Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ

Vijay Deverakonda | Puneeth Rajkumar: ‘ಲೈಗರ್’ ಸಿನಿಮಾ ಪ್ರಮೋಷನ್​ ಸಲುವಾಗಿ ವಿಜಯ್​ ದೇವರಕೊಂಡ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ್ದಾರೆ.

Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ
ವಿಜಯ್​ ದೇವರಕೊಂಡ, ಪುನೀತ್​ ರಾಜ್​ಕುಮಾರ್
Follow us
| Updated By: ಮದನ್​ ಕುಮಾರ್​

Updated on:Aug 19, 2022 | 1:36 PM

ಟಾಲಿವುಡ್​ನ ಖ್ಯಾತ ನಟ ವಿಜಯ್​ ದೇವರಕೊಂಡ (Vijay Deverakonda) ಅವರು ಇಂದು (ಆಗಸ್ಟ್​ 19) ಬೆಂಗಳೂರಿಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ‘ಲೈಗರ್​’ (Liger Movie) ಸಿನಿಮಾದ ಪ್ರಚಾರದ ಸಲುವಾಗಿ ಅವರು ಬಂದಿದ್ದಾರೆ. ಈ ವೇಳೆ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ್ದಾರೆ. ಅಪ್ಪು ನಿಧನರಾಗಿ ಹಲವು ತಿಂಗಳು ಕಳೆದಿದೆ. ಪರಭಾಷೆಯ ಯಾವುದೇ ಸ್ಟಾರ್​ ನಟರು ಬೆಂಗಳೂರಿಗೆ ಬಂದಾಗ ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸುತ್ತಾರೆ. ಅದೇ ರೀತಿ, ವಿಜಯ್​ ದೇವರಕೊಂಡ ಕೂಡ ಕಂಠೀರವ ಸ್ಟುಡಿಯೋದಲ್ಲಿ ಇರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ (Puneeth Rajkumar Samadhi) ಭೇಟಿ ನೀಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದ ಜೊತೆಗೆ ಪುನೀತ್​ ಉತ್ತಮ ಒಡನಾಟ ಹೊಂದಿದ್ದರು. ಹಾಗಾಗಿ ಅವರನ್ನು ಕಂಡರೆ ಎಲ್ಲರಿಗೂ ಅಪಾರ ಗೌರವ. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ.

‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರು ಮೊದಲ ಬಾರಿ ಹೀರೋ ಆಗಿ ನಟಿಸಿದ ‘ಅಪ್ಪು’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದು ಕೂಡ ಪುರಿ ಜಗನ್ನಾಥ್​. ಅವರಿಗೆ ಡಾ. ರಾಜ್​ಕುಮಾರ್​ ಕುಟುಂಬದ ಜೊತೆಗೆ ಒಡನಾಟ ಇದೆ. ಈಗ ಅವರು ನಿರ್ದೇಶನ ಮಾಡಿರುವ ‘ಲೈಗರ್​’ ಚಿತ್ರದ ಬಗ್ಗೆ ಬೆಂಗಳೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಮೂಡಿಬಂದಿರುವ ‘ಲೈಗರ್​’ ಚಿತ್ರದಲ್ಲಿ ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ. ಬಾಕ್ಸರ್​ ಪಾತ್ರದಲ್ಲಿ ವಿಜಯ್​ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ. ವಿಶ್ವ ವಿಖ್ಯಾತ ಬಾಕ್ಸರ್​ ಮೈಕ್​ ಟೈಸನ್​ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಮತ್ತು ಹಾಡುಗಳು ಧೂಳೆಬ್ಬಿಸಿವೆ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಲ್ಲಿ ತೆರೆಕಾಣಲಿದೆ. ಹಾಗಾಗಿ ದೇಶದ ವಿವಿಧ ನಗರಗಳಿಗೆ ತೆರಳಿ ಭರ್ಜರಿಯಾಗಿ ಪ್ರಮೋಷನ್​ ಮಾಡಲಾಗುತ್ತಿದೆ. ಹೋದಲ್ಲೆಲ್ಲ ಅವರಿಗೆ ಭರ್ಜರಿ ಸ್ವಾಗತ ಸಿಗುತ್ತಿದೆ. ಈ ಸಿನಿಮಾ ಮೇಲೆ ವಿಜಯ್​ ದೇವರಕೊಂಡ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಬಾಲಿವುಡ್​ ಬಾಕ್ಸ್​ ಆಫೀಸ್​ ಮೇಲೆ ವಿಜಯ್​​ ದೇವರಕೊಂಡ ಕಣ್ಣಿಟ್ಟಿದ್ದಾರೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​, ಚಾರ್ಮಿ ಕೌರ್​, ಕರಣ್​ ಜೋಹರ್​ ಮುಂತಾದವರು ಬಂಡವಾಳ ಹೂಡಿದ್ದಾರೆ. ಮೊದಲ ದಿನ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಗುವ ಸಾಧ್ಯತೆ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:25 pm, Fri, 19 August 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ