AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ

Vijay Deverakonda | Puneeth Rajkumar: ‘ಲೈಗರ್’ ಸಿನಿಮಾ ಪ್ರಮೋಷನ್​ ಸಲುವಾಗಿ ವಿಜಯ್​ ದೇವರಕೊಂಡ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ್ದಾರೆ.

Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ
ವಿಜಯ್​ ದೇವರಕೊಂಡ, ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on:Aug 19, 2022 | 1:36 PM

Share

ಟಾಲಿವುಡ್​ನ ಖ್ಯಾತ ನಟ ವಿಜಯ್​ ದೇವರಕೊಂಡ (Vijay Deverakonda) ಅವರು ಇಂದು (ಆಗಸ್ಟ್​ 19) ಬೆಂಗಳೂರಿಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ‘ಲೈಗರ್​’ (Liger Movie) ಸಿನಿಮಾದ ಪ್ರಚಾರದ ಸಲುವಾಗಿ ಅವರು ಬಂದಿದ್ದಾರೆ. ಈ ವೇಳೆ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ್ದಾರೆ. ಅಪ್ಪು ನಿಧನರಾಗಿ ಹಲವು ತಿಂಗಳು ಕಳೆದಿದೆ. ಪರಭಾಷೆಯ ಯಾವುದೇ ಸ್ಟಾರ್​ ನಟರು ಬೆಂಗಳೂರಿಗೆ ಬಂದಾಗ ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸುತ್ತಾರೆ. ಅದೇ ರೀತಿ, ವಿಜಯ್​ ದೇವರಕೊಂಡ ಕೂಡ ಕಂಠೀರವ ಸ್ಟುಡಿಯೋದಲ್ಲಿ ಇರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ (Puneeth Rajkumar Samadhi) ಭೇಟಿ ನೀಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದ ಜೊತೆಗೆ ಪುನೀತ್​ ಉತ್ತಮ ಒಡನಾಟ ಹೊಂದಿದ್ದರು. ಹಾಗಾಗಿ ಅವರನ್ನು ಕಂಡರೆ ಎಲ್ಲರಿಗೂ ಅಪಾರ ಗೌರವ. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ.

‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರು ಮೊದಲ ಬಾರಿ ಹೀರೋ ಆಗಿ ನಟಿಸಿದ ‘ಅಪ್ಪು’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದು ಕೂಡ ಪುರಿ ಜಗನ್ನಾಥ್​. ಅವರಿಗೆ ಡಾ. ರಾಜ್​ಕುಮಾರ್​ ಕುಟುಂಬದ ಜೊತೆಗೆ ಒಡನಾಟ ಇದೆ. ಈಗ ಅವರು ನಿರ್ದೇಶನ ಮಾಡಿರುವ ‘ಲೈಗರ್​’ ಚಿತ್ರದ ಬಗ್ಗೆ ಬೆಂಗಳೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಮೂಡಿಬಂದಿರುವ ‘ಲೈಗರ್​’ ಚಿತ್ರದಲ್ಲಿ ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ. ಬಾಕ್ಸರ್​ ಪಾತ್ರದಲ್ಲಿ ವಿಜಯ್​ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ. ವಿಶ್ವ ವಿಖ್ಯಾತ ಬಾಕ್ಸರ್​ ಮೈಕ್​ ಟೈಸನ್​ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಮತ್ತು ಹಾಡುಗಳು ಧೂಳೆಬ್ಬಿಸಿವೆ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಲ್ಲಿ ತೆರೆಕಾಣಲಿದೆ. ಹಾಗಾಗಿ ದೇಶದ ವಿವಿಧ ನಗರಗಳಿಗೆ ತೆರಳಿ ಭರ್ಜರಿಯಾಗಿ ಪ್ರಮೋಷನ್​ ಮಾಡಲಾಗುತ್ತಿದೆ. ಹೋದಲ್ಲೆಲ್ಲ ಅವರಿಗೆ ಭರ್ಜರಿ ಸ್ವಾಗತ ಸಿಗುತ್ತಿದೆ. ಈ ಸಿನಿಮಾ ಮೇಲೆ ವಿಜಯ್​ ದೇವರಕೊಂಡ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಬಾಲಿವುಡ್​ ಬಾಕ್ಸ್​ ಆಫೀಸ್​ ಮೇಲೆ ವಿಜಯ್​​ ದೇವರಕೊಂಡ ಕಣ್ಣಿಟ್ಟಿದ್ದಾರೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​, ಚಾರ್ಮಿ ಕೌರ್​, ಕರಣ್​ ಜೋಹರ್​ ಮುಂತಾದವರು ಬಂಡವಾಳ ಹೂಡಿದ್ದಾರೆ. ಮೊದಲ ದಿನ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಗುವ ಸಾಧ್ಯತೆ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:25 pm, Fri, 19 August 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ