AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್ ಮೃತಪಟ್ಟಾಗ ಊಟ ಬಿಟ್ಟಿದ್ದ ಅವರ ಮನೆಯ ಪ್ರೀತಿಯ ಶ್ವಾನ ಕನ್ವರ್‌ ನಿಧನ

ಅಂಬರೀಷ್ ಬದುಕಿರುವಾಗ ಕನ್ವರ್‌ ಶ್ವಾನ ಅಂಬಿಗೆ ಮೋಸ್ಟ್ ಫೇವರಿಟ್ ಆಗಿತ್ತು. ಅಲ್ಲದೇ ಅಂಬರೀಷ್ ಅವರು ಕನ್ವರ್‌ನನ್ನು ಪ್ರತಿದಿನ ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದರು.

ಅಂಬರೀಷ್ ಮೃತಪಟ್ಟಾಗ ಊಟ ಬಿಟ್ಟಿದ್ದ ಅವರ ಮನೆಯ ಪ್ರೀತಿಯ ಶ್ವಾನ ಕನ್ವರ್‌ ನಿಧನ
ಅಂಬರೀಷ್​ ಜತೆ ಕನ್ವರ್​ಲಾಲ್​
ರಾಜೇಶ್ ದುಗ್ಗುಮನೆ
|

Updated on:May 24, 2021 | 5:37 PM

Share

ನಟ ಅಂಬರೀಷ್​ ತಾವು ಸಾಕಿದ ಕನ್ವರ್‌ ಹೆಸರಿನ ನಾಯಿಯನ್ನು ತುಂಬಾನೇ ಇಷ್ಟಪಟ್ಟಿದ್ದರು. ನಿತ್ಯ ಅವರು ಕನ್ವರ್ ​​ನನ್ನು ವಾಕಿಂಗ್​ ಕರೆದುಕೊಂಡು ಹೋಗುತ್ತಿದ್ದರು. ಈಗ ಈ ಶ್ವಾನ ಮೃತಪಟ್ಟಿದೆ. ಈ ಬಗ್ಗೆ ಅಂಬಿ ಪರಮಾಪ್ತರಾಗಿದ್ದ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಅಂಬರೀಷ್ ಬದುಕಿರುವಾಗ ಕನ್ವರ್‌  ಶ್ವಾನ ಅಂಬಿಗೆ ಮೋಸ್ಟ್ ಫೇವರಿಟ್ ಆಗಿತ್ತು. ಅಲ್ಲದೇ ಅಂಬರೀಷ್ ಅವರು ಕನ್ವರ್‌ನನ್ನು ಪ್ರತಿದಿನ ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಈ ಶ್ವಾನ ಅಂಬರೀಷ್​​​ ಅವರನ್ನು ತುಂಬಾನೇ ಹಚ್ಚಿಕೊಂಡಿತ್ತು.

2018ರ ನವೆಂಬರ್​ 24ರಂದು ಅಂಬರೀಶ್​ ಮೃತಪಟ್ಟಿದ್ದರು. ಅಂಬಿ ಅಗಲಿದ ಕ್ಷಣ ಈ ಶ್ವಾನ ಊಟ ಕೂಡ ಮಾಡದೇ ಕಂಬನಿ ಸುರಿಸುತ್ತಿತ್ತು. ತಮ್ಮ ಸಿನಿಮಾದ ಪಾತ್ರದ ಹೆಸರನ್ನೇ ಅಂಬರೀಷ್ ತಮ್ಮ ಪ್ರೀತಿಯ ಶ್ವಾನಕ್ಕಿಟ್ಟಿದ್ದರು ಅನ್ನೋದು ವಿಶೇಷ. ಕನ್ವರ್‌  ಕೂಡ ಅಂಬಿಯನ್ನು  ಹಚ್ಚಿಕೊಂಡಿತ್ತು. ಇದೀಗ ಅಂಬಿ ಪ್ರೀತಿಯ ಕನ್ವರ್‌ ಇಹಲೋಕ ತ್ಯಜಿಸಿದೆ.

ಅಂಬಿ ಪರಮಾಪ್ತರಾಗಿದ್ದ ಶ್ರೀನಿವಾಸ್, ಕನ್ವರ್‌  ಫೋಟೊಗಳನ್ನ ಹಂಚಿಕೊಂಡಿದ್ದಾರೆ. ಕನ್ವರ್​  ನಿಧನಕ್ಕೆ ಕುಟುಂಬವರ್ಗವೂ ಬೇಸರದಲ್ಲಿದೆ ಎಂದಿದ್ದಾರೆ. ಈ ವಿಚಾರ ಕೇಳಿ ಅಂಬಿ ಅಭಿಮಾನಿಗಳು ಕೂಡ ಬೇಸರ ಹೊರ ಹಾಕಿದ್ದಾರೆ.

ಅಂಬರೀಷ್​ ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಛಾಪು ಮೂಡಿಸಿದ್ದರು. ಕೊನೆಯದಿನದವರೆಗೂ ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು. 2018ರ ನವೆಂಬರ್​ 24ರಂದು ಅವರು ಮೃತಪಟ್ಟ ನಂತರ ಇಡೀ ಚಿತ್ರರಂಗ ಕಂಬನಿ ಮಿಡಿದಿತ್ತು. ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿತ್ತು.

ಇದನ್ನೂ ಓದಿ:  ಚಾಮರಾಜನಗರ ಘಟನೆ.. ಘೋರ ಅನ್ಯಾಯ! ನಾವು ತಪ್ಪು ಮಾಡಿದ್ರೆ ದೇವರು ಯಾವತ್ತು ನಮ್ಮನ್ನು ರಕ್ಷಿಸಲ್ಲ : ಸುಮಲತಾ ಅಂಬರೀಷ್

ಸಂಸದೆ ಸುಮಲತಾ ಅಂಬರೀಷ್ ವಿಶೇಷ ಸಂದರ್ಶನ: ‘ಕರ್ತವ್ಯ ದೋಷದಿಂದ ಒಂದು ಜೀವ ಹೋದ್ರೂ ಅದಕ್ಕೆ ನಾವೇ ಜವಾಬ್ದಾರಿಷ್

Published On - 5:20 pm, Mon, 24 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು