AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್​ಐಆರ್

ಕಳೆದ ಕೆಲವು ದಿನಗಳಿಂದ ‘ಮನದ ಕಡಲು’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. 30 ಅಡಿ ಎತ್ತರದಲ್ಲಿದ್ದ ಲೈಟ್​ ಬಿಚ್ಚುವ ಸಂದರ್ಭದಲ್ಲಿ ಲೈಟ್​ ಮ್ಯಾನ್​ ಮೋಹನ್​ ಕುಮಾರ್​ ಎಂಬುವವರು ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್​ ಭಟ್​ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲು ಮಾಡಲಾಗಿದೆ.

ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್​ಐಆರ್
ಯೋಗರಾಜ್​ ಭಟ್​,
ಬಿ ಮೂರ್ತಿ, ನೆಲಮಂಗಲ
| Edited By: |

Updated on: Sep 05, 2024 | 10:13 PM

Share

‘ಮನದ ಕಡಲು’ ಸಿನಿಮಾದ ಶೂಟಿಂಗ್​ ವೇಳೆ ದುರ್ಘಟನೆ ಸಂಭವಿಸಿದೆ. 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಸೇರಿ ಚಿತ್ರತಂಡದ ಕೆಲವರ ಮೇಲೆ ಎಫ್​ಐಆರ್​ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಿದ್ದರಿಂದ ‘ಮನದ ಕಡಲು’ ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಮೇಲೆ ದೂರು ದಾಖಲಾಗಿದೆ.

ಕಳೆದ 15 ದಿನಗಳಿಂದ ಅಡಕಮಾರನಹಳ್ಳಿಯ ವಿ.ಆರ್.ಎಲ್. ಗೋಡೌನ್​ನಲ್ಲಿ ‘ಮನದ ಕಡಲು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಮಂಗಳವಾರ ಸಂಜೆ 5.10ರ ವೇಳೆಗೆ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ. 30 ಅಡಿ ಎತ್ತರದ ಅಲ್ಯುಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ ಮೋಹನ್​ ಅಲ್ಲಿಂದ ಬಿದ್ದರು.

ಶೂಟಿಂಗ್ ಸೆಟ್​ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರ್​ಗೆ ಸುರಕ್ಷತಾ ಸಾಧನಗಳನ್ನು ಕೊಡದೇ ಕೆಲಸ ಮಾಡಿಸುತ್ತಿದ್ದರು ಎಂಬ ಆರೋಪ ಚಿತ್ರತಂಡದ ಮೇಲೆ ಬಂದಿದೆ. ಮೋಹನ್ ಕುಮಾರ್ ಮೇಲಿಂದ ಕೆಳಕ್ಕೆ ಬಿದ್ದಾಗ ತಲೆಗೆ ಏಟಾಗಿ ತೀವ್ರ ರಕ್ತಸ್ರಾವ ಆಯಿತು. ಬಳಿಕ ಅವರನ್ನು ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರು. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: 45 ಕೋಟಿ ರೂ. ಬಜೆಟ್​ನ ಸಿನಿಮಾದ ಕಲೆಕ್ಷನ್ ಬರೀ 45 ಸಾವಿರ ರೂ; ಅತಿ ದೊಡ್ಡ ಫ್ಲಾಪ್

ಚಿತ್ರೀಕರಣದ ಸ್ಥಳದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಈ ಹಿಂದೆ ಕೂಡ ಕೆಲವು ಸಿನಿಮಾಗಳ ಶೂಟಿಂಗ್​ ವೇಳೆ ಅವಘಡಗಳು ಸಂಭವಿಸಿದ್ದವು. ಅಜಯ್​ ರಾವ್​ ನಟನೆಯ ‘ಲವ್​ ಯೂ ರಚ್ಚು’ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ವಿದ್ಯುತ್​ ಸ್ಪರ್ಶದಿಂದ ಫೈಟರ್​ ವಿವೇಕ್​ ಎಂಬುವವರು ಸಾವನ್ನಪ್ಪಿದ್ದರು. ‘ಮಾಸ್ತಿ ಗುಡಿ’ ಚಿತ್ರೀಕರಣದ ವೇಳೆ ಉದಯ್​ ಮತ್ತು ಅನಿಲ್​ ಅವರು ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ಪ್ರಾಣಬಿಟ್ಟಿದ್ದರು. ಈಗ ಮತ್ತೊಂದು ಸಿನಿಮಾದ ಶೂಟಿಂಗ್​ ವೇಳೆ ಕಾರ್ಮಿಕ ಸಾವಿಗೆ ಈಡಾಗಿರುವುದು ನೋವಿನ ಸಂಗತಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ