Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ ಜೊತೆಗೂ ಹೋಗಿ ಇರಲ್ಲ ಎಂದು ರಚಿತಾ ರಾಮ್ ಹೇಳಿದ್ದರ ಹಿಂದಿನ ವಿವಾದವೇನು?

ರಚಿತಾ ರಾಮ್ ಅವರ ಮೇಲೆ ರಾಜಕಾರಣಿಗಳೊಂದಿಗಿನ ಸಂಬಂಧದ ಆರೋಪ ಹೊರಿಸಲಾಗಿದೆ. ಲಾಯರ್ ಜಗದೀಶ್ ಅವರು ಈ ಆರೋಪವನ್ನು ಮಾಡಿದ್ದಾರೆ. ಆದರೆ ರಚಿತಾ ರಾಮ್ ಈ ಆರೋಪವನ್ನು ತಳ್ಳಿಹಾಕಿದ್ದು, ತಮ್ಮ 12 ವರ್ಷಗಳ ಚಿತ್ರರಂಗದ ವೃತ್ತಿಜೀವನದ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿದ್ದಾರೆ ಎಂದು ಹೇಳಿದ್ದಾರೆ.

ಯಾರ ಜೊತೆಗೂ ಹೋಗಿ ಇರಲ್ಲ ಎಂದು ರಚಿತಾ ರಾಮ್ ಹೇಳಿದ್ದರ ಹಿಂದಿನ ವಿವಾದವೇನು?
ರಚಿತಾ -ಜಗದೀಶ್
Follow us
ರಾಜೇಶ್ ದುಗ್ಗುಮನೆ
|

Updated on:Jan 08, 2025 | 1:32 PM

ನಟಿ ರಚಿತಾ ರಾಮ್ ಅವರು ಸಾಕಷ್ಟು ಕಷ್ಟಗಳಿಂದ ಮೇಲೆ ಬಂದವರು. ಅವರು ಇಂದು ಕನ್ನಡ ಚಿತ್ರರಂಗದ ಬೇಡಿಕೆಯ ಹೀರೋಯಿನ್ ಎನಿಸಿಕೊಂಡಿದ್ದಾರೆ. ಅವರ ಬಗ್ಗೆ ವದಂತಿಗಳು ಆಗಾಗ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಅದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಈಗ ಅವರಿಗೆ ಸಿಟ್ಟು ತರಿಸುವಂತ ಆರೋಪ ಒಂದು ಕೇಳಿ ಬಂದಿತ್ತು. ಈ ಸಂದರ್ಭದಲ್ಲಿ ರಚಿತಾ ರಾಮ್ ಕೂಲ್ ಆಗಿ ನಡೆದುಕೊಂಡಿದ್ದಾರೆ. ಕೂಲ್ ಆಗಿಯೇ ಅವರು ಉತ್ತರ ಕೊಟ್ಟಿದ್ದಾರೆ.

ಲಾಯರ್ ಜಗದೀಶ್ ಮಾಡಿದ ಆರೋಪ?

ಬಿಗ್ ಬಾಸ್ ಮೂಲಕ ಗಮನ ಸೆಳೆದ ಜಗದೀಶ್ ಅವರು ಇತ್ತೀಚೆಗೆ ಮಾಧ್ಯಮಗಳ ಎದುರು ಬಂದು ವಿವಿಧ ವ್ಯಕ್ತಿಗಳ ಬಗ್ಗೆ ವಿವಿಧ ರೀತಿಯ ಆರೋಪಗಳನ್ನು ಮಾಡುತ್ತಾ ಇದ್ದಾರೆ. ಅವರು ರಚಿತಾ ರಾಮ್ ಬಗ್ಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೆ ಒಂದನ್ನು ನೀಡಿದ್ದರು. ‘ರಚಿತಾ ರಾಮ್ ಅವರಿಗೆ ರಾಜಕಾರಣಿಗಳ ಜೊತೆ ಒಡನಾಟ ಇದೆ. ರಾಜಕಾರಣಿಗಳ ಜೊತೆ ವ್ಯವಹಾರ ಮಾಡುತ್ತಾರೆ. ರಾಜಕಾರಣಿಗಳ ಕೃಪಾಕಟಾಕ್ಷದಿಂದ ಬೆಳೆಯುತ್ತಿದ್ದಾರೆ ಎಂಬ ಆರೋಪ ಇದೆ. ಇದು ನಿಜವೋ ಸುಳ್ಳೋ ಗೊತ್ತಿಲ್ಲ. ಈ ಆರೋಪ ಬಂದಮೇಲೆ ಅವರ ಟೆಂಪಲ್ ರನ್ ಹೆಚ್ಚಿದೆ’ ಎಂದಿದ್ದರು ಜಗದೀಶ್.

ರಚಿತಾ ರಾಮ್ ಹೇಳಿದ್ದೇನು?

ಟಿವಿ9 ಕನ್ನಡದ ಜೊತೆ ಮಾತನಾಡಿದ ರಚಿತಾ ರಾಮ್ ಈ ಬಗ್ಗೆ ಉತ್ತರಿಸಿದ್ದರು. ‘ನಾನು ಇಂಡಸ್ಟ್ರಿಯಲ್ಲಿ 12 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಪ್ರತಿ ಸಿನಿಮಾಗೂ ಸಂಭಾವನೆ ಪಡೆಯುತ್ತಿದ್ದೇನೆ. ಚಿತ್ರರಂಗದಲ್ಲಿ ಸತತವಾಗಿ ಕೆಲಸ ಮಾಡಿಕೊಂಡು ಬಂದು, ಅವಶ್ಯಕತೆ ಇದ್ದಲ್ಲಿ ಮಾತ್ರ ಮಾತನಾಡುತ್ತೇನೆ. ನಾನು ಶೂಟಿಂಗ್​ನಲ್ಲಿ ಬ್ಯುಸಿ ಇರುತ್ತೇನೆ. ಶೂಟ್ ಇಲ್ಲ ಎಂದರೆ ಕುಟುಂಬದವರ ಜೊತೆ ಸಮಯ ಕಳೆಯುತ್ತೇನೆ’ ಎಂದಿದ್ದಾರೆ ಅವರು.

‘ಅವರು (ಜಗದೀಶ್) ವಯಸ್ಸಲ್ಲಿ ದೊಡ್ಡವರು. ನನಗೆ ಅವರನ್ನು ಅಗೌರವಿಸುವ ಅಗತ್ಯವಿಲ್ಲ. ಅವೆಲ್ಲ ಅಂತೆ-ಕಂತೆ. ಈ ಆರೋಪಕ್ಕೆ ಏನು ಮಾತನಾಡಬೇಕು ಎಂದು ಗೊತ್ತಿಲ್ಲ. ನಾನು ಅಂತ ಆ್ಯಕ್ಟಿವಿಟಿಯಲ್ಲಿ ಭಾಗವಹಿಸಿದ್ರೆ ನನ್ನ ಲೈಫ್ ನನ್ನ ಇಷ್ಟ ಎಂದು ಹೇಳುತ್ತಿದ್ದೆ. ಇಲ್ಲವೇ ಈ ಬಗ್ಗೆ ಪ್ರಶ್ನಿಸಬೇಡಿ ಎನ್ನುತ್ತಿದ್ದೆ. ತಪ್ಪು ಮಾಡಿದ್ರೆ ಒಪ್ಪಿಕೊಳ್ಳುತ್ತೇನೆ. ನಾನು ತಪ್ಪು ಮಾಡಿಲ್ಲ. ಆರೋಪಗಳಿಗೆ ಉತ್ತರ ಸಿಕ್ಕಿತು ಎಂದುಕೊಳ್ಳುತ್ತೇನೆ’ ಎಂದಿದ್ದಾರೆ ರಚಿತಾ ರಾಮ್.

ಇದನ್ನೂ ಓದಿ: ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ ರಾಮ್

‘ನನ್ನ ಸ್ಟಾಫ್​, ನನ್ನ ಮಾಧ್ಯಮದವರಿಗೆ ನಾನು ಏನು ಅಂತ ಗೊತ್ತಿದೆ. ನನ್ನ ಆಪ್ತರಿಗೆ ನನ್ನ ಬಗ್ಗೆ ಗೊತ್ತಿದೆ. ಸ್ಪಾನ್ಸರ್ ಇದ್ದಿದ್ರೆ 12 ವರ್ಷ ಯಾಕೆ ಇಷ್ಟು ಕಷ್ಟಪಟ್ಟು ಕೆಲಸ ಮಾಡುತ್ತಿದ್ದೆ? ಸ್ಪಾನ್ಸರ್ಸ್ ಇದ್ದಿದ್ದರೆ ಹಾಯಾಗಿ ವಿದೇಶಿ ಪ್ರವಾಸ ಮಾಡುತ್ತಿದ್ದೆ. ನನಗೆ ಕಷ್ಟ ಬಂದು ಎಲ್ಲಾ ಕಳೆದುಕೊಂಡರೂ ದೇವಸ್ಥಾನದಲ್ಲಿನ ಪ್ರಸಾದ ತಿಂದುಕೊಂಡು ಇರುತ್ತೇನೆ ಹೊರತು, ಯಾರ ಜೊತೆಯೂ ಹೋಗಿ ಇರೋದಿಲ್ಲ’ ಎಂದಿದ್ದಾರೆ ರಚಿತಾ ರಾಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:49 pm, Wed, 8 January 25

ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್