AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಟೀಸರ್​ನಿಂದ ‘ಕೆಜಿಎಫ್ 2’ ಚಿತ್ರಕ್ಕೆ ಲಿಂಕ್ ಕೊಟ್ಟ ಪ್ರಶಾಂತ್ ನೀಲ್; ಇವುಗಳನ್ನು ಗಮನಿಸಿದ್ರಾ?

Salaar Movie Teaser: ‘ಕೆಜಿಎಫ್ 2’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ರಾಕಿ ಸಮುದ್ರಕ್ಕೆ ಬೀಳುತ್ತಾನೆ. ಆಗ ಸಮಯ ಮುಂಜಾನೆ 5 ಗಂಟೆ. ಈ ಕಾರಣದಿಂದಲೇ ‘ಸಲಾರ್’ ಟೀಸರ್ ಆ ಸಮಯಕ್ಕೆ ರಿಲೀಸ್ ಆಗುತ್ತಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದರು.

‘ಸಲಾರ್’ ಟೀಸರ್​ನಿಂದ ‘ಕೆಜಿಎಫ್ 2’ ಚಿತ್ರಕ್ಕೆ ಲಿಂಕ್ ಕೊಟ್ಟ ಪ್ರಶಾಂತ್ ನೀಲ್; ಇವುಗಳನ್ನು ಗಮನಿಸಿದ್ರಾ?
ಸಲಾರ್​-ಕೆಜಿಎಫ್ 2
ರಾಜೇಶ್ ದುಗ್ಗುಮನೆ
|

Updated on: Jul 06, 2023 | 8:29 AM

Share

‘ಸಲಾರ್’ ಸಿನಿಮಾ (Salaar Movie) ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಇದು ಪ್ರಶಾಂತ್ ನೀಲ್ ಯೂನಿವರ್ಸ್ ಎಂದು ಎಲ್ಲರೂ ಕರೆದಿದ್ದಾರೆ. ‘ಕೆಜಿಎಫ್ 2’ (KGF Chapter 2) ಚಿತ್ರಕ್ಕೂ ‘ಸಲಾರ್’ ಚಿತ್ರಕ್ಕೂ ಲಿಂಕ್ ಇದೆ ಅನ್ನೋದು ಬಹಳ ಹಿಂದಿನಿಂದ ಮೂಡಿಬರುತ್ತಿರುವ ಚರ್ಚೆ. ಈಗ ‘ಸಲಾರ್’ ಸಿನಿಮಾ ಟೀಸರ್ ರಿಲೀಸ್ ಆಗಿದೆ. ವಿಶೇಷ ಎಂದರೆ ‘ಸಲಾರ್’ ಚಿತ್ರಕ್ಕೂ ‘ಕೆಜಿಎಫ್ 2’ ಚಿತ್ರಕ್ಕೂ ಟೀಸರ್​ನಲ್ಲಿ ಲಿಂಕ್ ನೀಡಲಾಗಿದೆ. ಇದನ್ನು ಗಮನಿಸಿದ ಅನೇಕರು ಥ್ರಿಲ್ ಆಗಿದ್ದಾರೆ. ಎರಡೂ ಚಿತ್ರಗಳ ಮಧ್ಯೆ ಯಾವ ರೀತಿಯಲ್ಲಿ ಕನೆಕ್ಷನ್ ಇರಲಿದೆ ಅನ್ನೋ ಪ್ರಶ್ನೆ ಅಭಿಮಾನಿಗಳನ್ನು ಕಾಡಿದೆ.

ಸಮಾನ್ಯವಾಗಿ ದೊಡ್ಡ ಬಜೆಟ್ ಚಿತ್ರದ ಟೀಸರ್​ಗಳನ್ನು ಸಂಜೆ ವೇಳೆಗೆ ರಿಲೀಸ್ ಮಾಡಲಾಗುತ್ತದೆ. ಇದರಿಂದ ಯೂಟ್ಯೂಬ್​ನಲ್ಲಿ ವೀಕ್ಷಣೆ ಹೆಚ್ಚಾಗುತ್ತದೆ. ಆದರೆ, ‘ಸಲಾರ್’ ಟೀಂನವರು ಮುಂಜಾನೆ 5:12ಕ್ಕೆ ಟೀಸರ್ ಅನಾವರಣ ಮಾಡಿದ್ದರು. ಇದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ‘ಕೆಜಿಎಫ್ 2’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ರಾಕಿ ಸಮುದ್ರಕ್ಕೆ ಬೀಳುತ್ತಾನೆ. ಆಗ ಸಮಯ ಮುಂಜಾನೆ 5 ಗಂಟೆ. ಈ ಕಾರಣದಿಂದಲೇ ‘ಸಲಾರ್’ ಟೀಸರ್ ಆ ಸಮಯಕ್ಕೆ ರಿಲೀಸ್ ಆಗುತ್ತಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದರು. ಆದರೆ, ಆ ರೀತಿಯ ಯಾವುದೇ ಕನೆಕ್ಷನ್ ಕಂಡಿಲ್ಲ. ಆದರೆ, ‘ಕೆಜಿಎಫ್ 2’ ಚಿತ್ರಕ್ಕೂ ‘ಸಲಾರ್​’ಗೂ ಲಿಂಕ್ ಇರುವ ವಿಚಾರ ಗೊತ್ತಾಗಿದೆ.

ಇದನ್ನೂ ಓದಿ: Salaar Teaser: ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿದ ‘ಸಲಾರ್’ ಟೀಸರ್; ಸಾಮ್ಯತೆಗಳೇನು?

‘ಕೆಜಿಎಫ್ 2’ ಸಿನಿಮಾದಲ್ಲಿ ಒಂದಷ್ಟು ಟ್ಯಾಂಕರ್​ಗಳು ಕಂಡಿದ್ದವು. ಆ ಪೈಕಿ ಒಂದು ಟ್ಯಾಂಕರ್ ಹೆಸರು ‘ಸಿ-516’. ‘ಸಲಾರ್’ ಸಿನಿಮಾದಲ್ಲೂ ಅದೇ ನಂಬರ್​ನ ಟ್ಯಾಂಕರ್ ಕಾಣಿಸಿದೆ. ಹೀಗಾಗಿ, ‘ಕೆಜಿಎಫ್ 2’ ಚಿತ್ರದ ಮುಂದುವರಿದ ಭಾಗದ ರೀತಿಯಲ್ಲಿ ‘ಸಲಾರ್’ ಸಿನಿಮಾ ಮೂಡಿಬರಲಿದೆ ಎಂದು ಅನೇಕರು ಭಾವಿಸಿದ್ದಾರೆ.

‘ಕೆಜಿಎಫ್ 2’ ಚಿತ್ರ ನಿರ್ದೇಶನ ಮಾಡಿದ್ದ ಪ್ರಶಾಂತ್ ನೀಲ್ ಅವರು ‘ಸಲಾರ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರ ನಿರ್ಮಿಸುತ್ತಿದೆ. ರವಿ ಬಸ್ರೂರು ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ