AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ಯಾಮಿಲಿ ಡ್ರಾಮಾ’ ಹಾಡಿನಲ್ಲಿ ಕೊಲೆ ಸ್ಕೆಚ್​; ಸಾಂಗ್​ನಿಂದ ಹೆಚ್ಚಾಗಿದೆ ನಿರೀಕ್ಷೆ

‘ಫ್ಯಾಮಿಲಿ ಡ್ರಾಮಾ’ ಒಂದು ಡಿಫರೆಂಟ್​ ಸಿನಿಮಾ ಆಗಲಿದೆ ಎಂಬುದಕ್ಕೆ ಈಗಾಗಲೇ ಟ್ರೇಲರ್​ ಮೂಲಕ ಸುಳಿವು ಸಿಕ್ಕಿದೆ. ಶೀರ್ಷಿಕೆಯೇ ಹೇಳುವಂತೆ ಒಂದು ಕುಟುಂಬದ ಕಥೆ ಇದರಲ್ಲಿ ಇದೆ. ಅಷ್ಟೇ ಅಲ್ಲ, ಕೊಲೆಯ ಕಹಾನಿ ಕೂಡ ಹೈಲೈಟ್​ ಆಗಲಿದೆ. ಅದರ ಬಗ್ಗೆ ಇನ್ನಷ್ಟು ಕುತೂಹಲ ಮೂಡಿಸುವ ರೀತಿಯಲ್ಲಿ ‘ಫ್ಯಾಮಿಲಿ ಡ್ರಾಮಾ’ ಟೈಟಲ್​ ಸಾಂಗ್​ ಮೂಡಿಬಂದಿದೆ. ಈ ಗೀತೆಗೆ ವಾಸುಕಿ ವೈಭವ್​ ಧ್ವನಿ ನೀಡಿದ್ದಾರೆ.

‘ಫ್ಯಾಮಿಲಿ ಡ್ರಾಮಾ’ ಹಾಡಿನಲ್ಲಿ ಕೊಲೆ ಸ್ಕೆಚ್​; ಸಾಂಗ್​ನಿಂದ ಹೆಚ್ಚಾಗಿದೆ ನಿರೀಕ್ಷೆ
‘ಫ್ಯಾಮಿಲಿ ಡ್ರಾಮಾ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jul 03, 2024 | 8:06 PM

Share

ಟ್ರೇಲರ್​ ಮೂಲಕ ‘ಫ್ಯಾಮಿಲಿ ಡ್ರಾಮಾ’ ಸಿನಿಮಾ ಸದ್ದು ಮಾಡುತ್ತಿದೆ. ಈ ಚಿತ್ರತಂಡದಿಂದ ಒಂದು ಹೊಸ ಸಾಂಗ್ ಬಿಡುಗಡೆ ಮಾಡಲಾಗಿದೆ. ಇದು ಸಿನಿಮಾದ ಶೀರ್ಷಿಕೆ ಗೀತೆ. ಆಕರ್ಷ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಇದು ಅವರ ಮೊದಲ ಸಿನಿಮಾ. ಅಭಯ್, ಅನನ್ಯಾ ಅಮರ್, ರೇಖಾ, ಸಿಂಧು ಶ್ರೀನಿವಾಸ್ ಮೂರ್ತಿ, ಪೂರ್ಣಚಂದ್ರ ಮೈಸೂರು ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಡಬ್ಬುಗುಡಿ ಮುರಳಿಕೃಷ್ಣ ಅವರು ‘ಡಿಎಂಕೆ ಎಂಟರ್​ಟೇನ್ಮೆಂಟ್’ ಸಂಸ್ಥೆಯ ಮೂಲಕ ಬಂಡವಾಳ ಹೂಡಿದ್ದಾರೆ. ಬಹುತೇಕ ಹೊಸ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಕ್ರಿಯೇಟಿವ್​ ಆದಂತಹ ಟ್ರೇಲರ್​ ನೋಡಿದ ಬಳಿಕ ‘ಫ್ಯಾಮಿಲಿ ಡ್ರಾಮಾ’ ಒಂದು ಡಿಫರೆಂಟ್​ ಸಿನಿಮಾ ಆಗಲಿದೆ ಎಂಬ ಅಭಿಪ್ರಾಯ ಪ್ರೇಕ್ಷಕರಲ್ಲಿ ಮೂಡಿದೆ. ಅದರ ಜೊತೆ, ಈಗ ಬಿಡುಗಡೆ ಆಗಿರುವ ಟೈಟಲ್ ಟ್ರ್ಯಾಕ್ ಕೂಡ ಜನರ ಗಮನ ಸೆಳೆಯುತ್ತದೆ. ವಾಸುಕಿ ವೈಭವ್ ಅವರ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ‘ಲಿ ಲಿ ಫ್ಯಾಮಿಲಿ..’ ಎಂಬ ಹಾಡಿನ ದೃಶ್ಯಗಳು ಕೂಡ ಇಂಟರೆಸ್ಟಿಂಗ್​ ಆಗಿವೆ. ಸಿನಿಮಾದ ಬಗ್ಗೆ ಕೌತುಕ ಹೆಚ್ಚಿಸುವಲ್ಲಿ ಈ ಸಾಂಗ್​ ಯಶಸ್ವಿಯಾಗಿದೆ.

ಇದನ್ನೂ ಓದಿ: ಸದ್ದು ಮಾಡುತ್ತಿದೆ ‘ಫ್ಯಾಮಿಲಿ ಡ್ರಾಮಾ’ ಟ್ರೇಲರ್​; ಭರವಸೆ ಮೂಡಿಸಿದ ಹೊಸ ಸಿನಿಮಾ ತಂಡ

‘ಲಿ ಲಿ ಫ್ಯಾಮಿಲಿ..’ ಹಾಡಿಗೆ ಚೇತನ್ ಅಮ್ಮಯ್ಯ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಶರತ್ ವಶಿಷ್ಠ ಮತ್ತು ಚೇತನ್ ಅಮ್ಮಯ್ಯ ಜೊತೆಯಾಗಿ ಸಾಹಿತ್ಯ ರಚಿಸಿದ್ದಾರೆ. ಒಂದು ಪಾರ್ಟಿಯ ಹಿನ್ನೆಲೆಯಲ್ಲಿ ಈ ಸಾಂಗ್​ ಸಾಗುತ್ತದೆ. ಸಿಂಧು, ಅಭಯ್, ಅನಯ್ಯಾ ಆ್ಯಂಡ್ ಗ್ಯಾಂಗ್​ನವರು ಯಾರನ್ನೊ ಕೊಲೆ ಮಾಡಲು ಸ್ಕೆಚ್ ಹಾಕುವ ಸನ್ನಿವೇಶ ಇದರಲ್ಲಿದೆ. ಮುಂದೇನಾಗುತ್ತದೆ ಎಂಬ ಕೌತುಕ ಮೂಡಿಸುವ ರೀತಿಯಲ್ಲಿ ಹಾಡು ಮೂಡಿಬಂದಿದೆ.

ಈ ಸಿನಿಮಾ ಮೇಲೆ ನಿರ್ಮಾಪಕ ಮುರಳಿಕೃಷ್ಣ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಅವರು ತಮ್ಮ ನೆಲದ ಮೇಲಿನ ಪ್ರೀತಿ ಹಾಗೂ ಸಿನಿಮಾ ಮೇಲಿನ ಆಸಕ್ತಿಯಿಂದ ‘ಫ್ಯಾಮಿಲಿ ಡ್ರಾಮಾ’ ನಿರ್ಮಿಸಿದ್ದಾರೆ. ಉತ್ತಮ ಸಿನಿಮಾಗಳನ್ನು ಪ್ರೇಕ್ಷಕರಿಗೆ ನೀಡಬೇಕು ಎಂಬುದು ಅವರ ಗುರಿ. ಕನ್ನಡದ ‘ಫ್ಯಾಮಿಲಿ ಡ್ರಾಮ’ ಮಾತ್ರವಲ್ಲದೇ ತೆಲುಗಿನಲ್ಲಿ 3 ಸಿನಿಮಾಗಳ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ‘ಡಿಎಂಕೆ ಎಂಟರ್​ಟೇನ್ಮೆಂಟ್’ ಮೂಲಕ ಹೊಸಬರಿಗೆ ಅವಕಾಶ ನೀಡಬೇಕು ಮತ್ತು ದೊಡ್ಡ ಬಜೆಟ್​ನಲ್ಲಿ ಸ್ಟಾರ್ ನಟರ ಸಿನಿಮಾಗಳನ್ನು ನಿರ್ಮಿಸಬೇಕು ಎಂಬ ಉದ್ದೇಶ ಕೂಡ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ