AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮ್ಮ ಕಂಡ ಕನಸು ಸಾಕಷ್ಟಿದೆ, ಬಾಕಿಯಿರುವ ಕೆಲಸ ಮಾಡುತ್ತೇನೆ’- ವಿನೋದ್ ರಾಜ್

ಲೀಲಾವತಿ ಅಂತಿಮ ದರ್ಶನ: ಇಂದು (ಡಿಸೆಂಬರ್ 9) ಬೆಳಿಗ್ಗೆ 10:45ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಲೀಲಾವತಿ ಅವರ ಪಾರ್ಥಿವ ಶರೀರ ತರಲಾಗುತ್ತದೆ. ಈ ವೇಳೆ ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.

‘ಅಮ್ಮ ಕಂಡ ಕನಸು ಸಾಕಷ್ಟಿದೆ, ಬಾಕಿಯಿರುವ ಕೆಲಸ ಮಾಡುತ್ತೇನೆ’- ವಿನೋದ್ ರಾಜ್
ಲೀಲಾವತಿ-ವಿನೋದ್ ರಾಜ್
ರಾಜೇಶ್ ದುಗ್ಗುಮನೆ
|

Updated on: Dec 09, 2023 | 7:08 AM

Share

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Leelavathi) ಅವರು ಶುಕ್ರವಾರ (ಡಿಸೆಂಬರ್ 8) ನಿಧನರಾಗಿದ್ದಾರೆ. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ನೂರಾರು ಸಿನಿಮಾಗಳಲ್ಲಿ ನಟಿಸಿದ್ದ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದರು. ತಾಯಿಯನ್ನು ಕಳೆದುಕೊಂಡು ವಿನೋದ್ ರಾಜ್ ಅವರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಅಮ್ಮ ಇಲ್ಲ ಎಂಬ ನೋವು ಅವರನ್ನು ಬಹುವಾಗಿ ಕಾಡುತ್ತಿದೆ. ಅಮ್ಮ ಕಂಡ ಕನಸನ್ನು ಈಡೇರಿಸುವ ಉದ್ದೇಶವನ್ನು ವಿನೋದ್ ಹೊಂದಿದ್ದಾರೆ.

‘56 ವರ್ಷಗಳ ಕಾಲ ತಾಯಿ ಜೊತೆ ಕಾಲ ಕಳೆದೆ. ನನ್ನಮ್ಮ ಪ್ರೀತಿಗೆ ಕೊರತೆ ಮಾಡಲಿಲ್ಲ. ಜೀವನ ಪೂರ್ತಿ ನನ್ನ ಕೈಹಿಡಿದುಕೊಂಡೇ ಕಳೆದುಹೋದರು. ನೀರು ಕುಡಿಯುವಾಗಲೇ ಪ್ರಾಣಬಿಟ್ಟರು. ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ನಾನು 2-3 ತಿಂಗಳಿಂದ ಊಟ ಮಾಡುವುದನ್ನೇ ಬಿಟ್ಟಿದ್ದೆ. ಶಿವರಾಜ್​ಕುಮಾರ್ ಅಪ್ಸೆಟ್ ಆಗಬೇಡಿ ಎಂದು ಹೇಳಿದ್ದಾರೆ. ಎಷ್ಟು ಬೇಡಿಕೊಂಡರೂ ತಾಯಿ ಪಡೆದುಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದಾರೆ ವಿನೋದ್ ರಾಜ್.

ಇದನ್ನೂ ಓದಿ: ಬೆಂಗಳೂರಿನಲ್ಲೂ ಲೀಲಾವತಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಎಲ್ಲಿ?

‘ಅಮ್ಮ ಹೇಳಿದ ತಾಳ್ಮೆ, ಸಮಾಧಾನ ಯಾರೂ ಹೇಳಲು ಸಾಧ್ಯವಿಲ್ಲ. ಅವರ ಸಾಕಷ್ಟು ಕನಸುಗಳಿದ್ದವು, ಬಾಕಿಯಿರುವ ಕೆಲಸ ಮಾಡುತ್ತೇನೆ. ಮನೆಯಿಂದ ಹೊರಡುವಾಗ ಐವತ್ತು ನೂರು ಕೊಟ್ಟು ಹೋಗುತ್ತಿದ್ದರು. ನಮಗಿಂತ ಬlಡತನದಲ್ಲಿರುವವರ ಬೆನ್ನಿಗೆ ನಿಲ್ಲಬೇಕು ಎಂದು ಅಮ್ಮ ಹೇಳುತ್ತಿದ್ದರು’ ಎಂದು ಅಮ್ಮನ ಮಾತನ್ನು ವಿನೋದ್ ರಾಜ್ ನೆನಪಿಸಿಕೊಂಡಿದ್ದಾರೆ.

ಅಂತಿಮ ದರ್ಶನ…

ಇಂದು (ಡಿಸೆಂಬರ್ 9) ಬೆಳಿಗ್ಗೆ 10:45ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಲೀಲಾವತಿ ಅವರ ಪಾರ್ಥಿವ ಶರೀರ ತರಲಾಗುತ್ತದೆ. ಈ ವೇಳೆ ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಲಿದ್ದಾರೆ. ಸೋಲದೇವನಹಳ್ಳಿಯಲ್ಲಿರುವ ಫಾರ್ಮ್​​ಹೌಸ್​ನಲ್ಲಿ ಬಂಟರ ಸಂಪ್ರದಾಯದಂತೆ ಮಧ್ಯಾಹ್ನ 3:30ಕ್ಕೆ ಅಂತಿಮ ಸಂಸ್ಕಾರ ನಡೆಯಲಿದೆ. ಆಪ್ತರು, ಗಣ್ಯರು, ಕುಟುಂಬದವರು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ