AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಲೀಲಾವತಿ ಸ್ಮಾರಕ ಉದ್ಘಾಟನೆಗೆ ಕ್ಷಣಗಣನೆ; ವಿನೋದ್ ರಾಜ್ ಕನಸು ನನಸು

ಖ್ಯಾತ ನಟಿ ಲೀಲಾವತಿ ಅವರ ಅಗಲಿಕೆಯ ನಂತರ ಸ್ಮಾರಕ ನಿರ್ಮಾಣ ಮಾಡುವ ಕೆಲಸಕ್ಕೆ ವಿನೋದ್​ ರಾಜ್ ಕೈ ಹಾಕಿದ್ದರು. ಈಗ ಆ ಕೆಲಸ ಪೂರ್ಣಗೊಂಡಿದೆ. ಸ್ಮಾರಕ ಉದ್ಘಾಟನೆಯ ಕ್ಷಣ ಕೂಡ ಬಂದಿದೆ. ಡಿಸೆಂಬರ್​ 5ರಂದು ಲೀಲಾವತಿ ಅವರ ಭವ್ಯ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

ನಟಿ ಲೀಲಾವತಿ ಸ್ಮಾರಕ ಉದ್ಘಾಟನೆಗೆ ಕ್ಷಣಗಣನೆ; ವಿನೋದ್ ರಾಜ್ ಕನಸು ನನಸು
ಲೀಲಾವತಿ ಸ್ಮಾರಕ
Follow us
ಬಿ ಮೂರ್ತಿ, ನೆಲಮಂಗಲ
| Updated By: ಮದನ್​ ಕುಮಾರ್​

Updated on:Dec 04, 2024 | 10:23 PM

ಕನ್ನಡದ ಖ್ಯಾತ ನಟಿ ಲೀಲಾವತಿ ಅವರು 2023ರ ಡಿಸೆಂಬರ್ 8ರಂದು ನಿಧನರಾಗಿದರು. ಅವರು ಇಹಲೋಕ ತ್ಯಜಿಸಿ ಒಂದು ವರ್ಷ ಕಳೆದಿದ್ದು, ತಾಯಿಗಾಗಿ ಮಗ ವಿನೋದ್ ರಾಜ್ ಅವರು ಸ್ಮಾರಕ ನಿರ್ಮಾಣ ಮಾಡಿದ್ದಾರೆ. ಅಮ್ಮ-ಮಗ ಅಂದ್ರೆ ಲೀಲಾವತಿ-ವಿನೋದ್ ರಾಜ್ ಎನ್ನುವಷ್ಟು ಇಬ್ಬರೂ ಸದಾ ಜೊತೆಯಲ್ಲಿ ಇರುತ್ತಿದ್ದರು. ಅಮ್ಮನನ್ನು ಕಳೆದುಕೊಂಡ ವಿನೋದ್ ರಾಜ್ ತಾಯಿಗೆ ಸುಂದರವಾದ ಸ್ಮಾರಕ ಕಟ್ಟಿದ್ದಾರೆ. ಈ ಸ್ಮಾರಕ ಗುರುವಾರ (ಡಿ.5) ಉದ್ಘಾಟನೆ ಆಗಲಿದೆ. ಸೋಲದೇವನಹಳ್ಳಿಯ ಸ್ವಂತ ತೋಟದಲ್ಲಿ ಸ್ಮಾರಕ ನಿರ್ಮಾಣ ಮಾಡಿದ್ದಾರೆ.

ನಟ ವಿನೋದ್ ರಾಜ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲದೇವನಹಳ್ಳಿಯಲ್ಲಿ ಇರುವ ತೋಟದ ಮುಂಭಾಗ ಈ ಸ್ಮಾರಕ ನಿರ್ಮಾಣ ಮಾಡಿದ್ದಾರೆ. ಡಿಸೆಂಬರ್​ 5ರಂದು ಬೆಳಿಗ್ಗೆ 10 ಈ ಸ್ಮಾರಕವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ನೆಲಮಂಗಲ ಶಾಸಕ ಎಸ್. ಶ್ರೀನಿವಾಸ್ ಅವರು ಉದ್ಘಾಟನೆ ಮಾಡಲಿದ್ದಾರೆ.

ಲೀಲಾವತಿ ಅಗಲಿದ ಕ್ಷಣದಿಂದಲೂ ವಿನೋದ್‌ ರಾಜ್‌ ಅವರು ತಾಯಿಯ ನೆನಪಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಅಮ್ಮನ ನೆನಪಿಗಾಗಿ ಯಾರ ಸಹಾಯವೂ ಪಡೆಯದೆ ಒಂದು ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ತಮ್ಮ ತೋಟದಲ್ಲಿ ಸ್ಮಾರಕವನ್ನು ಅವರು ನಿರ್ಮಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.

ಇದನ್ನೂ ಓದಿ: ಅರ್ಕಾವತಿ ನದಿಗೆ ತ್ಯಾಜ್ಯ ಸುರಿದವರನ್ನು ಹಿಡಿದು ತರಾಟೆಗೆ ತೆಗೆದುಕೊಂಡ ವಿನೋದ್ ರಾಜ್

ಲೀಲಾವತಿ ಅವರ ಸ್ಮಾರಕಕ್ಕೆ ದೇವನಹಳ್ಳಿಯ ಬಳಿಯ ಸಾದಹಳ್ಳಿ ಶಿಲೆಗಳನ್ನು ಬಳಸಿ ದೇಗುಲದ ರೂಪ ನೀಡಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಚಲನಚಿತ್ರ ಕಲಾವಿದರಿಗೆ ಸನ್ಮಾನವನ್ನು ಕೂಡ ವಿನೋದ್‌ ರಾಜ್‌ ಹಮ್ಮಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರು ಆದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌. ಮುನಿಯಪ್ಪ, ನೆಲಮಂಗಲ ಶಾಸಕ ಶ್ರೀನಿವಾಸ್ ಸೇರಿದಂತೆ ಮುಖಂಡರು, ಗ್ರಾಮಸ್ಥರು ಸ್ಮಾರಕ ಉದ್ಘಾಟನೆಗೆ ಆಗಮಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:38 pm, Wed, 4 December 24

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್