AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಲೀಲಾವತಿ ಸ್ಮಾರಕ ಉದ್ಘಾಟನೆಗೆ ಕ್ಷಣಗಣನೆ; ವಿನೋದ್ ರಾಜ್ ಕನಸು ನನಸು

ಖ್ಯಾತ ನಟಿ ಲೀಲಾವತಿ ಅವರ ಅಗಲಿಕೆಯ ನಂತರ ಸ್ಮಾರಕ ನಿರ್ಮಾಣ ಮಾಡುವ ಕೆಲಸಕ್ಕೆ ವಿನೋದ್​ ರಾಜ್ ಕೈ ಹಾಕಿದ್ದರು. ಈಗ ಆ ಕೆಲಸ ಪೂರ್ಣಗೊಂಡಿದೆ. ಸ್ಮಾರಕ ಉದ್ಘಾಟನೆಯ ಕ್ಷಣ ಕೂಡ ಬಂದಿದೆ. ಡಿಸೆಂಬರ್​ 5ರಂದು ಲೀಲಾವತಿ ಅವರ ಭವ್ಯ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

ನಟಿ ಲೀಲಾವತಿ ಸ್ಮಾರಕ ಉದ್ಘಾಟನೆಗೆ ಕ್ಷಣಗಣನೆ; ವಿನೋದ್ ರಾಜ್ ಕನಸು ನನಸು
ಲೀಲಾವತಿ ಸ್ಮಾರಕ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Dec 04, 2024 | 10:23 PM

Share

ಕನ್ನಡದ ಖ್ಯಾತ ನಟಿ ಲೀಲಾವತಿ ಅವರು 2023ರ ಡಿಸೆಂಬರ್ 8ರಂದು ನಿಧನರಾಗಿದರು. ಅವರು ಇಹಲೋಕ ತ್ಯಜಿಸಿ ಒಂದು ವರ್ಷ ಕಳೆದಿದ್ದು, ತಾಯಿಗಾಗಿ ಮಗ ವಿನೋದ್ ರಾಜ್ ಅವರು ಸ್ಮಾರಕ ನಿರ್ಮಾಣ ಮಾಡಿದ್ದಾರೆ. ಅಮ್ಮ-ಮಗ ಅಂದ್ರೆ ಲೀಲಾವತಿ-ವಿನೋದ್ ರಾಜ್ ಎನ್ನುವಷ್ಟು ಇಬ್ಬರೂ ಸದಾ ಜೊತೆಯಲ್ಲಿ ಇರುತ್ತಿದ್ದರು. ಅಮ್ಮನನ್ನು ಕಳೆದುಕೊಂಡ ವಿನೋದ್ ರಾಜ್ ತಾಯಿಗೆ ಸುಂದರವಾದ ಸ್ಮಾರಕ ಕಟ್ಟಿದ್ದಾರೆ. ಈ ಸ್ಮಾರಕ ಗುರುವಾರ (ಡಿ.5) ಉದ್ಘಾಟನೆ ಆಗಲಿದೆ. ಸೋಲದೇವನಹಳ್ಳಿಯ ಸ್ವಂತ ತೋಟದಲ್ಲಿ ಸ್ಮಾರಕ ನಿರ್ಮಾಣ ಮಾಡಿದ್ದಾರೆ.

ನಟ ವಿನೋದ್ ರಾಜ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲದೇವನಹಳ್ಳಿಯಲ್ಲಿ ಇರುವ ತೋಟದ ಮುಂಭಾಗ ಈ ಸ್ಮಾರಕ ನಿರ್ಮಾಣ ಮಾಡಿದ್ದಾರೆ. ಡಿಸೆಂಬರ್​ 5ರಂದು ಬೆಳಿಗ್ಗೆ 10 ಈ ಸ್ಮಾರಕವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ನೆಲಮಂಗಲ ಶಾಸಕ ಎಸ್. ಶ್ರೀನಿವಾಸ್ ಅವರು ಉದ್ಘಾಟನೆ ಮಾಡಲಿದ್ದಾರೆ.

ಲೀಲಾವತಿ ಅಗಲಿದ ಕ್ಷಣದಿಂದಲೂ ವಿನೋದ್‌ ರಾಜ್‌ ಅವರು ತಾಯಿಯ ನೆನಪಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಅಮ್ಮನ ನೆನಪಿಗಾಗಿ ಯಾರ ಸಹಾಯವೂ ಪಡೆಯದೆ ಒಂದು ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ತಮ್ಮ ತೋಟದಲ್ಲಿ ಸ್ಮಾರಕವನ್ನು ಅವರು ನಿರ್ಮಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.

ಇದನ್ನೂ ಓದಿ: ಅರ್ಕಾವತಿ ನದಿಗೆ ತ್ಯಾಜ್ಯ ಸುರಿದವರನ್ನು ಹಿಡಿದು ತರಾಟೆಗೆ ತೆಗೆದುಕೊಂಡ ವಿನೋದ್ ರಾಜ್

ಲೀಲಾವತಿ ಅವರ ಸ್ಮಾರಕಕ್ಕೆ ದೇವನಹಳ್ಳಿಯ ಬಳಿಯ ಸಾದಹಳ್ಳಿ ಶಿಲೆಗಳನ್ನು ಬಳಸಿ ದೇಗುಲದ ರೂಪ ನೀಡಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಚಲನಚಿತ್ರ ಕಲಾವಿದರಿಗೆ ಸನ್ಮಾನವನ್ನು ಕೂಡ ವಿನೋದ್‌ ರಾಜ್‌ ಹಮ್ಮಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರು ಆದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌. ಮುನಿಯಪ್ಪ, ನೆಲಮಂಗಲ ಶಾಸಕ ಶ್ರೀನಿವಾಸ್ ಸೇರಿದಂತೆ ಮುಖಂಡರು, ಗ್ರಾಮಸ್ಥರು ಸ್ಮಾರಕ ಉದ್ಘಾಟನೆಗೆ ಆಗಮಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:38 pm, Wed, 4 December 24

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು