‘ಅಮ್ಮ ಕಂಡ ಕನಸು ಸಾಕಷ್ಟಿದೆ, ಬಾಕಿಯಿರುವ ಕೆಲಸ ಮಾಡುತ್ತೇನೆ’- ವಿನೋದ್ ರಾಜ್

ಲೀಲಾವತಿ ಅಂತಿಮ ದರ್ಶನ: ಇಂದು (ಡಿಸೆಂಬರ್ 9) ಬೆಳಿಗ್ಗೆ 10:45ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಲೀಲಾವತಿ ಅವರ ಪಾರ್ಥಿವ ಶರೀರ ತರಲಾಗುತ್ತದೆ. ಈ ವೇಳೆ ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.

‘ಅಮ್ಮ ಕಂಡ ಕನಸು ಸಾಕಷ್ಟಿದೆ, ಬಾಕಿಯಿರುವ ಕೆಲಸ ಮಾಡುತ್ತೇನೆ’- ವಿನೋದ್ ರಾಜ್
ಲೀಲಾವತಿ-ವಿನೋದ್ ರಾಜ್
Follow us
|

Updated on: Dec 09, 2023 | 7:08 AM

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Leelavathi) ಅವರು ಶುಕ್ರವಾರ (ಡಿಸೆಂಬರ್ 8) ನಿಧನರಾಗಿದ್ದಾರೆ. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ನೂರಾರು ಸಿನಿಮಾಗಳಲ್ಲಿ ನಟಿಸಿದ್ದ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದರು. ತಾಯಿಯನ್ನು ಕಳೆದುಕೊಂಡು ವಿನೋದ್ ರಾಜ್ ಅವರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಅಮ್ಮ ಇಲ್ಲ ಎಂಬ ನೋವು ಅವರನ್ನು ಬಹುವಾಗಿ ಕಾಡುತ್ತಿದೆ. ಅಮ್ಮ ಕಂಡ ಕನಸನ್ನು ಈಡೇರಿಸುವ ಉದ್ದೇಶವನ್ನು ವಿನೋದ್ ಹೊಂದಿದ್ದಾರೆ.

‘56 ವರ್ಷಗಳ ಕಾಲ ತಾಯಿ ಜೊತೆ ಕಾಲ ಕಳೆದೆ. ನನ್ನಮ್ಮ ಪ್ರೀತಿಗೆ ಕೊರತೆ ಮಾಡಲಿಲ್ಲ. ಜೀವನ ಪೂರ್ತಿ ನನ್ನ ಕೈಹಿಡಿದುಕೊಂಡೇ ಕಳೆದುಹೋದರು. ನೀರು ಕುಡಿಯುವಾಗಲೇ ಪ್ರಾಣಬಿಟ್ಟರು. ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ನಾನು 2-3 ತಿಂಗಳಿಂದ ಊಟ ಮಾಡುವುದನ್ನೇ ಬಿಟ್ಟಿದ್ದೆ. ಶಿವರಾಜ್​ಕುಮಾರ್ ಅಪ್ಸೆಟ್ ಆಗಬೇಡಿ ಎಂದು ಹೇಳಿದ್ದಾರೆ. ಎಷ್ಟು ಬೇಡಿಕೊಂಡರೂ ತಾಯಿ ಪಡೆದುಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದಾರೆ ವಿನೋದ್ ರಾಜ್.

ಇದನ್ನೂ ಓದಿ: ಬೆಂಗಳೂರಿನಲ್ಲೂ ಲೀಲಾವತಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಎಲ್ಲಿ?

‘ಅಮ್ಮ ಹೇಳಿದ ತಾಳ್ಮೆ, ಸಮಾಧಾನ ಯಾರೂ ಹೇಳಲು ಸಾಧ್ಯವಿಲ್ಲ. ಅವರ ಸಾಕಷ್ಟು ಕನಸುಗಳಿದ್ದವು, ಬಾಕಿಯಿರುವ ಕೆಲಸ ಮಾಡುತ್ತೇನೆ. ಮನೆಯಿಂದ ಹೊರಡುವಾಗ ಐವತ್ತು ನೂರು ಕೊಟ್ಟು ಹೋಗುತ್ತಿದ್ದರು. ನಮಗಿಂತ ಬlಡತನದಲ್ಲಿರುವವರ ಬೆನ್ನಿಗೆ ನಿಲ್ಲಬೇಕು ಎಂದು ಅಮ್ಮ ಹೇಳುತ್ತಿದ್ದರು’ ಎಂದು ಅಮ್ಮನ ಮಾತನ್ನು ವಿನೋದ್ ರಾಜ್ ನೆನಪಿಸಿಕೊಂಡಿದ್ದಾರೆ.

ಅಂತಿಮ ದರ್ಶನ…

ಇಂದು (ಡಿಸೆಂಬರ್ 9) ಬೆಳಿಗ್ಗೆ 10:45ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಲೀಲಾವತಿ ಅವರ ಪಾರ್ಥಿವ ಶರೀರ ತರಲಾಗುತ್ತದೆ. ಈ ವೇಳೆ ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಲಿದ್ದಾರೆ. ಸೋಲದೇವನಹಳ್ಳಿಯಲ್ಲಿರುವ ಫಾರ್ಮ್​​ಹೌಸ್​ನಲ್ಲಿ ಬಂಟರ ಸಂಪ್ರದಾಯದಂತೆ ಮಧ್ಯಾಹ್ನ 3:30ಕ್ಕೆ ಅಂತಿಮ ಸಂಸ್ಕಾರ ನಡೆಯಲಿದೆ. ಆಪ್ತರು, ಗಣ್ಯರು, ಕುಟುಂಬದವರು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ