AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾರ್ಲಿಂಗ್​ ಕೃಷ್ಣ-ಮಿಲನಾ ವಿವಾಹ ವಾರ್ಷಿಕೋತ್ಸವ; ಈ ಜೋಡಿಗೆ ವ್ಯಾಲೆಂಟೈನ್ಸ್​ ಡೇ ತುಂಬ ಸ್ಪೆಷಲ್​

‘ನಿಮ್ಮ ಜೊತೆ ಜೀವನ ಹಂಚಿಕೊಂಡಿರುವುದು ನನ್ನ ಬದುಕಿನ ಅತ್ಯುತ್ತಮ ನಿರ್ಧಾರ. ನೀವೇ ನನ್ನ ಪ್ರಪಂಚ. ಹ್ಯಾಪಿ ಆ್ಯನಿವರ್ಸರಿ ಡಾರ್ಲಿಂಗ್​ ಕೃಷ್ಣ’ ಎಂದು ಮಿಲನಾ ನಾಗರಾಜ್ ವಿಶ್​ ಮಾಡಿದ್ದಾರೆ.

ಡಾರ್ಲಿಂಗ್​ ಕೃಷ್ಣ-ಮಿಲನಾ ವಿವಾಹ ವಾರ್ಷಿಕೋತ್ಸವ; ಈ ಜೋಡಿಗೆ ವ್ಯಾಲೆಂಟೈನ್ಸ್​ ಡೇ ತುಂಬ ಸ್ಪೆಷಲ್​
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್
TV9 Web
| Edited By: |

Updated on: Feb 14, 2022 | 8:51 AM

Share

ಕನ್ನಡ ಚಿತ್ರರಂಗದ ದಿ ಬೆಸ್ಟ್​ ಜೋಡಿ ಎನಿಸಿಕೊಂಡಿರುವ ಮಿಲನಾ ನಾಗರಾಜ್​ ಮತ್ತು ಡಾರ್ಲಿಂಗ್​ ಕೃಷ್ಣ (Darling Krishna) ಅವರು ಸಖತ್​ ಖುಷಿಯಲ್ಲಿದ್ದಾರೆ. ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 1 ವರ್ಷ ಕಳೆದಿದೆ. ಇಂದು (ಫೆ.14) ಇವರಿಬ್ಬರು ಮೊದಲ ವರ್ಷದ ವಿವಾಹ ವಾರ್ಷಿಕೋತ್ಸವ (Wedding Anniversary) ಆಚರಿಸಿಕೊಳ್ಳುತ್ತಿದ್ದಾರೆ. 2021ರ ಫೆ.14ರಂದು ಮಿಲನಾ ನಾಗರಾಜ್ (Milana Nagaraj)​ ಮತ್ತು ಡಾರ್ಲಿಂಗ್​ ಕೃಷ್ಣ ಅವರ ಮದುವೆ ನೆರವೇರಿತ್ತು. ನೋಡನೋಡುತ್ತಿದ್ದಂತೆಯೇ ಒಂದು ವರ್ಷ ಕಳೆದುಹೋಗಿದೆ. ಪ್ರೀತಿಯ ಜೊತೆಗೆ ವೃತ್ತಿಜೀವದಲ್ಲೂ ಜೊತೆ ಜೊತೆಯಾಗಿ ಸಾಗುತ್ತಿರುವ ಈ ಜೋಡಿ ಅನೇಕರಿಗೆ ಮಾದರಿ ಆಗಿದ್ದಾರೆ. ವೆಡ್ಡಿಂಗ್​ ಆ್ಯನಿವರ್ಸರಿ ಪ್ರಯುಕ್ತ ಎಲ್ಲರೂ ಅವರಿಗೆ ವಿಶ್​ ಮಾಡುತ್ತಿದ್ದಾರೆ. ಇಂದು ಮಿಲನಾ ನಾಗರಾಜ್​ ಮತ್ತು ಡಾರ್ಲಿಂಗ್ ಕೃಷ್ಣ ಅವರಿಗೆ ಡಬಲ್​ ಸಂಭ್ರಮ. ಅವರಿಬ್ಬರು ನಟಿಸಿರುವ ‘ಲವ್​ ಮಾಕ್ಟೇಲ್​ 2’ ಚಿತ್ರ ಯಶಸ್ಸು ಕಂಡಿದೆ. ಈ ಸಿನಿಮಾ ಎಲ್ಲ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಈ ಖುಷಿಯ ಜೊತೆಗೆ ಅವರು ವೆಡ್ಡಿಂಗ್​ ಆ್ಯನಿವರ್ಸರಿ ಮತ್ತು ವ್ಯಾಲೆಂಟೈನ್ಸ್​ ಡೇ ಆಚರಿಸಿಕೊಳ್ಳುತ್ತಿದ್ದಾರೆ.

ಮಿಲನಾ ನಾಗರಾಜ್​ ಮತ್ತು ಡಾರ್ಲಿಂಗ್​ ಕೃಷ್ಣ ಅವರು ಹಲವು ವರ್ಷಗಳ ಕಾಲ ಪ್ರೀತಿಸಿದರೂ ತಮ್ಮ ಪ್ರೀತಿಯ ಬಗ್ಗೆ ಬಹಿರಂಗವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. 2020ರಲ್ಲಿ ‘ಲವ್​ ಮಾಕ್ಟೇಲ್​’ ಸಿನಿಮಾ ಯಶಸ್ವಿ ಆದ ನಂತರವೇ ಅವರು ಈ ವಿಷಯ ಬಾಯಿ ಬಿಟ್ಟಿದ್ದರು. ಈಗ ಇಬ್ಬರು ಸುಖವಾಗಿ ಸಂಸಾರ ಮಾಡುತ್ತಿದ್ದಾರೆ. ಯುವಪ್ರೇಮಿಗಳಿಗೆ ಮಾದರಿ ಆಗಿದ್ದಾರೆ.

ವಿವಾಹ ವಾರ್ಷಿಕೋತ್ಸವದ ದಿನದಂದು ಪತಿಗೆ ಮಿಲನಾ ನಾಗರಾಜ್​ ವಿಶ್​ ಮಾಡಿದ್ದಾರೆ. ‘ಲವ್​ ಮಾಕ್ಟೇಲ್​ 2’ ಸಿನಿಮಾ ಶೂಟಿಂಗ್ ಸಂದರ್ಭದ ಒಂದು ಫೋಟೋ ಹಂಚಿಕೊಂಡಿರುವ ಅವರು ಕೃಷ್ಣ ಬಗ್ಗೆ ಎರಡು ಸಾಲು ಬರೆದುಕೊಂಡಿದ್ದಾರೆ. ‘ನಿಮ್ಮ ಜೊತೆ ಜೀವನ ಹಂಚಿಕೊಂಡಿರುವುದು ನನ್ನ ಬದುಕಿನ ಅತ್ಯುತ್ತಮ ನಿರ್ಧಾರ. ನೀವೇ ನನ್ನ ಪ್ರಪಂಚ. ಹ್ಯಾಪಿ ಆ್ಯನಿವರ್ಸರಿ ಡಾರ್ಲಿಂಗ್​ ಕೃಷ್ಣ’ ಎಂದು ಮಿಲನಾ ನಾಗರಾಜ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ನಟನಾಗಿ, ನಿರ್ದೇಶಕನಾಗಿ ಡಾರ್ಲಿಂಗ್​ ಕೃಷ್ಣ ಅವರು 2ನೇ ಬಾರಿಗೆ ಗೆಲುವು ಕಂಡಿದ್ದಾರೆ. ನಟಿ, ನಿರ್ಮಾಪಕಿಯಾಗಿ ಮಿಲನಾ ನಾಗರಾಜ್​ ಅವರು ಗೆದ್ದಿದ್ದಾರೆ. ಇಬ್ಬರೂ ಜೊತೆಯಾಗಿ ಮಾಡಿರುವ ‘ಲವ್​ ಮಾಕ್ಟೇಲ್​ 2’ ಚಿತ್ರಕ್ಕೆ ಎಲ್ಲ ಕಡೆಗಳಲ್ಲೂ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ. ಇದು ಈ ಜೋಡಿಯ ಸಂತಸವನ್ನು ಹೆಚ್ಚಿಸಿದೆ.

‘ಲವ್ ಮಾಕ್ಟೇಲ್​ 2’ ಸಿನಿಮಾ ಫೆ.11ರಂದು ತೆರೆಕಂಡಿತು. ಒಂದು ದಿನ ಮುನ್ನ, ಅಂದರೆ ಫೆ.10ರ ರಾತ್ರಿಯೇ ಅನೇಕ ಕಡೆಗಳಲ್ಲಿ ಪೇಯ್ಡ್​ ಪ್ರೀಮಿಯರ್​ ಆಯೋಜಿಸಲಾಗಿತ್ತು. ಆ ಎಲ್ಲ ಶೋಗಳ ಟಿಕೆಟ್​ಗಳು ಹೌಸ್​ಫುಲ್​ ಆಗುವ ಮೂಲಕ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿತ್ತು. ಶುಕ್ರವಾರ (ಫೆ.11) ಬೆಳಗ್ಗೆ ಕೂಡ ಈ ಚಿತ್ರ ಭರ್ಜರಿ ಓಪನಿಂಗ್​ ಪಡೆದುಕೊಂಡಿತು. ವೀಕೆಂಡ್​ನಲ್ಲೂ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರದತ್ತೆ ಹೆಜ್ಜೆ ಹಾಕಿದ್ದಾರೆ. ಪ್ರೀತಿಯ ಬಗ್ಗೆ ಆಳವಾದ ಮೆಸೇಜ್​ ನೀಡುವ ಈ ಸಿನಿಮಾ ಪ್ರೇಮಿಗಳ ದಿನವೂ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ:

‘ಲವ್​ ಮಾಕ್ಟೇಲ್​ 3’ ಕೂಡ ಬರುತ್ತಾ? ಗೆದ್ದ ಖುಷಿಯಲ್ಲಿ ಡಾರ್ಲಿಂಗ್​ ಕೃಷ್ಣ ನೀಡಿದ ಉತ್ತರ ಇಲ್ಲಿದೆ..

Love Mocktail 2 Review: ಮತ್ತಷ್ಟು ಲವ್​, ಮತ್ತಷ್ಟು ರಂಜನೆ, ಮತ್ತೆ ಮಿಲನಾ; ಅಂತ್ಯವಾಗಿದ್ದ ಕಥೆಗೆ ಸಿಕ್ಕಿದೆ ಹೊಸ ಆದಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು