ಅಂತ್ಯಕಂಡ ‘ಲವ್ ಮಾಕ್ಟೇಲ್ 3’ ವಿವಾದ; ಕ್ಷಮೆ ಕೇಳಿ ಪ್ರಕರಣ ಸುಖಾಂತ್ಯ

‘ಲವ್ ಮಾಕ್ಟೇಲ್ 3’ ಚಿತ್ರದ ಕಥೆ ವಿವಾದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯ ಸಿಕ್ಕಿದೆ. ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಆರೋಪಗಳನ್ನು ಕೃಷ್ಣ ಎದುರಿಸಿದ್ದರು. ಸುದ್ದಿಗೋಷ್ಠಿಯಲ್ಲಿ ವೈಯಕ್ತಿಕ ವಿಷಯಗಳನ್ನು ಎಳೆದು ತಂದಿದ್ದಕ್ಕೆ ಕೃಷ್ಣ ಕ್ಷಮೆ ಕೇಳಿದ್ದಾರೆ. ಎರಡೂ ಕಥೆಗಳು ಬೇರೆ ಬೇರೆ ಎಂದು ಸಭೆಯಲ್ಲಿ ತೀರ್ಮಾನಿಸಿ, ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ.

ಅಂತ್ಯಕಂಡ ‘ಲವ್ ಮಾಕ್ಟೇಲ್ 3’ ವಿವಾದ; ಕ್ಷಮೆ ಕೇಳಿ ಪ್ರಕರಣ ಸುಖಾಂತ್ಯ
‘ಲವ್ ಮಾಕ್ಟೇಲ್ 3’ ವಿವಾದ ಸುಖಾಂತ್ಯ

Updated on: Mar 28, 2026 | 9:41 AM

‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರದ ಕಥೆ ನಮ್ಮದು ಎಂದು ಗುರು ದೇಶಪಾಂಡೆ ಆರೋಪ ಮಾಡಿದ್ದರು. ಗುರು ದೇಶಪಾಂಡೆ ಆರೋಪ ಸುಳ್ಳು ಎಂದು ಹೇಳಿದ್ದ ಕೃಷ್ಣ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡೋದಾಗಿಯೂ ಎಚ್ಚರಿಸಿದ್ದು. ಅಲ್ಲದೆ ಸುದ್ದಿಗೋಷ್ಠಿ ವೇಳೆ ಗುರು ಅವರ ವೈಯಕ್ತಿಕ ವಿಷಯಗಳನ್ನು ಎಳೆದು ತಂದಿದ್ದರು. ಈಗ ಈ ವಿವಾದ ಸುಖಾಂತ್ಯವಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭಯೆಲ್ಲಿ ಪ್ರಕರಣ ಇತ್ಯರ್ಥವಾಗಿದೆ.

‘ಲವ್ ಮಾಕ್ಟೇಲ್ 3’ ಸಿನಿಮಾದ ದ್ವಿತೀಯಾರ್ಧದಲ್ಲಿ ಕೋರ್ಟ್ ರೂಂ ವಿಷಯ ಇದೆ. ಈ ಬಗ್ಗೆ ರಾಘವೇಂದ್ರ ನಾಯ್ಕ್ ಹಾಗೂ ಗುರು ದೇಶಪಾಂಡೆ ಅಪಸ್ವರ ತೆಗೆದಿದ್ದರು. ‘ನಾವು ಕೃಷ್ಣಗೆ ಕಥೆ ಹೇಳಿದ್ದೆವು. ಆದರೆ, ಅವರು ಕಥೆ ಒಪ್ಪಿಕೊಳ್ಳಲಿಲ್ಲ. ‘ಲವ್ ಮಾಕ್ಟೇಲ್ 3’ ಸಿನಿಮಾ ನೋಡಿದ ಬಳಿಕ ಕಥೆ ನಮ್ಮದು ಎಂದು ಅನಿಸಿತು’ ಎಂದು ಕೃಷ್ಣ ಹೇಳಿದ್ದರು. ಇಬ್ಬರೂ ವೈಯಕ್ತಿಕ ವಿಷಯಗಳನ್ನು ಇಟ್ಟುಕೊಂಡು ಕಿತ್ತಾಡಿಕೊಂಡಿದ್ದರು. ಆರೋಪ ಪ್ರತ್ಯಾರೋಪ ಬಂತು.

ಮಾರ್ಚ್ 27ರಂದು ಜಯಮಾಲಾ ಅವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಕೃಷ್ಣ, ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಇನ್ನಿತರು ಹಾಜರಿದ್ದರು. ಸಭೆಯಲ್ಲಿ ಎಲ್ಲರೂ ತಮ್ಮ ತಮ್ಮ ವಾದ ಮುಂದಿಟ್ಟಿದ್ದಾರೆ. ವಾದದ ಬಳಿಕ ಪ್ರಕರಣಕ್ಕೆ ಸುಖಾಂತ್ಯ ನೀಡಲಾಗಿದೆ.

ಸುದ್ದಿಗೋಷ್ಠಿ ವೇಳೆ ಕೃಷ್ಣ ಅವರು ಗುರು ದೇಶಪಾಂಡೆ ಅವರ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಿದ್ದರು. ಇದಕ್ಕೆ ಕೃಷ್ಣ ಅವರು ಸಭೆಯಲ್ಲಿ ವೈಯಕ್ತಿಕವಾಗಿ ಕ್ಷಮೆ ಕೇಳಿದರು. ಇಬ್ಬರೂ ಕಥೆಯನ್ನು ಒಂದೇ ಘಟನೆಯಿಂದ ಸ್ಫೂರ್ತಿ ಪಡೆದರೂ, ಇಬ್ಬರ ಚಿತ್ರಕಥೆಯೂ ಬೇರೆ ಬೇರೆ ಎಂಬ ತೀರ್ಮಾನಕ್ಕೆ ಬರಲಾಗಿದೆ. ಈ ಮೂಲಕ ಪ್ರಕರಣವನ್ನು ಸುಖಾಂತ್ಯ ಮಾಡಲಾಗಿದೆ.

ಇದನ್ನೂ ಓದಿ: ‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ

ರಾಘವೇಂದ್ರ ನಾಯ್ಕ್ ಅವರು ‘ಕೂಡಲಸಂಗಮ’ ಹೆಸರಿನ ಸಿನಿಮಾ ಮಾಡಲು ನಿರ್ಧರಿಸಿದ್ದರು. ಈ ಚಿತ್ರದ ಕಥೆ ‘ಲವ್ ಮಾಕ್ಟೇಲ್ 3’ಗೆ ಹೋಲಿಕೆ ಆಗುತ್ತದೆ ಎಂಬುದು ಇವರ ಆರೋಪ ಆಗಿತ್ತು. ಈಗ ವಿವಾದ ಬಗೆಹರಿದಿದ್ದು, ತಾವು ರಚಿಸಿದ ಕಥೆ ಇಟ್ಟುಕೊಂಡು ರಾಘವೇಂದ್ರ ನಾಯ್ಕ್ ಸಿನಿಮಾ ಮಾಡುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:40 am, Sat, 28 March 26

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us