AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ

Vijay Deverakonda | Puneeth Rajkumar: ‘ಲೈಗರ್’ ಸಿನಿಮಾ ಪ್ರಮೋಷನ್​ ಸಲುವಾಗಿ ವಿಜಯ್​ ದೇವರಕೊಂಡ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ್ದಾರೆ.

Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ
ವಿಜಯ್​ ದೇವರಕೊಂಡ, ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on:Aug 19, 2022 | 1:36 PM

Share

ಟಾಲಿವುಡ್​ನ ಖ್ಯಾತ ನಟ ವಿಜಯ್​ ದೇವರಕೊಂಡ (Vijay Deverakonda) ಅವರು ಇಂದು (ಆಗಸ್ಟ್​ 19) ಬೆಂಗಳೂರಿಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ‘ಲೈಗರ್​’ (Liger Movie) ಸಿನಿಮಾದ ಪ್ರಚಾರದ ಸಲುವಾಗಿ ಅವರು ಬಂದಿದ್ದಾರೆ. ಈ ವೇಳೆ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ್ದಾರೆ. ಅಪ್ಪು ನಿಧನರಾಗಿ ಹಲವು ತಿಂಗಳು ಕಳೆದಿದೆ. ಪರಭಾಷೆಯ ಯಾವುದೇ ಸ್ಟಾರ್​ ನಟರು ಬೆಂಗಳೂರಿಗೆ ಬಂದಾಗ ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸುತ್ತಾರೆ. ಅದೇ ರೀತಿ, ವಿಜಯ್​ ದೇವರಕೊಂಡ ಕೂಡ ಕಂಠೀರವ ಸ್ಟುಡಿಯೋದಲ್ಲಿ ಇರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ (Puneeth Rajkumar Samadhi) ಭೇಟಿ ನೀಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದ ಜೊತೆಗೆ ಪುನೀತ್​ ಉತ್ತಮ ಒಡನಾಟ ಹೊಂದಿದ್ದರು. ಹಾಗಾಗಿ ಅವರನ್ನು ಕಂಡರೆ ಎಲ್ಲರಿಗೂ ಅಪಾರ ಗೌರವ. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ.

‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರು ಮೊದಲ ಬಾರಿ ಹೀರೋ ಆಗಿ ನಟಿಸಿದ ‘ಅಪ್ಪು’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದು ಕೂಡ ಪುರಿ ಜಗನ್ನಾಥ್​. ಅವರಿಗೆ ಡಾ. ರಾಜ್​ಕುಮಾರ್​ ಕುಟುಂಬದ ಜೊತೆಗೆ ಒಡನಾಟ ಇದೆ. ಈಗ ಅವರು ನಿರ್ದೇಶನ ಮಾಡಿರುವ ‘ಲೈಗರ್​’ ಚಿತ್ರದ ಬಗ್ಗೆ ಬೆಂಗಳೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಮೂಡಿಬಂದಿರುವ ‘ಲೈಗರ್​’ ಚಿತ್ರದಲ್ಲಿ ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ. ಬಾಕ್ಸರ್​ ಪಾತ್ರದಲ್ಲಿ ವಿಜಯ್​ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ. ವಿಶ್ವ ವಿಖ್ಯಾತ ಬಾಕ್ಸರ್​ ಮೈಕ್​ ಟೈಸನ್​ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಮತ್ತು ಹಾಡುಗಳು ಧೂಳೆಬ್ಬಿಸಿವೆ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಲ್ಲಿ ತೆರೆಕಾಣಲಿದೆ. ಹಾಗಾಗಿ ದೇಶದ ವಿವಿಧ ನಗರಗಳಿಗೆ ತೆರಳಿ ಭರ್ಜರಿಯಾಗಿ ಪ್ರಮೋಷನ್​ ಮಾಡಲಾಗುತ್ತಿದೆ. ಹೋದಲ್ಲೆಲ್ಲ ಅವರಿಗೆ ಭರ್ಜರಿ ಸ್ವಾಗತ ಸಿಗುತ್ತಿದೆ. ಈ ಸಿನಿಮಾ ಮೇಲೆ ವಿಜಯ್​ ದೇವರಕೊಂಡ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಬಾಲಿವುಡ್​ ಬಾಕ್ಸ್​ ಆಫೀಸ್​ ಮೇಲೆ ವಿಜಯ್​​ ದೇವರಕೊಂಡ ಕಣ್ಣಿಟ್ಟಿದ್ದಾರೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​, ಚಾರ್ಮಿ ಕೌರ್​, ಕರಣ್​ ಜೋಹರ್​ ಮುಂತಾದವರು ಬಂಡವಾಳ ಹೂಡಿದ್ದಾರೆ. ಮೊದಲ ದಿನ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಗುವ ಸಾಧ್ಯತೆ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:25 pm, Fri, 19 August 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!