Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

Yuvarathnaa: ಈಗತಾನೇ ಚೇತರಿಸಿಕೊಳ್ಳುತ್ತಿದ್ದ ಕನ್ನಡ ಚಿತ್ರರಂಗಕ್ಕೆ ಮತ್ತೆ ಶಾಕ್​ ಎದುರಾಗಿದೆ. ಶೇ.50ರಷ್ಟು ಆಸನ ಭರ್ತಿ ಮಿತಿ ಹೇರಿರುವುದರಿಂದ ಅನೇಕ ಸಿನಿಮಾಗಳಿಗೆ ತೊಂದರೆ ಆಗಿದೆ. ಈ ಬಗ್ಗೆ ಸ್ಯಾಂಡಲ್​ವುಡ್​ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?
ಪುನೀತ್​ ರಾಜ್​ಕುಮಾರ್​ - ಸುದೀಪ್​
Follow us
ಮದನ್​ ಕುಮಾರ್​
|

Updated on: Apr 03, 2021 | 11:44 AM

ಕೊರೊನಾ ವೈರಸ್​ ಎರಡನೇ ಅಲೆ ಸೃಷ್ಟಿಸಿರುವ ಅವಾಂತರದಿಂದ ಮತ್ತೆ ಲಾಕ್​ಡೌನ್​ ಭಯ ಕಾಡುತ್ತಿದೆ. ವೈರಸ್​ ಹರಡುವಿಕೆಗೆ ಆದಷ್ಟು ತಡೆಯೊಡ್ಡಲು ಸರ್ಕಾರ ಕಸರತ್ತು ನಡೆಸುತ್ತಿದೆ. ಆ ಪರಿಣಾಮವಾಗಿ ಅನೇಕ ಚಟುವಟಿಕೆಗಳಿಗೆ ಬ್ರೇಕ್​ ಬೀಳುತ್ತಿದೆ. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಲಾಗಿದೆ. ಕೇವಲ 50% ಆಸನಗಳನ್ನು ಮಾತ್ರ ಭರ್ತಿ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ. ಇದು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದೆ.

ಸರ್ಕಾರ ಹೊರಡಿಸಿರುವ ಈ ಹೊಸ ನಿಯಮಾವಳಿಗಳ ಕುರಿತು ಕನ್ನಡ ಚಿತ್ರರಂಗದ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಟ್ವೀಟ್​ ಮಾಡುವ ಮೂಲಕ, ಚಿತ್ರಮಂದಿರಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ಹೇಳಿದ್ದರು. ಆದರೆ ಈಗ ಏಕಾಏಕಿ ಹೊಸ ಆದೇಶ ಜಾರಿ ಮಾಡಿರುವುದರಿಂದ ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳಿಗೆ ತೊಂದರೆ ಆಗಿದೆ. ಈ ಬಗ್ಗೆ ಹಲವರು ಸೋಶಿಯಲ್​ ಮೀಡಿಯಾ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

ಇದೊಂದು ಶಾಕಿಂಗ್​ ಬೆಳವಣಿಗೆ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ. ‘ಮತ್ತೆ ಶೇ.50ರಷ್ಟು ಆಸನಗಳನ್ನಷ್ಟೇ ಮಾತ್ರ ಭರ್ತಿ ಮಾಡಬೇಕು ಎಂದರೆ ಈಗ ತಾನೇ ಬಿಡುಗಡೆ ಆದ ಚಿತ್ರಕ್ಕೆ ಆತಂಕ ಆಗುತ್ತದೆ. ಸರ್ಕಾರದ ನಿಯಮವನ್ನು ಗೌರವಿಸುವುದು ಕೂಡ ನಮ್ಮ ಕರ್ತವ್ಯ ಆಗುತ್ತದೆ. ಇಂಥ ಸಂದರ್ಭವನ್ನು ಎದುರಿಸಿ ಕೂಡ ಗೆಲುವು ಸಾಧಿಸಲಿ ಎಂದು ಯುವರತ್ನ ತಂಡಕ್ಕೆ ಹಾರೈಸುತ್ತೇನೆ‘ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಸರ್ಕಾರದ ನಿರ್ಧಾರ ಸರಿ ಇರಬಹುದು. ಆದರೆ ಇಂಥ ಆದೇಶ ಹೊರಡಿಸುವುದಕ್ಕೂ ಮುನ್ನ ಮಾಹಿತಿ ನೀಡಬೇಕಿತ್ತು ಎಂದು ಪುನೀತ್​ ರಾಜ್​ಕುಮಾರ್​ ಹೇಳಿದ್ದಾರೆ. ಇದೇ ಮಾತನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ನಟ ಡಾಲಿ ಧನಂಜಯ ಅವರು, ‘ಮುಂಚೇನೆ ಹೇಳಿದ್ರೆ ಸಿನಿಮಾ ಬಿಡುಗಡೆನ ಮುಂದೂಡ್ತಿದ್ವಲ್ಲ ಸರ್. ಇದು ಅನ್ಯಾಯ ಅಲ್ವ?’ ಎಂದು ಸರ್ಕಾರದ ಆದೇಶವನ್ನು ಪ್ರಶ್ನಿಸಿದ್ದಾರೆ.

ಲಾಕ್​ಡೌನ್​ ಆದೇಶ ಜಾರಿ ಆಗುವುದಕ್ಕೂ ಮುನ್ನವೇ ಶನಿವಾರ ಮತ್ತು ಭಾನುವಾರದ ಟಿಕೆಟ್​ಗಳನ್ನು ಪ್ರೇಕ್ಷಕರು ಆನ್​ಲೈನ್​ ಮೂಲಕ ಮುಂಗಡ ಬುಕ್ಕಿಂಗ್​ ಮಾಡಿದ್ದರು. ಅಂಥ ಶೋಗಳಲ್ಲಿ ಪ್ರೇಕ್ಷಕರನ್ನು ಹೇಗೆ ಕೂರಿಸಬೇಕು ಎಂಬ ಗೊಂದಲ ಮನೆ ಮಾಡಿದೆ. ದಿಢೀರ್​ ಎಂದು ಸರ್ಕಾರ ಇಂಥ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಪುನೀತ್​ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ಹಾಗಾಗಿ ಸಿಎಂ ನಿವಾಸದ ಬಳಿ ಅಪ್ಪು ಫ್ಯಾನ್ಸ್​ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ಯುವರತ್ನಕ್ಕೆ ಮೊದಲ ದಿನವೇ ಶುರುವಾಯ್ತು ಪೈರಸಿ ಕಾಟ; ಎಲ್ಲೇ ಪೈರಸಿ ಲಿಂಕ್ ಸಿಕ್ಕರೂ ರಿಪೋರ್ಟ್ ಮಾಡಿ ಎಂದ ಚಿತ್ರತಂಡ

ಸೌಂಡ್ ಸರಿಯಾಗಿ ಕೇಳಿಸಲ್ಲ ಎಂದು ಗಲಾಟೆ ಮಾಡಿದ ‘ಯುವರತ್ನ’ ಪ್ರೇಕ್ಷಕರು; ಹಣ ಮರಳಿಸಿದ ಊರ್ವಶಿ ಥಿಯೇಟರ್ ಮಾಲೀಕರು

(Lockdown in Karnataka: Kannada film industry opposes 50 percent occupancy guidelines)

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ