಂಡಾಡಿದ್ದಾರೆ. ಈ ಚಿತ್ರದ ಮೂಲಕ ದುನಿಯಾ ವಿಜಯ್ ಮಗಳು ರಿತನ್ಯ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ ಎಂಬುದು ವಿಶೇಷ.

ವರದಿ: ಈರಣ್ಣಾ ಬಸವ 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:15 pm, Tue, 3 February 26

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ