AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಕ್‌ಡೌನ್’ ಕಥೆ ಇರುವ ಇನ್ನೊಂದು ಸಿನಿಮಾ ರೆಡಿ; ಇದರಲ್ಲಿದೆ ಕಾಮಿಡಿ, ವಿಷಾದ

ಹೊಸ ಕಲಾವಿದರು ನಟಿಸಿರುವ ‘ಲಾಕ್‌ಡೌನ್’ ಚಿತ್ರಕ್ಕೆ ಜಾವೇದ್ ತಿಪ್ಪನಹಟ್ಟಿ ನಿರ್ದೇಶನ ಮಾಡಿದ್ದು, ಮಂಜು ಮುದ್ಗಲ್ ಬಂಡವಾಳ ಹೂಡಿದ್ದಾರೆ. ಹೆಸರಿಗೆ ತಕ್ಕಂತೆ ಲಾಕ್​ಡೌನ್ ಸಮಯದ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ. ಕೊಪ್ಪಳ, ಉಪ್ಪಿನ ಬೆಟಗೇರಿ ಸುತ್ತಮುತ್ತ ಹಳ್ಳಿಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ.

‘ಲಾಕ್‌ಡೌನ್’ ಕಥೆ ಇರುವ ಇನ್ನೊಂದು ಸಿನಿಮಾ ರೆಡಿ; ಇದರಲ್ಲಿದೆ ಕಾಮಿಡಿ, ವಿಷಾದ
Lockdown Movie Poster
ಮದನ್​ ಕುಮಾರ್​
|

Updated on: May 06, 2026 | 11:12 AM

Share

ಕೊರೊನಾ ವೈರಸ್ ಕಾರಣಕ್ಕೆ ಹೇರಿದ್ದ ಲಾಕ್​ಡೌನ್​ನಿಂದಾಗಿ ಅನೇಕರ ಜೀವನದಲ್ಲಿ ಬದಲಾವಣೆ ಆಯಿತು. ಆ ಘಟನೆಗಳನ್ನು ಇಟ್ಟುಕೊಂಡು ಹಲವು ಸಿನಿಮಾಗಳು ಬಂದಿವೆ. ಈಗ ಕನ್ನಡದಲ್ಲಿ ಕೂಡ ಹೊಸ ಸಿನಿಮಾ ಸಿದ್ಧವಾಗಿದೆ. ಅದಕ್ಕೆ ‘ಲಾಕ್​ಡೌನ್​’ (Lockdown) ಎಂದೇ ಹೆಸರು ಇಡಲಾಗಿದೆ. ಶೀಘ್ರದಲ್ಲೇ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡದವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಟ್ರೇಲರ್ (Trailer) ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಉತ್ತರ ಕರ್ನಾಟಕದ ಭಾಷೆಯ ಸೊಗಡು ಇರಲಿದೆ.

‘ಲಾಕ್​ ಡೌನ್’ ಸಿನಿಮಾದಲ್ಲಿ ಬಹುತೇಕ ಹೊಸ ಕಲಾವಿದರೇ ನಟಿಸಿದ್ದಾರೆ. ‘ಅಭಿನವ ಪ್ರೊಡಕ್ಷನ್’ ಮೂಲಕ ಮಂಜು ಮುದ್ಗಲ್ ಅವರು ನಿರ್ಮಾಣ ಮಾಡುವ ಜತೆಗೆ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ನಿರ್ದೇಶಕರ ಬಳಿ ಕೆಲಸ ಮಾಡಿರುವ ಜಾವೇದ್ ತಿಪ್ಪನಹಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅಲ್ಲದೇ, ಚಿತ್ರಕಥೆ, ಸಾಹಿತ್ಯ, ಸಂಗೀತದ ಜವಾಬ್ದಾರಿಯನ್ನೂ ಅವರೇ ನಿಭಾಯಿಸಿದ್ದಾರೆ.

ಈ ಸಿನಿಮಾಗೆ ಪ್ರಚಾರದ ಮೊದಲ ಹಂತವಾಗಿ ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ‘ಸಿರಿ ಮ್ಯೂಸಿಕ್’ ಮೂಲಕ ಟ್ರೇಲರ್ ಅನಾವರಣ ಆಗಿದೆ. ಬೆಂಗಳೂರಿನ ಶ್ರೀರೇಣುಕಾಂಬ ಸ್ಟುಡಿಯೋದಲ್ಲಿ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಈ ವೇಳೆ ಚಿತ್ರತಂಡದವರು ಭಾಗಿಯಾಗಿ ಸಿನಿಮಾ ಬಗ್ಗೆ ಒಂದಷ್ಟ ಮಾಹಿತಿ ಹಂಚಿಕೊಂಡರು.

‘ಲಾಕ್​ಡೌನ್’ ಸಿನಿಮಾದ ಟ್ರೇಲರ್:

‘ಲಾಕ್​ಡೌನ್’ ಸಿನಿಮಾದಲ್ಲಿ ಬೆಂಗಳೂರಿನ ವಿಜಯ್ ವಿಘ್ನೇಶ್ ಅವರು ಹೀರೋ ಆಗಿ ನಟಿಸಿದ್ದಾರೆ. ದಾವಣಗೆರೆ ಮೂಲದ ವಾಣಿಶ್ರೀ ಶ್ರೀನಿವಾಸ್ ಅವರು ನಾಯಕಿ ಆಗಿದ್ದಾರೆ. ಶ್ರಾವಣಿ, ಅಶ್ವಿನಿ ಮುದ್ಗಲ್, ಮಮತಾ, ಗೋವಿಂದರಾಜು, ವೈಲಾ ಮುಂತಾದವರು ನಟಿಸಿದ್ದಾರೆ. ಶರಣಪ್ಪ ಸುಗ್ಗನಹಳ್ಳಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಿವರಾಜ್ ಮೆಹೂ ಅವರ ಸಂಕಲನ ಈ ಸಿನಿಮಾಗಿದೆ.

ಇದನ್ನೂ ಓದಿ: Photo Movie Review: ಲಾಕ್​ಡೌನ್​ನಲ್ಲಿ ಬೆಂದ ಬಡವನ ನೋವಿನ ಸತ್ಯದರ್ಶನ

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರು ಮಾತನಾಡಿದರು. ‘ಲಾಕ್‌ಡೌನ್ ಸಂದರ್ಭದಲ್ಲಿ ಹಲವರಿಗೆ ನೋವು ಉಂಟಾಗಿತ್ತು. ಆದರೆ ಕೆಲವರಿಗೆ ನಲಿವು ತಂದುಕೊಟ್ಟಿದೆ. ಅದಕ್ಕೆ ಟ್ಯಾಗ್ ಲೈನ್‌ನಲ್ಲಿ ವಿಷಾದ ಮತ್ತು ರಂಜನೆ ಎಂದು ಬರೆಯಲಾಗಿದೆ. ಬಳ್ಳಾರಿಯಲ್ಲಿ ಒಂದಷ್ಟು ಕಹಿ ಘಟನೆಗಳು ನಡೆದಿದ್ದನ್ನು ಚಿತ್ರಕತೆಗೆ ಅಳವಡಿಸಿಕೊಳ್ಳಲಾಗಿದೆ. ಈ ಚಿತ್ರದಲ್ಲಿನ ಸನ್ನಿವೇಶಗಳು ವಾಸ್ತವ. ಆದರೆ ಕಥೆ ಕಾಲ್ಪನಿಕವಾಗಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ