AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್​ಐಆರ್

ಕಳೆದ ಕೆಲವು ದಿನಗಳಿಂದ ‘ಮನದ ಕಡಲು’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. 30 ಅಡಿ ಎತ್ತರದಲ್ಲಿದ್ದ ಲೈಟ್​ ಬಿಚ್ಚುವ ಸಂದರ್ಭದಲ್ಲಿ ಲೈಟ್​ ಮ್ಯಾನ್​ ಮೋಹನ್​ ಕುಮಾರ್​ ಎಂಬುವವರು ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್​ ಭಟ್​ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲು ಮಾಡಲಾಗಿದೆ.

ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್​ಐಆರ್
ಯೋಗರಾಜ್​ ಭಟ್​,
ಬಿ ಮೂರ್ತಿ, ನೆಲಮಂಗಲ
| Edited By: |

Updated on: Sep 05, 2024 | 10:13 PM

Share

‘ಮನದ ಕಡಲು’ ಸಿನಿಮಾದ ಶೂಟಿಂಗ್​ ವೇಳೆ ದುರ್ಘಟನೆ ಸಂಭವಿಸಿದೆ. 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಸೇರಿ ಚಿತ್ರತಂಡದ ಕೆಲವರ ಮೇಲೆ ಎಫ್​ಐಆರ್​ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಿದ್ದರಿಂದ ‘ಮನದ ಕಡಲು’ ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಮೇಲೆ ದೂರು ದಾಖಲಾಗಿದೆ.

ಕಳೆದ 15 ದಿನಗಳಿಂದ ಅಡಕಮಾರನಹಳ್ಳಿಯ ವಿ.ಆರ್.ಎಲ್. ಗೋಡೌನ್​ನಲ್ಲಿ ‘ಮನದ ಕಡಲು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಮಂಗಳವಾರ ಸಂಜೆ 5.10ರ ವೇಳೆಗೆ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ. 30 ಅಡಿ ಎತ್ತರದ ಅಲ್ಯುಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ ಮೋಹನ್​ ಅಲ್ಲಿಂದ ಬಿದ್ದರು.

ಶೂಟಿಂಗ್ ಸೆಟ್​ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರ್​ಗೆ ಸುರಕ್ಷತಾ ಸಾಧನಗಳನ್ನು ಕೊಡದೇ ಕೆಲಸ ಮಾಡಿಸುತ್ತಿದ್ದರು ಎಂಬ ಆರೋಪ ಚಿತ್ರತಂಡದ ಮೇಲೆ ಬಂದಿದೆ. ಮೋಹನ್ ಕುಮಾರ್ ಮೇಲಿಂದ ಕೆಳಕ್ಕೆ ಬಿದ್ದಾಗ ತಲೆಗೆ ಏಟಾಗಿ ತೀವ್ರ ರಕ್ತಸ್ರಾವ ಆಯಿತು. ಬಳಿಕ ಅವರನ್ನು ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರು. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: 45 ಕೋಟಿ ರೂ. ಬಜೆಟ್​ನ ಸಿನಿಮಾದ ಕಲೆಕ್ಷನ್ ಬರೀ 45 ಸಾವಿರ ರೂ; ಅತಿ ದೊಡ್ಡ ಫ್ಲಾಪ್

ಚಿತ್ರೀಕರಣದ ಸ್ಥಳದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಈ ಹಿಂದೆ ಕೂಡ ಕೆಲವು ಸಿನಿಮಾಗಳ ಶೂಟಿಂಗ್​ ವೇಳೆ ಅವಘಡಗಳು ಸಂಭವಿಸಿದ್ದವು. ಅಜಯ್​ ರಾವ್​ ನಟನೆಯ ‘ಲವ್​ ಯೂ ರಚ್ಚು’ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ವಿದ್ಯುತ್​ ಸ್ಪರ್ಶದಿಂದ ಫೈಟರ್​ ವಿವೇಕ್​ ಎಂಬುವವರು ಸಾವನ್ನಪ್ಪಿದ್ದರು. ‘ಮಾಸ್ತಿ ಗುಡಿ’ ಚಿತ್ರೀಕರಣದ ವೇಳೆ ಉದಯ್​ ಮತ್ತು ಅನಿಲ್​ ಅವರು ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ಪ್ರಾಣಬಿಟ್ಟಿದ್ದರು. ಈಗ ಮತ್ತೊಂದು ಸಿನಿಮಾದ ಶೂಟಿಂಗ್​ ವೇಳೆ ಕಾರ್ಮಿಕ ಸಾವಿಗೆ ಈಡಾಗಿರುವುದು ನೋವಿನ ಸಂಗತಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ