AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯರ ಜೊತೆ ಕೈ ಕೈ ಮಿಲಾಯಿಸಿದ ಜಗದೀಶ್; ಹಲ್ಲೆ ನಡೆದಿದ್ದು ಏಕೆ?

ಬಿಗ್ ಬಾಸ್ ಕನ್ನಡದಿಂದ ಖ್ಯಾತಿ ಪಡೆದ ವಕೀಲ ಜಗದೀಶ್ ಅವರ ಮೇಲೆ ಕೊಡಿಗೇಹಳ್ಳಿಯಲ್ಲಿ ಹಲ್ಲೆ ಯತ್ನ ನಡೆದಿದೆ. ಪೆಂಡಾಲ್ ಹಾಕಲು ಅವರು ವಿರೋಧ ವ್ಯಕ್ತಪಡಿಸಿದ್ದೇ ಇದಕ್ಕೆ ಕಾರಣ. ಸ್ಥಳೀಯರೊಂದಿಗೆ ಜಗಳವಾಡಿದ ಜಗದೀಶ್ ಅವರ ಮೇಲೆ 40ಕ್ಕೂ ಹೆಚ್ಚು ಜನರು ಹಲ್ಲೆಗೆ ಯತ್ನಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸ್ಥಳೀಯರ ಜೊತೆ ಕೈ ಕೈ ಮಿಲಾಯಿಸಿದ ಜಗದೀಶ್; ಹಲ್ಲೆ ನಡೆದಿದ್ದು ಏಕೆ?
ಜಗದೀಶ್
ರಾಜೇಶ್ ದುಗ್ಗುಮನೆ
|

Updated on: Jan 24, 2025 | 7:02 AM

Share

ವಕೀಲ ಜಗದೀಶ್ ಅವರು ಬಿಗ್ ಬಾಸ್​ಗೆ ಬಂದು ಫೇಮಸ್ ಆದವರು. ಅವರು ಹೋದಲ್ಲೆಲ್ಲ ಕಿರಿಕ್ ಮಾಡಿಕೊಳ್ಳುತ್ತಾರೆ. ಹಲವು ವಿಚಾರಗಳಿಗೆ ಅವರು ಪ್ರಶ್ನೆ ಮಾಡುತ್ತಾರೆ. ಇದರಿಂದ ಅವರಿಗೆ ಸಾಕಷ್ಟು ಸಮಸ್ಯೆ ಆಗಿದ್ದೂ ಇದೆ. ಹೀಗಿರುವಾಗಲೇ ಜಗದೀಶ್ ಅವರ ಮೇಲೆ ಹಲ್ಲೆಯ ಪ್ರಯತ್ನ ನಡೆದಿದೆ. ಬೆಂಗಳೂರಿನ ಕೊಡಿಗೇಹಳ್ಳಿಯ ವಿರೂಪಾಕ್ಷ ನಗರದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಕೊಡಿಗೇಹಳ್ಳಿಯಲ್ಲಿ ದೂರು ದಾಖಲಾಗಿದೆ.

ಆಗಿದ್ದೇನು?

ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಒಂದು ಇದೆ. ಇದೇ ರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿಯನ್ನು ಕೂರಿಸಲು ಪ್ಲ್ಯಾನ್ ಮಾಡಿದ್ದರು. ಇದಕ್ಕೆ ಜಗದೀಶ್ ಅವರು ಆಕ್ಷೇಪ ತೆಗೆದಿದ್ದಾರೆ. ಅಲ್ಲದೆ ಠಾಣೆಗೆ ದೂರು ನೀಡಿದ್ದಾರೆ. ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಜನರ ಜೊತೆ ಚರ್ಚಿಸಿದ್ದಾರೆ. ಪೆಂಡಾಲ್ ಹಾಕಿದ್ದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತದೆ ಎಂಬುದು ಜಗದೀಶ್ ಅವರ ವಾದ ಆಗಿತ್ತು. ಆದರೆ, ಪೆಂಡಾಲ್ ತೆಗೆಯಲು ಸ್ಥಳಿಯರು ಒಪ್ಪಿಲ್ಲ.

ಹಲ್ಲೆಗೆ ಯತ್ನ

ಜಗದೀಶ್ ಅವರ ವಿರುದ್ಧ 40ಕ್ಕೂ ಅಧಿಕ ಸ್ಥಳೀಯರು ಬಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಅವರ ಮೇಲೆ ಹಲ್ಲೆಗೂ ಯತ್ನ ನಡೆದಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿದೆ. ಟ್ರೋಲ್ ಪೇಜ್​ಗಳಲ್ಲಿ ಈ ವಿಡಿಯೋನ ಹರಿಬಿಡಲಾಗಿದೆ. ಇದಕ್ಕೆ ಅನೇಕರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಜಗದೀಶ್ ಅವರು ಮಾಡಿದ್ದು ಸರಿ ಎಂದರೆ, ಇನ್ನೂ ಕೆಲವರು ‘ಸುಖಾಸುಮ್ಮನೆ ಕಿರಿಕ್ ಮಾಡಿದರೆ ಹೀಗೆ ಆಗೋದು’ ಎಂದು ಕೆಲವರು ಹೇಳಿದ್ದಾರೆ.

ರಿಯಾಲಿಟಿ ಶೋ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಆದರೆ, ಅವಾಚ್ಯ ಶಬ್ದ ಬಳಕೆಯ ಕಾರಣದಿಂದ ಅವರು ಕೆಲವೇ ವಾರಗಳಲ್ಲಿ ಬಿಗ್ ಬಾಸ್ ಮನೆಯಿಂದ ಔಟ್ ಆದರು. ಸದ್ಯ ಕಲರ್ಸ್​ನಲ್ಲಿ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದ್ದು, ಇದರಲ್ಲಿ ಜಗದೀಶ್ ಅವರು ಭಾಗವಹಿಸುತ್ತಿದ್ದಾರೆ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?