AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್ ಮೃತಪಟ್ಟಾಗ ಊಟ ಬಿಟ್ಟಿದ್ದ ಅವರ ಮನೆಯ ಪ್ರೀತಿಯ ಶ್ವಾನ ಕನ್ವರ್‌ ನಿಧನ

ಅಂಬರೀಷ್ ಬದುಕಿರುವಾಗ ಕನ್ವರ್‌ ಶ್ವಾನ ಅಂಬಿಗೆ ಮೋಸ್ಟ್ ಫೇವರಿಟ್ ಆಗಿತ್ತು. ಅಲ್ಲದೇ ಅಂಬರೀಷ್ ಅವರು ಕನ್ವರ್‌ನನ್ನು ಪ್ರತಿದಿನ ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದರು.

ಅಂಬರೀಷ್ ಮೃತಪಟ್ಟಾಗ ಊಟ ಬಿಟ್ಟಿದ್ದ ಅವರ ಮನೆಯ ಪ್ರೀತಿಯ ಶ್ವಾನ ಕನ್ವರ್‌ ನಿಧನ
ಅಂಬರೀಷ್​ ಜತೆ ಕನ್ವರ್​ಲಾಲ್​
ರಾಜೇಶ್ ದುಗ್ಗುಮನೆ
|

Updated on:May 24, 2021 | 5:37 PM

Share

ನಟ ಅಂಬರೀಷ್​ ತಾವು ಸಾಕಿದ ಕನ್ವರ್‌ ಹೆಸರಿನ ನಾಯಿಯನ್ನು ತುಂಬಾನೇ ಇಷ್ಟಪಟ್ಟಿದ್ದರು. ನಿತ್ಯ ಅವರು ಕನ್ವರ್ ​​ನನ್ನು ವಾಕಿಂಗ್​ ಕರೆದುಕೊಂಡು ಹೋಗುತ್ತಿದ್ದರು. ಈಗ ಈ ಶ್ವಾನ ಮೃತಪಟ್ಟಿದೆ. ಈ ಬಗ್ಗೆ ಅಂಬಿ ಪರಮಾಪ್ತರಾಗಿದ್ದ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಅಂಬರೀಷ್ ಬದುಕಿರುವಾಗ ಕನ್ವರ್‌  ಶ್ವಾನ ಅಂಬಿಗೆ ಮೋಸ್ಟ್ ಫೇವರಿಟ್ ಆಗಿತ್ತು. ಅಲ್ಲದೇ ಅಂಬರೀಷ್ ಅವರು ಕನ್ವರ್‌ನನ್ನು ಪ್ರತಿದಿನ ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಈ ಶ್ವಾನ ಅಂಬರೀಷ್​​​ ಅವರನ್ನು ತುಂಬಾನೇ ಹಚ್ಚಿಕೊಂಡಿತ್ತು.

2018ರ ನವೆಂಬರ್​ 24ರಂದು ಅಂಬರೀಶ್​ ಮೃತಪಟ್ಟಿದ್ದರು. ಅಂಬಿ ಅಗಲಿದ ಕ್ಷಣ ಈ ಶ್ವಾನ ಊಟ ಕೂಡ ಮಾಡದೇ ಕಂಬನಿ ಸುರಿಸುತ್ತಿತ್ತು. ತಮ್ಮ ಸಿನಿಮಾದ ಪಾತ್ರದ ಹೆಸರನ್ನೇ ಅಂಬರೀಷ್ ತಮ್ಮ ಪ್ರೀತಿಯ ಶ್ವಾನಕ್ಕಿಟ್ಟಿದ್ದರು ಅನ್ನೋದು ವಿಶೇಷ. ಕನ್ವರ್‌  ಕೂಡ ಅಂಬಿಯನ್ನು  ಹಚ್ಚಿಕೊಂಡಿತ್ತು. ಇದೀಗ ಅಂಬಿ ಪ್ರೀತಿಯ ಕನ್ವರ್‌ ಇಹಲೋಕ ತ್ಯಜಿಸಿದೆ.

ಅಂಬಿ ಪರಮಾಪ್ತರಾಗಿದ್ದ ಶ್ರೀನಿವಾಸ್, ಕನ್ವರ್‌  ಫೋಟೊಗಳನ್ನ ಹಂಚಿಕೊಂಡಿದ್ದಾರೆ. ಕನ್ವರ್​  ನಿಧನಕ್ಕೆ ಕುಟುಂಬವರ್ಗವೂ ಬೇಸರದಲ್ಲಿದೆ ಎಂದಿದ್ದಾರೆ. ಈ ವಿಚಾರ ಕೇಳಿ ಅಂಬಿ ಅಭಿಮಾನಿಗಳು ಕೂಡ ಬೇಸರ ಹೊರ ಹಾಕಿದ್ದಾರೆ.

ಅಂಬರೀಷ್​ ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಛಾಪು ಮೂಡಿಸಿದ್ದರು. ಕೊನೆಯದಿನದವರೆಗೂ ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು. 2018ರ ನವೆಂಬರ್​ 24ರಂದು ಅವರು ಮೃತಪಟ್ಟ ನಂತರ ಇಡೀ ಚಿತ್ರರಂಗ ಕಂಬನಿ ಮಿಡಿದಿತ್ತು. ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿತ್ತು.

ಇದನ್ನೂ ಓದಿ:  ಚಾಮರಾಜನಗರ ಘಟನೆ.. ಘೋರ ಅನ್ಯಾಯ! ನಾವು ತಪ್ಪು ಮಾಡಿದ್ರೆ ದೇವರು ಯಾವತ್ತು ನಮ್ಮನ್ನು ರಕ್ಷಿಸಲ್ಲ : ಸುಮಲತಾ ಅಂಬರೀಷ್

ಸಂಸದೆ ಸುಮಲತಾ ಅಂಬರೀಷ್ ವಿಶೇಷ ಸಂದರ್ಶನ: ‘ಕರ್ತವ್ಯ ದೋಷದಿಂದ ಒಂದು ಜೀವ ಹೋದ್ರೂ ಅದಕ್ಕೆ ನಾವೇ ಜವಾಬ್ದಾರಿಷ್

Published On - 5:20 pm, Mon, 24 May 21

Follow Us
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ