AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಒಳ ಉಡುಪಿನ ಬಗ್ಗೆ ಮಾತನಾಡಿ ವಿವಾದ ಮಾಡಿಕೊಂಡ ಲಾಯರ್ ಜಗದೀಶ್

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಬಿಗ್ ಬಾಸ್ ಶೋಗೆ ಅವಮಾನ ಮಾಡಿದ್ದಾರೆ. ಈಗ ಅವರು ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ.

ಮಹಿಳೆಯರ ಒಳ ಉಡುಪಿನ ಬಗ್ಗೆ ಮಾತನಾಡಿ ವಿವಾದ ಮಾಡಿಕೊಂಡ ಲಾಯರ್ ಜಗದೀಶ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Oct 05, 2024 | 9:58 AM

Share

ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಅವರು ಎಲ್ಲರಿಗೂ ಠಕ್ಕರ್ ಕೊಡುವ ಕೆಲಸ ಮಾಡುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಸುಖಾ ಸುಮ್ಮನೆ ಕಾಲ್ಕೆರೆದುಕೊಂಡು ಹೋಗಿ ಜಗಳ ಮಾಡುತ್ತಿದ್ದಾರೆ. ಇದರಿಂದ ವಿವಾದಗಳು ಆಗುತ್ತಿವೆ. ಈಗ ಅವರು ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ಅವರು ಈ ರೀತಿಯ ಮಾತನ್ನು ಆಡಬಾರದಿತ್ತು ಎಂದು ಮನೆ ಮಂದಿ ಮಾತನಾಡಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.

ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ. ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.

ಇದನ್ನೂ ಓದಿ: ‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಮುಲಾಜಿಲ್ಲದೆ ಹೊರಹಾಕಿದ್ದ ಸಲ್ಲು; ಕನ್ನಡದಲ್ಲೂ ಮರುಕಳಿಸಲಿದೆ ಘಟನೆ?

ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ. ‘ಬ್ರೋ..’ ‘ಬ್ರೋ..’ ಎಂದಷ್ಟೇ ಹೇಳಿದರು. ‘ಬ್ರೋ ಪ್ಯಾಂಟೀಸ್ ಎಲ್ಲ ನೋಡಿದೀನಿ. ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದರು ಜಗದೀಶ್. ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ‘ನಿಜವಗಾಲೂ ಇನ್​ಸೆಕ್ಯೂರ್ ಫೀಲ್ ಆಗ್ತಿದೆ. ಹುಡುಗಿಯರ ವೈಯಕ್ತಿಕ ವಿಚಾರಕ್ಕೆ ಬರುತ್ತಿದ್ದಾರೆ. ನೀವು ಏನಾದರೂ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ’ ಎಂದರು ಭವ್ಯಾ ಗೌಡ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:50 am, Sat, 5 October 24

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?