AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ ದೂರು ದಾಖಲಿಸಿದ ಲಾಯರ್ ಜಗದೀಶ್, ಕಾರಣವೇನು?

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್, ಪ್ರಸ್ತುತ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ನಡುವೆ ದರ್ಶನ್ ವಿರುದ್ಧ ಹೊಸದೊಂದು ದೂರು ದಾಖಲಾಗಿದೆ. ದೂರು ದಾಖಲಿಸಿರುವುದು ಬಿಗ್​ಬಾಸ್​ನಿಂದ ಹೊರಬಂದ ಲಾಯರ್ ಜಗದೀಶ್.

ದರ್ಶನ್ ವಿರುದ್ಧ ದೂರು ದಾಖಲಿಸಿದ ಲಾಯರ್ ಜಗದೀಶ್, ಕಾರಣವೇನು?
ಮಂಜುನಾಥ ಸಿ.
|

Updated on: Nov 06, 2024 | 12:07 PM

Share

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್​ಗೆ ಮಧ್ಯಂತರ ಜಾಮೀನು ದೊರೆತಿದೆ. ಆರು ವಾರಗಳ ಕಾಲ ಅವರಿಗೆ ಜೈಲುವಾಸದಿಂದ ತಾತ್ಕಾಲಿಕ ಮುಕ್ತಿ ಸಿಕ್ಕಿದೆ. ಆದರೆ ಮಧ್ಯಂತರ ಜಾಮೀನು ದೊರೆತ ಬೆನ್ನಲ್ಲೆ ಬೇರೆ ಕೆಲವು ಸಂಕಷ್ಟಗಳು ಒಂದರ ಹಿಂದೊಂದು ಸುತ್ತಿಕೊಳ್ಳುತ್ತಿವೆ. ಪೊಲೀಸರು ಮಧ್ಯಂತರ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಸಿದ್ದವಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೆ ಇದೀಗ ದರ್ಶನ್ ವಿರುದ್ಧ ಮತ್ತು ಅವರ ಅಭಿಮಾನಿಗಳ ವಿರುದ್ಧ ಬೆಂಗಳೂರಿನಲ್ಲಿ ಹೊಸದೊಂದು ದೂರು ದಾಖಲಾಗಿದೆ. ದೂರು ದಾಖಲಿಸಿರುವುದು ಇತ್ತೀಚೆಗಷ್ಟೆ ಬಿಗ್​ಬಾಸ್​ನಿಂದ ಹೊರಬಂದಿರುವ ಲಾಯರ್ ಜಗದೀಶ್.

ಬಿಗ್​ಬಾಸ್​ನಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿ ಹೊರದಬ್ಬಿಸಿಕೊಂಡ ಲಾಯರ್ ಜಗದೀಶ್ ಅವರು ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಬಿಗ್​ಬಾಸ್​ನಿಂದ ಹೊರಗೆ ಬಂದ ಬಳಿಕ ಕೆಲ ರಿಯಾಲಿಟಿ ಶೋಗಳಲ್ಲಿಯೂ ಭಾಗಿಯಾಗಿದ್ದ ಜಗದೀಶ್, ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ವಿಡಿಯೋಗಳನ್ನು ಮಾಡಿ ಕೆಲವು ಘಟನೆಗಳ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ನಟ ದರ್ಶನ್ ಪ್ರಕರಣದ ಬಗ್ಗೆಯೂ ಸಹ ಲಾಯರ್ ಜಗದೀಶ್ ಮಾತನಾಡಿದ್ದರು.

ದರ್ಶನ್ ಬಗ್ಗೆ ಮಾತನಾಡುವಾಗ ತಮ್ಮ ಎಂದಿನ ಶೈಲಿಯಲ್ಲಿ ಏಕವಚನದಲ್ಲಿಯೇ ಮಾತನಾಡಿ, ಟೀಕೆ ಮಾಡಿದ್ದರು ಜಗದೀಶ್, ಇದಕ್ಕೆ ದರ್ಶನ್ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಜಗದೀಶ್ ವಿರುದ್ಧ ಹಲವು ದರ್ಶನ್ ಅಭಿಮಾನಿಗಳು ನಿಂದನಾತ್ಮಕ ಪೋಸ್ಟ್​ಗಳನ್ನು ಹಂಚಿಕೊಂಡಿದ್ದರು. ಕೆಲವರು ಬೆದರಿಕೆ ಸಹ ಹಾಕಿದ್ದರು. ಇದೇ ವಿಷಯವಾಗಿ ಲಾಯರ್ ಜಗದೀಶ್, ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ದರ್ಶನ್ ಮಧ್ಯಂತರ ಜಾಮೀನಿಗೆ ಆಕ್ಷೇಪಣೆ: ಕಡತ ಸಿದ್ಧ, ಅಂತಿಮ ಒಪ್ಪಿಗೆಗೆ ನಿರೀಕ್ಷೆ

ನಿನ್ನೆ (ಮಂಗಳವಾರ) ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿರುವ ಲಾಯರ್ ಜಗದೀಶ್, ‘ದರ್ಶನ್​ಗೆ ನಾನು ಏಕವಚನದಲ್ಲಿ ಮಾತನಾಡಿದ್ದೇನೆ ಎಂದು ದರ್ಶನ್ ಅಭಿಮಾನಿಗಳು ನನಗೆ ಬೆದರಿಕೆ ಹಾಕಿದ್ದಾರೆ. ಎರಡು ದಿನದಲ್ಲಿ ಸಾವಿರಕ್ಕೂ ಹೆಚ್ಚು ಕರೆಗಳನ್ನು ದರ್ಶನ್​ರ ಕೆಲ ಅಭಿಮಾನಿಗಳು ನನಗೆ ಮಾಡಿದ್ದಾರೆ. ದರ್ಶನ್ ಅಭಿಮಾನಿ ರಿಷಿ ಎಂಬಾತ ಹಲವು ಬಾರಿ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದನ್ನೆಲ್ಲ ದರ್ಶನ್​ ಮಾಡಿಸಿದ್ದಾರೆ’ ಎಂದು ಜಗದೀಶ್ ದೂರು ದಾಖಲಿಸಿದ್ದಾರೆ.

ದರ್ಶನ್​ಗೆ ರಾಜ್ಯದಾದ್ಯಂತ ಅಭಿಮಾನಿಗಳಿದ್ದು, ಅವರಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಬೇಕಾಗಿದೆ. ನಮಗೆ ರಕ್ಷಣೆ ಕೊಡುವ ಜೊತೆಗೆ ದರ್ಶನ್​ ಹಾಗೂ ರಿಷಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲಾಯರ್ ಜಗದೀಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?