AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆಯುತ್ತಿರುವ ‘ಪುಕ್ಸಟ್ಟೆ ಲೈಫು’ ಟ್ರೈಲರ್; ಸಂಚಾರಿ ವಿಜಯ್​ರನ್ನು ನೋಡಿ ಕಣ್ತುಂಬಿಕೊಂಡ ಅಭಿಮಾನಿಗಳು

Sanchari Vijay: ವೃತ್ತಿ ಜೀವನದಲ್ಲಿ ವಿಶೇಷ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ನಟ ದಿ.ಸಂಚಾರಿ ವಿಜಯ್ ಅಭಿನಯಿಸಿದ್ದ ‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಗಮನ ಸೆಳೆಯುತ್ತಿರುವ ‘ಪುಕ್ಸಟ್ಟೆ ಲೈಫು’ ಟ್ರೈಲರ್; ಸಂಚಾರಿ ವಿಜಯ್​ರನ್ನು ನೋಡಿ ಕಣ್ತುಂಬಿಕೊಂಡ ಅಭಿಮಾನಿಗಳು
‘ಪುಕ್ಸಟ್ಟೆ ಲೈಫು’ ಚಿತ್ರದ ಪೋಸ್ಟರ್
TV9 Web
| Edited By: |

Updated on: Sep 01, 2021 | 5:23 PM

Share

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ದಿ.ಸಂಚಾರಿ ವಿಜಯ್ ಬಣ್ಣ ಹಚ್ಚಿರುವ ‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಅವರ ಭಿನ್ನವಾದ ಪಾತ್ರ ಗಮನ ಸೆಳೆದಿದೆ. ವೃತ್ತಿ ಜೀವನದಲ್ಲಿ ಪ್ರತಿ ಚಿತ್ರದಲ್ಲೂ ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಿಜಯ್, ನೂತನ ಚಿತ್ರದ ಟ್ರೈಲರ್​ನಲ್ಲೂ ಸಂಪೂರ್ಣವಾಗಿ ಆವರಿಸಿಕೊಂಡು ನೋಡುಗರ ಮನಗೆದ್ದಿದ್ದಾರೆ. ಚಿತ್ರದಲ್ಲಿ ಬೀಗ ರಿಪೇರಿ ಮಾಡುವ ವ್ಯಕ್ತಿಯೊಬ್ಬನ ಪಾತ್ರವನ್ನು ವಿಜಯ್ ನಿರ್ವಹಿಸಿದ್ದಾರೆ.

ಪುಕ್ಸಟ್ಟೆ ಲೈಫು ಚಿತ್ರವನ್ನು ಅರವಿಂದ್ ಕುಪ್ಳೀಕರ್ ನಿರ್ದೇಶನ ಮಾಡಿದ್ದು, ಸರ್ವಸ್ವ ಪ್ರೊಡಕ್ಷನ್ಸ್​ನ ಬ್ಯಾನರ್​ನಲ್ಲಿ ನಾಗರಾಜ ಸೋಮಯಾಜಿ ನಿರ್ಮಾಣ ಮಾಡಿದ್ದಾರೆ. ವಸು ದೀಕ್ಷಿತ್ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದಲ್ಲಿ ಅಚ್ಯುತ್ ಕುಮಾರ್, ರಂಗಾಯಣ ರಘು, ಮಾತಂಗಿ ಪ್ರಸನ್ನ ಸೇರಿದಂತೆ ಖ್ಯಾತ ನಾಮರು ಬಣ್ಣ ಹಚ್ಚಿದ್ದಾರೆ.

ಚಿತ್ರದ ಟ್ರೈಲರ್ ಇಲ್ಲಿದೆ:

 ಗಮನ ಸೆಳೆಯುತ್ತಿರುವ ವಿಜಯ್ ಅಭಿನಯದ ‘ಮೇಲೊಬ್ಬ ಮಾಯಾವಿ’: ಸಂಚಾರಿ ವಿಜಯ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಮೇಲೊಬ್ಬ ಮಾಯಾವಿ’ ಚಿತ್ರದ ಕಂಟೆಂಟ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಹರಳು ಮಾಫಿಯಾದ (gem mafia) ಕಥೆಯನ್ನು ಒಳಗೊಂಡಿರುವ ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಕೆರಳಿಸಿತ್ತು. ಸಿನಿಮಾದ ಟೈಟಲ್ ವಿಡಿಯೋ ಸಾಂಗ್ ಕೂಡ ಗಮನ ಸೆಳೆಯುತ್ತಿದ್ದು, ಬಿಗ್ ಬಾಸ್ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಈ ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ ಎಲ್.ಎನ್. ಶಾಸ್ತ್ರೀ, ಹೇಮಂತ್ ಮತ್ತು ಶಮಿತಾ ಮಲ್ನಾಡ್ ಹಾಡಿದ್ದಾರೆ. ಎಲ್.ಎನ್. ಶಾಸ್ತ್ರೀಯವರು ತಮ್ಮ ಕೊನೆಯ ದಿನಗಳಲ್ಲಿ ಹಾಡಿದ ಈ ಹಾಡು ಸಿನಿ ರಸಿಕರಿಗೆ ಪ್ರಿಯವಾಗಿತ್ತು. ‘ಮೇಲೊಬ್ಬ ಮಾಯಾವಿ’ಯನ್ನು ಬಿ.ನವೀನ್ ಕೃಷ್ಣ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ದಕ್ಷಿಣ ಕೊರಿಯಾದತ್ತ ಹೊರಟ ಕನ್ನಡದ ‘ಪೆಡ್ರೋ’; ಸಂತಸ ಹಂಚಿಕೊಡ ರಿಷಬ್​ ಶೆಟ್ಟಿ

ಫೈಟರ್ ವಿವೇಕ್ ಕುಟುಂಬಕ್ಕೆ ₹5 ಲಕ್ಷ ಚೆಕ್ ನೀಡಿದ ಗುರು ದೇಶಪಾಂಡೆ; ವಿವೇಕ್ ತಮ್ಮನ ಶಿಕ್ಷಣ ವೆಚ್ಚ ಭರಿಸುವುದಾಗಿ ಭರವಸೆ

(Late actor Sanchari Vijay starring Kannada movie Puksatte Lifeuu trailer is launched)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್