AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lohitashwa: ಐಸಿಯುನಲ್ಲಿರುವ ಹಿರಿಯ ನಟ ಲೋಹಿತಾಶ್ವ ಪರಿಸ್ಥಿತಿ ಈಗ ಹೇಗಿದೆ? ಹೆಲ್ತ್​ ಅಪ್​ಡೇಟ್​ ನೀಡಿದ ವೈದ್ಯರು

Lohitashwa Health Bulletin: ಲೋಹಿತಾಶ್ವ ಅವರು ವೆಂಟಿಲೇಟರ್​ನಲ್ಲಿ ಇದ್ದಾರೆ. ಅಬ್ಸರ್ವೇಷನ್​ ಮುಂದುವರಿದಿದೆ ಎಂದು ಹೆಲ್ತ್​ ಬುಲೆಟಿನ್​ನಲ್ಲಿ ವೈದ್ಯರು ತಿಳಿಸಿದ್ದಾರೆ.

Lohitashwa: ಐಸಿಯುನಲ್ಲಿರುವ ಹಿರಿಯ ನಟ ಲೋಹಿತಾಶ್ವ ಪರಿಸ್ಥಿತಿ ಈಗ ಹೇಗಿದೆ? ಹೆಲ್ತ್​ ಅಪ್​ಡೇಟ್​ ನೀಡಿದ ವೈದ್ಯರು
ಲೋಹಿತಾಶ್ವ
Follow us
TV9 Web
| Updated By: ಮದನ್​ ಕುಮಾರ್​

Updated on:Oct 12, 2022 | 11:49 AM

ಚಂದನವನದ ಖ್ಯಾತ ನಟ ಲೋಹಿತಾಶ್ವ (Lohitashwa) ಅವರ ಆರೋಗ್ಯದ ಬಗ್ಗೆ ಆತಂಕ ಮೂಡಿದೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿದೆ. ಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಈಗ ಆಸ್ಪತ್ರೆ ಕಡೆಯಿಂದ ಲೋಹಿತಾಶ್ವ ಅವರ ಹೆಲ್ತ್​ ಅಪ್​ಡೇಟ್ (Lohitashwa Health Update)​ ನೀಡಲಾಗಿದೆ. ಸದ್ಯ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪುತ್ರ ಶರತ್​ ಲೋಹಿತಾಶ್ವ (Sharath Lohitashwa) ಅವರು ತಂದೆಯ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಹಿರಿಯ ನಟ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು, ಆಪ್ತರು ಮತ್ತು ಸೆಲಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ.

ಲೋಹಿತಾಶ್ವ ಅವರಿಗೆ ಈಗ 80 ವರ್ಷ ವಯಸ್ಸು. ವಯೋಸಹಜವಾಗಿ ಅನೇಕ ಸಮಸ್ಯೆಗಳು ಎದುರಾಗಿವೆ. ವೈದ್ಯರು ನೀಡಿರುವ ಹೆಲ್ತ್​ ಅಪ್​ಡೇಟ್​ ಪ್ರಕಾರ ಸುಸ್ತು, ವಾಂತಿ-ಭೇದಿ, ಚಳಿ, ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆಗಳೊಂದಿಗೆ ಆಸ್ಪತ್ರೆಗೆ ಬಂದಿದ್ದ ಲೋಹಿತಾಶ್ವ ಅವರನ್ನು ಅಕ್ಟೋಬರ್​ 4ರಂದು ದಾಖಲಿಸಿಕೊಳ್ಳಲಾಯಿತು. ಬಳಿಕ ಹೃದಯ ಸಂಬಂಧಿ ಕಾಯಿಲೆ ಇರುವುದು ಕೂಡ ಗೊತ್ತಾಯಿತು. ಅಕ್ಟೋಬರ್​ 7ರಂದು ಮುಂಜಾನೆ ವಾರ್ಡ್​ನಲ್ಲಿ ಅವರಿಗೆ ಹೃದಯಾಘಾತ ಆಯಿತು. ಕೂಡಲೆ ಸಿಪಿಆರ್​ ಮಾಡಿ, ಐಸಿಯುಗೆ ಶಿಫ್ಟ್​ ಮಾಡಲಾಯಿತು. ಐಸಿಯುನಲ್ಲಿ ಇರುವಾಗ ಫಿಟ್ಸ್​ ಕೂಡ ಬಂತು. ಎಂಆರ್​ಐ ಮಾಡಿದಾಗ ಮಿದುಳಿಗೆ ಸಂಬಂಧಿಸಿದ ಸಮಸ್ಯೆ ಇರುವುದು ತಿಳಿಯಿತು. ಸದ್ಯ ಅವರು ವೆಂಟಿಲೇಟರ್​ನಲ್ಲಿ ಇದ್ದಾರೆ. ಅಬ್ಸರ್ವೇಷನ್​ ಮುಂದುವರಿದಿದೆ ಎಂದು ಹೆಲ್ತ್​ ಬುಲೆಟಿನ್​ನಲ್ಲಿ ವೈದ್ಯರು ತಿಳಿಸಿದ್ದಾರೆ.

ಚಿತ್ರರಂಗದಲ್ಲಿ ಲೋಹಿತಾಶ್ವ ಅವರಿಗೆ ಇರುವ ಅನುಭವ ಅಪಾರ. ವಿಷ್ಣುವರ್ಧನ್​, ರಾಜ್​ಕುಮಾರ್​, ಅಂಬರೀಷ್​, ಶಂಕರ್​ ನಾಗ್​ ಮುಂತಾದ ದಿಗ್ಗಜ ಕಲಾವಿದರ ಜೊತೆ ಲೋಹಿತಾಶ್ವ ನಟಿಸಿದ್ದಾರೆ. ಪೋಷಕ ಪಾತ್ರಗಳ ಮೂಲಕ ಅವರ ಮನೆಮಾತಾಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆದರು. ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ ಅವರು ಕೆಲವು ಸಾಹಿತ್ಯ ಕೃತಿಗಳನ್ನು ಬರೆದಿದ್ದಾರೆ.

ಇದನ್ನೂ ಓದಿ
Image
Lohitashwa: ‘ನನ್ನ ಕಣ್ಣೆದುರಲ್ಲೇ ತಂದೆಗೆ ಹೃದಯಾಘಾತ ಆಯ್ತು’: ಲೋಹಿತಾಶ್ವ ಆರೋಗ್ಯದ ಬಗ್ಗೆ ಪುತ್ರ ಶರತ್​ ಮಾಹಿತಿ
Image
Kannada Actor Lohitashwa: ಖ್ಯಾತ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ
Image
ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ

ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಕೆಲಸ ಮಾಡಿದ್ದಾರೆ. ಅವರ ಅನಾರೋಗ್ಯದ ಸುದ್ದಿ ತಿಳಿದು ಅಭಿಮಾನಿಗಳಿಗೆ ಆತಂಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:47 am, Wed, 12 October 22

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ