AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೂ ಲೀಲಾವತಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಎಲ್ಲಿ?

Leelavathi: ಲೀಲಾವತಿ ಅವರ ಅಂತಿಮ ದರ್ಶನಕ್ಕೆ ನೆಲಮಂಗಲದಲ್ಲಿ ಮಾತ್ರವೇ ಅಲ್ಲದೆ ಬೆಂಗಳೂರಿನಲ್ಲಿಯೂ ವ್ಯವಸ್ಥೆ ಮಾಡಲಾಗಿದೆ. ಸ್ಥಳ, ಸಮಯ ಇತ್ಯಾದಿ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲೂ ಲೀಲಾವತಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಎಲ್ಲಿ?
ಮಂಜುನಾಥ ಸಿ.
|

Updated on:Dec 09, 2023 | 12:04 AM

Share

ಹಿರಿಯ ನಟಿ ಲೀಲಾವತಿ (Leelavathi) ಅವರ ಅಂತಿಮ ದರ್ಶನಕ್ಕೆ ನೆಲಮಂಗಲದಲ್ಲಿ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ನೆಲಮಂಗಲದಲ್ಲಿ ಮಾತ್ರವೇ ಅಲ್ಲದೆ ಬೆಂಗಳೂರಿನಲ್ಲಿಯೂ ಸಹ ಲೀಲಾವತಿ ಅವರ ಅಂತಿಮ ದರ್ಶನ ಮಾಡುವ ನಿರ್ಧಾರವನ್ನು ತಡವಾಗಿ ಮಾಡಲಾಗಿದೆ. ಆ ಮೂಲಕ ಬೆಂಗಳೂರಿನ ಜನರಿಗೂ ಅಂತಿಮ ದರ್ಶನಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ನೆಲಮಂಗಲದ ಜ್ಯೂನಿಯರ್ ಕಾಲೇಜಿನ ಅಂಬೇಡ್ಕರ್ ಮೈದಾನದಲ್ಲಿ ಈಗಾಗಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಲೀಲಾವತಿಯವರ ಪಾರ್ಥಿವ ಶರೀರವನ್ನು ಮೈದಾನಕ್ಕೆ ಕರೆತರಲಾಗಿದೆ. ಡಿಸೆಂಬರ್ 08ರ ಬೆಳಿಗ್ಗೆ 5 ಗಂಟೆಯಿಂದ ಬೆಳಿಗ್ಗೆ 10 ಗಂಟೆಯ ವರೆಗೂ ಅಂಬೇಡ್ಕರ್ ಮೈದಾನದಲ್ಲಿ ಸಾರ್ವಜನಿಕರು ಹಾಗೂ ಗಣ್ಯರು ಅಂತಿಮ ದರ್ಶನ ಪಡೆಯಬಹುದಾಗಿದ್ದು, ಅದಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ:500 ರೂಪಾಯಿ ಸಂಭಾವನೆ ಇದ್ದ ಕಾಲಕ್ಕೆ 50 ಸಾವಿರ ಸಂಭಾವನೆ ಪಡೆದಿದ್ದ ಲೀಲಾವತಿ

10 ಗಂಟೆ ಬಳಿಕ ಪಾರ್ಥಿವ ಶರೀರವನ್ನು ನೆಲಮಂಗಲದಿಂದ ಬೆಂಗಳೂರಿಗೆ ತಂದು ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗುತ್ತದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ ಎರಡು ಗಂಟೆಗಳ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಕನ್ನಡ ಚಿತ್ರರಂಗದ ಹಲವು ಗಣ್ಯರು, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಅಶೋಕ್, ಸರ್ಕಾರದ ಹಲವು ಸಚಿವರುಗಳು ಸಹ ಅಂತಿಮ ದರ್ಶನ ಪಡೆಯಲಿದ್ದಾರೆ. ಕೆಲವು ಪರಭಾಷೆಯ ನಟರು ಬರುವ ಸಾಧ್ಯತೆಯೂ ಇದೆ.

ಎರಡು ಗಂಟೆ ಬಳಿಕ ಪಾರ್ಥಿವ ಶರೀರವನ್ನು ನೆಲಮಂಗಲದ ಸೋಲದೇವನಹಳ್ಳಿಗೆ ಕೊಂಡೊಯ್ದು, ಲೀಲಾವತಿಯವರ ತೋಟದಲ್ಲಿ ಅಂತಿಮ ವಿಧಿ ವಿಧಾನಗಳನ್ನು ಪೂರೈಸಿ ಅಂತಿಮ ಸಂಸ್ಕಾರ ಮಾಡಲಾಗುತ್ತದೆ.

ಲೀಲಾವತಿಯವರು ಡಿಸೆಂಬರ್ 08 ರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಲೀಲಾವತಿ ಕನ್ನಡದ ಮೇರು ನಟಿ. ಚಿತ್ರರಂಗದಿಂದ ದೂರಾಗಿ ನೆಲಮಂಗಲದ ಸಮೀಪ ಸೋಲದೇವನಹಳ್ಳಿಯಲ್ಲಿ ಪುತ್ರ ವಿನೋದ್ ರಾಜ್​ ಜೊತೆ ವಾಸವಾಗಿದ್ದರು. 85 ವರ್ಷ ವಯಸ್ಸಾಗಿದ್ದ ಲೀಲಾವತಿಯವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ನಿಧನ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:45 pm, Fri, 8 December 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ