AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಕಲೆಕ್ಷನ್ ಎಷ್ಟು?

ಲವ್ ಮಾಕ್ಟೇಲ್ 3 ಸಿನಿಮಾ ಧುರಂಧರ್ 2 ಚಿತ್ರದ ಪೈಪೋಟಿ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರುವ ಈ ಚಿತ್ರ, ಕೌಟುಂಬಿಕ ಪ್ರೇಕ್ಷಕರನ್ನು ಆಕರ್ಷಿಸಿದೆ. ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ್ದರೂ, ದೊಡ್ಡ ಮಟ್ಟದ ಯಶಸ್ಸು ಕಂಡು, ಕನ್ನಡ ಚಿತ್ರರಂಗದಲ್ಲಿ ಗಮನ ಸೆಳೆದಿದೆ.

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಕಲೆಕ್ಷನ್ ಎಷ್ಟು?
ಲವ್ ಮಾಕ್ಟೇಲ್ 3
ರಾಜೇಶ್ ದುಗ್ಗುಮನೆ
|

Updated on: Mar 23, 2026 | 9:01 AM

Share

‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ‘ಧುರಂಧರ್ 2’ ಅಬ್ಬರದ ನಡುವೆಯೂ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಮೊದಲು ಏಪ್ರಿಲ್​​ನಲ್ಲಿ ‘ಲವ್ ಮಾಕ್ಟೇಲ್ 3’ ಸಿನಿಮಾ ರಿಲೀಸ್ ಮಾಡೋದಾಗಿ ಘೋಷಿಸಲಾಗಿತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡ ಬಳಿಕ ಆ ದಿನಾಂಕಕ್ಕೆ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ತರೋದಾಗಿ ಘೋಷಣೆ ಮಾಡಿದರು. ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ ಸಿನಿಮಾ ತೆರೆಗೆ ಬಂದಿದೆ. ಡಾರ್ಲಿಂಗ್ ಕೃಷ್ಣ ನಟನೆಯ ಈ ಸಿನಿಮಾ ಗಮನ ಸೆಳೆದಿದೆ.

ಡಾರ್ಲಿಂಗ್ ಕೃಷ್ಣ ಅವರು ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಸಿನಿಮಾದ ಕಥೆ ಭಾವನಾತ್ಮಕವಾಗಿ ಸಾಗುತ್ತದೆ. ಮೊದಲು ಹಾಗೂ ಎರಡನೇ ಭಾಗಕ್ಕಿಂತ ಚಿತ್ರ ಭಿನ್ನವಾಗಿಯೇ ಮೂಡಿ ಬಂದಿದೆ. ಈ ಸಿನಿಮಾನ ಫ್ಯಾಮಿಲಿ ಆಡಿಯನ್ಸ್ ಇಷ್ಟಪಡುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಧುರಂಧರ್ 2 ಅಬ್ಬರಿಸುತ್ತಿರುವ ಮಧ್ಯೆಯೂ ‘ಲವ್ ಮಾಕ್ಟೇಲ್ 3’ ಸಿನಿಮಾ ಗಮನ ಸೆಳೆದಿದೆ.

sacnilk ವರದಿ ಪ್ರಕಾರ ಮೊದಲ ದಿನ 1.2 ಕೋಟಿ ರೂಪಾಯಿ, ಎರಡನೇ ದಿನ 1 ಕೋಟಿ ರೂಪಾಯಿ, ಶನಿವಾರ ಹಾಗೂ ಭಾನುವಾರ ಅನುಕ್ರಮವಾಗಿ 1.4 ಕೋಟಿ ರೂಪಾಯಿ ಹಾಗೂ 1.76 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಭಾರತದ ಗಳಿಕೆ 5.36 ಕೋಟಿ ರೂಪಾಯಿ ಆಗಿದೆ. ಇನ್ನು, ವಿಶ್ವ ಮಟ್ಟದಲ್ಲಿ 6.23 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು sacnilk ವರದಿ ತಿಳಿಸಿದೆ. ಇಂದು ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದರೆ ಚಿತ್ರ ಗೆದ್ದಂತೆ.

ಇದನ್ನೂ ಓದಿ: ‘ಧುರಂದರ್ 2’ ಚಿತ್ರದ ಎದುರು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಗಳಿಸಿದ್ದೆಷ್ಟು?

‘ಲವ್ ಮಾಕ್ಟೇಲ್ 3’ ಸಿನಿಮಾ ಸಣ್ಣ ಬಜೆಟ್​​ನಲ್ಲಿ ನಿರ್ಮಾಣವಾಗಿದೆ. ಈ ಕಾರಣಕ್ಕೆ ಈಗ ಆಗುತ್ತಿರುವ ಗಳಿಕೆ ನಿರ್ಮಾಪಕರಿಗೆ ಲಾಭವನ್ನೇ ತಂದುಕೊಡುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ, ‘ಧುರಂಧರ್ 2’ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಅಬ್ಬರಿಸುತ್ತಿರುವಾಗ ಈ ಚಿತ್ರದ ಕಲೆಕ್ಷನ್ ಇಷ್ಟು ಉತ್ತಮವಾಗಿ ಆಗಿರೋದು ಖುಷಿ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್