AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raayan Raj Sarja: ಚಿರು- ಮೇಘನಾ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ

Royan Raj Sarja: ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಮಾರಂಭ ನಡೆದಿದೆ.

Raayan Raj Sarja: ಚಿರು- ಮೇಘನಾ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ
ಚಿರಂಜೀವಿ ಸರ್ಜಾ - ಮೇಘನಾ ರಾಜ್​ - ರಾಯನ್ ರಾಜ್ ಸರ್ಜಾ
TV9 Web
| Edited By: |

Updated on:Sep 03, 2021 | 11:19 AM

Share

ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಸರ್ಜಾ ಅವರ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ನಾಮಕರಣ ಸಮಾರಂಭ ನಡೆದಿದ್ದು, ಕಾರ್ಯಕ್ರಮದಲ್ಲಿ ಸರ್ಜಾ ಕುಟುಂಬ ಹಾಗೂ ಆಪ್ತರು ಭಾಗಿಯಾಗಿದ್ದರು. 10 ತಿಂಗಳ ಚಿರು- ಮೇಘನಾ ಪುತ್ರನನ್ನು ಇದುವರೆಗೆ ಜೂನಿಯರ್ ಚಿರು ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ನಾಮಕರಣದ ಕುರಿತು ಮೇಘನಾ ಇತ್ತೀಚೆಗಷ್ಟೇ ಘೋಷಿಸಿದ್ದರು.

‘ರಾಯನ್ ರಾಜ್ ಸರ್ಜಾ’ ಹೆಸರನ್ನು ವಿಡಿಯೊ ಮುಖಾಂತರ ಘೋಷಿಸಿದ ಮೇಘನಾ ರಾಜ್:

View this post on Instagram

A post shared by Meghana Raj Sarja (@megsraj)

ಇಷ್ಟು ದಿನ ಜ್ಯೂ. ಚಿರುಗೆ ಹಲವು ಹೆಸರುಗಳಿಂದ ಕರೆಯಲಾಗುತ್ತಿತ್ತು. ಮೇಘನಾ ತಂದೆ ಸುಂದರ್​ ರಾಜ್​ ಅವರು ಚಿಂಟು ಎಂದು ಕರೆಯುತ್ತಿದ್ದರು. ಅಷ್ಟೇ ಅಲ್ಲದೇ ಚಿರು ಬಚ್ಚ, ಚಿರು ಬೇಬಿ, ಶಿಷ್ಯ, ಮಿನಿಮಮ್​, ಬರ್ಫಿ, ಕುಟ್ಟಿ ಪಾಪ, ಮಂಚೆ, ಮರಿ ಸಿಂಗ, ಲಿಟ್ಲ್​ ಚಿರು, ಸಿಂಬಾ, ದಿಷ್ಟೋ ಎಂಬಿತ್ಯಾದಿ ಹೆಸರುಗಳ ಮೂಲಕ ಆಪ್ತರು ಈ ಮಗುವನ್ನು ಮುದ್ದಾಗಿ ಕರೆಯುತ್ತಿದ್ದರು. ಈಗ ಚಿರು-ಮೇಘನಾ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಿರುವುದು ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಮೇಘನಾ ಹಂಚಿಕೊಂಡಿದ್ದ ಚಿತ್ರ:

View this post on Instagram

A post shared by Meghana Raj Sarja (@megsraj)

ಕಳೆದ ವರ್ಷ ಜೂನ್​ 7ರಂದು ಚಿರು ನಿಧನರಾದ ಬಳಿಕ ದುಃಖದಲ್ಲಿದ್ದ ಮೇಘನಾ ರಾಜ್​ ಮತ್ತು ಸರ್ಜಾ ಕುಟುಂಬದಲ್ಲಿ ಜ್ಯೂ. ಚಿರು ಆಗಮನದಿಂದ ಮತ್ತೆ ನಗು ಅರಳಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಮಗನ ಫೋಟೋ ಮತ್ತು ವಿಡಿಯೋಗಳನ್ನು ಮೇಘನಾ ರಾಜ್ ಆಗಾಗ ಹಂಚಿಕೊಳ್ಳುತ್ತ ಇರುತ್ತಾರೆ.

ಇದನ್ನೂ ಓದಿ:

ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರನ ನಾಮಕರಣ; ಹೆಸರೇನು ಎಂದು ಕೇಳಿದವರಿಗೆ ಇಲ್ಲಿದೆ ಅಪ್​ಡೇಟ್​

ಕೆಬಿಸಿಯಲ್ಲಿ ಗೆದ್ದು ಲಕ್ಷಾಧಿಪತಿಯಾದ ರಾಜಸ್ಥಾನದ ಸರ್ಕಾರಿ ಶಾಲಾ ಶಿಕ್ಷಕಿ ಆಯೆಷಾ; ಪ್ರಶಸ್ತಿಯ ಮೊತ್ತವನ್ನು ಏನು ಮಾಡುತ್ತಾರಂತೆ?

(Late actor Chiranjeevi Sarja and actress Meghana Raj son named as Raayan Raj Sarja)

Published On - 11:12 am, Fri, 3 September 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ