AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಬಿ. ಶೆಟ್ಟಿ ಎದುರು ಕನ್ನಡಿಗರದ್ದು ಅದೊಂದೇ ಕೋರಿಕೆ; ಈಡೇರೋದು ಯಾವಾಗ?

ರಾಜ್ ಬಿ ಶೆಟ್ಟಿ ಅವರು ‘ಸು ಫ್ರಮ್ ಸೋ’ ಚಿತ್ರದ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಮಧ್ಯೆ ಅವರ ಒಡೆತನದ ‘ಲೈಟರ್ ಬುದ್ಧ’ ಮಲಯಾಳಂನ ‘ಲೋಕಃ’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುತ್ತಿದೆ. ಕನ್ನಡ ವರ್ಷನ್ ಇನ್ನೂ ಬಿಡುಗಡೆಯಾಗಿಲ್ಲ. ಇದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ‘ಲೋಕಃ’ ಚಿತ್ರದ ತಮಿಳು ಮತ್ತು ಹಿಂದಿ ಆವೃತ್ತಿಗಳು ಲಭ್ಯವಿದ್ದರೂ ಕನ್ನಡ ಆವೃತ್ತಿ ಲಭ್ಯವಿಲ್ಲದಿರುವುದು ವಿಪರ್ಯಾಸ.

ರಾಜ್ ಬಿ. ಶೆಟ್ಟಿ ಎದುರು ಕನ್ನಡಿಗರದ್ದು ಅದೊಂದೇ ಕೋರಿಕೆ;  ಈಡೇರೋದು ಯಾವಾಗ?
ರಾಜ್ ಬಿ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Sep 12, 2025 | 8:44 AM

Share

ರಾಜ್ ಬಿ. ಶೆಟ್ಟಿ (Raj b Shetty) ಅವರು ‘ಸು ಫ್ರಮ್ ಸೋ’ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಗೆಲುವು ಅವರಿಗೆ ದೊಡ್ಡ ಹುರುಪನ್ನು ನೀಡಿದೆ. ಸದ್ಯ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಿರುವಾಗಲೇ ಅವರು ಕನ್ನಡಿಗರ ಕೋರಿಕೆಯನ್ನು ಈಡೇರಿಸಿಲ್ಲ. ಈ ವಿಚಾರ ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಪ್ರಶ್ನೆ ಮಾಡಲಾಗುತ್ತಿದೆ.

‘ಸು ಫ್ರಮ್ ಸೋ’ ಸಿನಿಮಾ ಕನ್ನಡದಲ್ಲಿ ಜನಪ್ರಿಯತೆ ಪಡೆದ ಬಳಿಕ ಮಲಯಾಳಂನಲ್ಲಿ ರಿಲೀಸ್ ಆಯಿತು. ಆ ಭಾಷೆಗೆ ಡಬ್ ಮಾಡಿಯೇ ಚಿತ್ರವನ್ನು ತೆರೆಮೇಲೆ ತರಲಾಯಿತು. ಮಲಯಾಳಂ ಮಂದಿ ಈ ಚಿತ್ರವನ್ನು ಕನ್ನಡದಲ್ಲಿ ಅಲ್ಲ, ಬದಲಿಗೆ ಮಲಯಾಳಂ ಭಾಷೆಯಲ್ಲೇ ನೋಡಿದರು. ಆದರೆ, ಮಲಯಾಳಂನ ‘ಲೋಕಃ’ ಚಿತ್ರವನ್ನು ರಾಜ್ ಕರ್ನಾಟಕದಲ್ಲಿ ಹಂಚಿಕೆ ಮಾಡುತ್ತಿದ್ದು, ಈವರೆಗೆ ಕನ್ನಡದಲ್ಲಿ ರಿಲೀಸ್ ಆಗಿಲ್ಲ.

‘ಸು ಫ್ರಮ್ ಸೋ’ ಚಿತ್ರವನ್ನು ಮಲಯಾಳಂನಲ್ಲಿ ಹಂಚಿಕೆ ಮಾಡಿದ್ದು ದುಲ್ಖರ್ ಸಲ್ಮಾನ್ ಅವರು. ದುಲ್ಖರ್ ನಿರ್ಮಾಣ ಮಾಡಿದ ‘ಲೋಕಃ’ ಹೆಸರಿನ ಮಲಯಾಳಂ ಚಿತ್ರವನ್ನು ರಾಜ್ ಅವರ ಒಡೆತನದ ‘ಲೈಟರ್ ಬುದ್ಧ’ ಕರ್ನಾಟಕದಲ್ಲಿ ಹಂಚಿಕೆ ಮಾಡಿದೆ. ಸಿನಿಮಾ ರಿಲೀಸ್ ಆಗಿ ಎರಡು ವಾರಗಳು ಕಳೆದರೂ ಈವರೆಗೆ ಸಿನಿಮಾದ ಕನ್ನಡ ವರ್ಷನ್ ರಿಲೀಸ್ ಆಗಿಲ್ಲ. ಇದು ಅನೇಕರ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
ಅಕ್ಷಯ್ ಹೇಗೆ ಅಷ್ಟು ಬೇಗ ಸಿನಿಮಾ ಮಾಡ್ತಾರೆ? ಅಜಯ್ ದೇವಗನ್ ಫನ್ನಿ ವಿವರಣೆ
Image
ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
Image
ಮದುವೆ ಬಳಿಕ ಕೆಲಸಕ್ಕೆ ಮರಳಿದ ಅನುಶ್ರೀ ಈ ವಿಚಾರದಲ್ಲಿ ತಪ್ಪು ಮಾಡಲಿಲ್ಲ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್

ಯಾವುದೇ ಸಿನಿಮಾ ಸಂಪೂರ್ಣವಾಗಿ ಅರ್ಥವಾಗಬೇಕು ಎಂದರೆ ಅದಕ್ಕೆ ಭಾಷೆ ತುಂಬಾನೇ ಮುಖ್ಯ. ಸಿನಿಮಾನ ಮಲಯಾಳಂನಲ್ಲೇ ನೋಡಿದರೆ ಚಿತ್ರದ ಸಂಪೂರ್ಣ ಸ್ವಾದ ಸಿಗೋದಿಲ್ಲ. ಹೀಗಾಗಿ, ಈ ಚಿತ್ರದ ಕನ್ನಡ ವರ್ಷನ್ ರಿಲೀಸ್ ಯಾವಾಗ ಎಂದು ಫ್ಯಾನ್ಸ್ ಪ್ರಶ್ನೆ ಮಾಡುತ್ತಿದ್ದಾರೆ. ವಿಚಿತ್ರ ಎಂದರೆ, ಈ ಚಿತ್ರದ ತಮಿಳು ಹಾಗೂ ಹಿಂದಿ ವರ್ಷನ್​ಗಳು ಬೆಂಗಳೂರಿನಲ್ಲಿ ಲಭ್ಯವಿದೆ. ಆದರೆ, ಕನ್ನಡದಲ್ಲಿ ಮಾತ್ರ ಸಿನಿಮಾ ನೋಡಲು ಅವಕಾಶ ಇಲ್ಲ. ಈ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ ಬಿ. ಶೆಟ್ಟಿ ಮುಟ್ಟಿದ್ದೆಲ್ಲ ಚಿನ್ನ; ಅವರು ಕರ್ನಾಟಕದಲ್ಲಿ ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಇಷ್ಟೊಂದಾ?

‘ಲೋಕಃ: ಚಾಪ್ಟರ್ 1-ಚಂದ್ರ’ ಸಿನಿಮಾ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಫ್ಯಾನ್ಸ್ ಈ ಚಿತ್ರವನ್ನು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲೂ ಸಿನಿಮಾಗೆ ಸಾಕಷ್ಟು ಶೋಗಳು ಸಿಕ್ಕಿವೆ. ಈ ಚಿತ್ರದಲ್ಲಿ ಬಳಕೆ ಆದ ಭಾಷೆ ಬೇಸರ ಮೂಡಿಸುವ ರೀತಿಯಲ್ಲಿ ಇತ್ತು. ಆ ಬಳಿಕ ದುಲ್ಖರ್ ಅವರು ಈ ವಿಚಾರದಲ್ಲಿ ಕ್ಷಮೆ ಕೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ