AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮನ್ನಾ ಭೇಟಿ ಮಾಡಿ ಮದುವೆಗೆ ಆಹ್ವಾನಿಸಿದ ಲವ್ ಮಾಕ್ಟೇಲ್ ಜೋಡಿ

ಫೆಬ್ರವರಿ 14 ರಂದು, ಅಂದರೆ ಪ್ರೇಮಿಗಳ ದಿನದಂದು ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಸಪ್ತಪದಿ ತುಳಿಯಲಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ತಮನ್ನಾ ಭೇಟಿ ಮಾಡಿ ಮದುವೆಗೆ ಆಹ್ವಾನಿಸಿದ ಲವ್ ಮಾಕ್ಟೇಲ್ ಜೋಡಿ
ಮಿಲನ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಫೆಬ್ರವರಿ 14ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
Follow us
TV9 Web
| Updated By: ganapathi bhat

Updated on:Apr 06, 2022 | 8:50 PM

ನಟ ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಮಿಲನ ನಾಗರಾಜ್ ಜೋಡಿಯಾಗಿ ನಟಿಸಿದ ಲವ್ ಮಾಕ್ಟೇಲ್ ಚಿತ್ರ ಬಹಳ ಸದ್ದು ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಸಿನಿಮಾದ ಗುಂಗಿನಿಂದ ಇನ್ನೂ ಅನೇಕರು ಹೊರ ಬಂದಿಲ್ಲ. ಲವ್ ಮಾಕ್ಟೇಲ್ ಸಿನಿಮಾ ನಟ ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಮಿಲನ ನಾಗರಾಜ್​ಗೆ ಸಾಕಷ್ಟು ಜನಪ್ರಿಯತೆಯನ್ನೂ ತಂದುಕೊಟ್ಟಿತ್ತು. ಈ ಸಿನಿಮಾದ ಮೂಲಕ ನಟ ಡಾರ್ಲಿಂಗ್ ಕೃಷ್ಣ ಸ್ಯಾಂಡಲ್​ವುಡ್​ನಲ್ಲಿ ಬಹು ಬೇಡಿಕೆಯ ನಟರ ಸಾಲಿಗೆ ಸೇರಿದರು. ಮಿಲನಾ ನಾಗರಾಜ್ ಕೂಡ ತಮ್ಮ ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿ ಬಿಟ್ಟರು.

ಲವ್ ಮಾಕ್ಟೇಲ್ ಯಶಸ್ಸಿನ ನಂತರ ಲವ್ ಮಾಕ್ಟೇಲ್ 2 ಸಿನಿಮಾ ತೆರೆಕಾಣಲು ಸಜ್ಜಾಗುತ್ತಿದೆ. ಇದರ ನಡುವೆಯೇ ಕೃಷ್ಣ ಹಾಗೂ ಮಿಲನ ಅವರು ಫೆಬ್ರವರಿ 14 ರಂದು, ಅಂದರೆ ಪ್ರೇಮಿಗಳ ದಿನದಂದು ಸಪ್ತಪದಿ ತುಳಿಯಲಿದ್ದಾರೆ. ಆ ಮೂಲಕ ತಮ್ಮ ವೈವಾಹಿಕ ಜೀವನಕ್ಕೆ ಪ್ರವೇಶ ಮಾಡಲಿದ್ದಾರೆ. ಪ್ರಸ್ತುತ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೂ ಬಿಡುವು ಮಾಡಿಕೊಂಡು ತಮ್ಮ ಮದುವೆಯ ಆಮಂತ್ರಣವನ್ನು ನಟ-ನಟಿಯರಿಗೆ ಖುದ್ದಾಗಿ ನೀಡುತ್ತಿದ್ದಾರೆ. ಆ ಫೋಟೋಗಳು ಈಗಾಗಲೇ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.

ಇನ್ನೂ ವಿಶೇಷ ಅಂದರೆ, ಲವ್ ಮಾಕ್ಟೇಲ್ ಗೆ ಸಿಕ್ಕ ಯಶಸ್ಸಿನ ಪರಿಣಾಮ ಇದೇ ಸಿನಿಮಾವನ್ನು ಈಗ ತೆಲುಗಿನಲ್ಲಿ ಕೂಡಾ ರಿಮೇಕ್ ಮಾಡಲಾಗುತ್ತಿದೆ. ಹೀಗಾಗಿ, ಸದ್ಯ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ತಮ್ಮ ಲವ್ ಮಾಕ್ಟೇಲ್ ಸಿನಿಮಾದ ತೆಲುಗು ರಿಮೇಕ್​ನಲ್ಲಿ ನಟಿಸುತ್ತಿರುವ ನಟನಟಿಯನ್ನು ಭೇಟಿಯಾಗಿರುವ ಫೋಟೋಗಳು ಎಲ್ಲರ ಗಮನವನ್ನು ಸೆಳೆಯುತ್ತಿದೆ.

ತೆಲುಗಿನಲ್ಲಿ ಲವ್ ಮಾಕ್ಟೇಲ್ ಸಿನಿಮಾ ಚಿತ್ರೀಕರಣ ಈಗಾಗಲೆ ಆರಂಭವಾಗಿದ್ದು, ಈ ಸಿನಿಮಾದಲ್ಲಿ ತೆಲುಗಿನ ನಟ ಸತ್ಯದೇವ್ ಮತ್ತು ಸೌತ್ ಸಿನಿಪ್ರಿಯರ ಫೇವರೇಟ್ ಮಿಲ್ಕಿ ಬ್ಯೂಟಿ ತಮನ್ನಾ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ನಟಿ ತಮನ್ನಾ ಅವರನ್ನು ನಟ ಕೃಷ್ಣ ಹಾಗೂ ನಟಿ ಮಿಲನಾ ಭೇಟಿ ಮಾಡಿದ್ದು ಅವರನ್ನು ಮದುವೆಗೆ ಆಹ್ವಾನ ಮಾಡಿದ್ದಾರೆ. ಈ ಫೋಟೋಗಳನ್ನು ನಟಿ ಮಿಲನಾ ನಾಗರಾಜ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮದುವೆ ಸಿದ್ಧತೆಯಲ್ಲಿರುವ ಲವ್​ ಮಾಕ್ಟೆಲ್​ ಜೋಡಿ ಡಾರ್ಲಿಂಗ್​ ಕೃಷ್ಣ-ಮಿಲನ​ ನಾಗರಾಜ್​ ಬ್ಯಾಚುಲರ್​ ಪಾರ್ಟಿ

Published On - 1:24 pm, Mon, 18 January 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ